Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 5 ವರ್ಷದಲ್ಲಿ ಭಾರತದ 13000 ಉತ್ಪನ್ನ...

5 ವರ್ಷದಲ್ಲಿ ಭಾರತದ 13000 ಉತ್ಪನ್ನ ತಿರಸ್ಕರಿಸಿದ ಅಮೆರಿಕ

ವಾರ್ತಾಭಾರತಿವಾರ್ತಾಭಾರತಿ9 Feb 2016 8:22 AM IST
share
5 ವರ್ಷದಲ್ಲಿ ಭಾರತದ 13000 ಉತ್ಪನ್ನ ತಿರಸ್ಕರಿಸಿದ ಅಮೆರಿಕ

ಬೆಂಗಳೂರು: ಅಮೆರಿಇಕದ ಆಹಾರ ಮತ್ತು ಔಷಧ ಆಡಳಿತ ಸಂಸ್ಥೆ (ಎಫ್‌ಡಿಎ) 2010 ರಿಂದ 2015ರ ಅವಧಿಯಲ್ಲಿ ಭಾರತದಲ್ಲಿ ಉತ್ಪಾದನೆಯಾದ 13334 ವಸ್ತುಗಳನ್ನು ತಿರಸ್ಕರಿಸಿದೆ. ಈ ಅವಧಿಯಲ್ಲಿ ಚೀನಾದಲ್ಲಿ ಉತ್ಪಾದನೆಯಾದ 15,087 ವಸ್ತುಗಳನ್ನೂ ತಿರಸ್ಕರಿಸಿರುವುದು ಅಂಕಿ ಅಂಶಗಳಿಂದ ತಿಳಿದುಬರುತ್ತಿದೆ.


ಕೈಗಾರಿಕಾ ಹಾಗೂ ವಾಣಿಜ್ಯ ಸಚಿವಾಲಯದ ಮಾಹಿತಿ ಪ್ರಕಾರ, ತಿರಸ್ಕೃತ ಉತ್ಪನ್ನಗಳಲ್ಲಿ ಪೇಟೆಂಟ್ ಪಡೆದ ಔಷಧಿಗಳು, ಜೀವರಕ್ಷಕ ಔಷಧಿಗಳು, ತಿಂಡಿ ತಿನಸು, ಬೇಕರಿ ಉತ್ಪನ್ನಗಳು, ಸಾಂಬಾರ, ಸ್ನಾನದ ಸಾಬೂನು ಮತ್ತು ಡಿಟರ್ಜೆಂಟ್‌ಗಳು ಸೇರಿವೆ. ಇದಕ್ಕೆ ನೀಡಿರುವ ಕಾರಣಗಳೆಂದರೆ ಪ್ಯಾಕೇಜಿಂಗ್ ಸಮರ್ಪಕವಾಗಿಲ್ಲ; ಬ್ರಾಂಡಿಂಗ್ ಸರಿ ಇಲ್ಲ; ಕಲಬೆರಕೆ, ಅಧಿಕ ಉಳಿಕೆ ಮಟ್ಟ ಹಾಗೂ ಲೇಬಲಿಂಗ್ ಸಮರ್ಪಕವಾಗಿಲ್ಲದಿರುವುದು.


2016ರ ಜನವರಿಯಲ್ಲಿ ಭಾರತದ 228 ಹಾಗೂ ಚೀನಾದ 314 ಉತ್ಪನ್ನಗಳು ತಿರಸ್ಕೃತವಾಗಿವೆ. ಕೇಂದ್ರ ಸರ್ಕಾರ ಮೇಕ್ ಇನ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿದ್ದರೆ, ಮತ್ತೊಂದು ವರ್ಷ ಭಾರತದ ವಸ್ತುಗಳು ಭಾರಿ ಪ್ರಮಾಣದಲ್ಲಿ ಅಮೆರಿಕದಿಂದ ತಿರಸ್ಕೃತವಾಗುವ ಸಾಧ್ಯತೆ ದಟ್ಟವಾಗಿದೆ. ಜನವರಿ 5ರಂದು ಇಂಟಾಸ್ ಫಾರ್ಮಸೂಟಿಕಲ್ ಹಾಗೂ ಸನೋಫಿ ಇಂಡಿಯಾ ಸಂಸ್ಥೆಯ ಮೂರು ಔಷಧಿಗಳನ್ನು ತಿರಸ್ಕರಿಸಲಾಗಿದೆ. ಇದು ಅಮೆರಿಕದ ನಿಯಂತ್ರಣ ನಿಯಮಾವಳಿಯ 505 ಎ, 801 ಎ-3 ವಿಧಿಗಳಿಗೆ ಅನುಗುಣವಾಗಿಲ್ಲ ಎಂದು ಕಾರಣ ನೀಡಲಾಗಿದೆ.


ಈ ಬಗ್ಗೆ ಬಯೋಕಾನ್ ಸಿಎಂಡಿ ಕಿರಣ್ ಮಜೂಂದಾರ್ ಅವರ ಪ್ರತಿಕ್ರಿಯೆ ಕೇಳಿದಾಗ, ನಿರ್ದಿಷ್ಟ ಪ್ರಕರಣಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲು ಸಾಧ್ಯವಿಲ್ಲ. ಆದರೆ ಮಾಹಿತಿ ಸಮಗ್ರತೆಯಿಂದ ಹಿಡಿದು, ನೈರ್ಮಲ್ಯದ ವರೆಗೆ ಹಲವು ಸಮಸ್ಯೆಗಳಿವೆ. ನಮ್ಮ ಘಟಕಗಳಿಗೆ ನೀಡಿರುವ ಎಚ್ಚರಿಕೆ ಪತ್ರಗಳನ್ನೇ ಗಮನಿಸಿ, ನಿರ್ದಿಷ್ಟ ಕಂಪನಿಯ ಹೆಸರು ಹೇಳಬಯಸುವುದಿಲ್ಲ. ಬೇಕಾಬಿಟ್ಟಿಯಾಗಿ ಉತ್ಪಾದಿಸುವ ಘಟಕಗಳು ಹಲವು ಇವೆ ಎಂದು ಸ್ಪಷ್ಟಪಡಿಸಿದರು.


ಭಾರತೀಯ ರಫ್ತು ಸಂಸ್ಥೆಗಳ ಒಕ್ಕೂಟದ ಸಿಇಓ ಅಜಯ್ ಸಹಾಯ್ ಅವರನ್ನು ಈ ಬಗ್ಗೆ ಪ್ರಶ್ನಿಸಿದಾಗ, ವಿವಿಧ ಕಾರಣಗಳಿಂದ ಕಳೆದ ವರ್ಷವರೆಗೂ ನಮ್ಮ ಕಂಪನಿಗಳು ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರಲಿಲ್ಲ. ಆದರೆ ಜಾಗತಿಕ ಮಾರುಕಟ್ಟೆಯಲ್ಲಿ ಪೈಪೋಟಿ ನಡೆಸಬೇಕಿದ್ದರೆ, ಗುಣಮಟ್ಟಕ್ಕೆ ಗಮನ ಹರಿಸುವುದು ಅಗತ್ಯ. ಈ ನಿಟ್ಟಿನಲ್ಲಿ ಸಮರೋಪಾದಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X