Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಸಿಸಿ ಅಂಡರ್-19 ವಿಶ್ವಕಪ್: ಭಾರತ...

ಐಸಿಸಿ ಅಂಡರ್-19 ವಿಶ್ವಕಪ್: ಭಾರತ ಫೈನಲ್‌ಗೆ;ಮತ್ತೊಮ್ಮೆ ಮಿಂಚಿದ ಸರ್ಫರಾಝ್ ಖಾನ್‌

ವಾರ್ತಾಭಾರತಿವಾರ್ತಾಭಾರತಿ9 Feb 2016 1:05 PM IST
share
ಐಸಿಸಿ ಅಂಡರ್-19 ವಿಶ್ವಕಪ್: ಭಾರತ ಫೈನಲ್‌ಗೆ;ಮತ್ತೊಮ್ಮೆ ಮಿಂಚಿದ ಸರ್ಫರಾಝ್ ಖಾನ್‌

ಮೀರ್ಪುರ, ಫೆ.9: ಐಸಿಸಿ ಅಂಡರ್-19 ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ಮುಂದುವರಿಸಿರುವ ಮೂರು ಬಾರಿಯ ಚಾಂಪಿಯನ್ ಭಾರತ ತಂಡ ಐದನೆ ಬಾರಿ ಫೈನಲ್‌ಗೆ ತಲುಪಿದೆ.
ಮಂಗಳವಾರ ಇಲ್ಲಿ ನಡೆದ ಸೆಮಿಫೈನಲ್‌ನಲ್ಲಿ ರಾಹುಲ್ ದ್ರಾವಿಡ್ ಕೋಚಿಂಗ್‌ನಲ್ಲಿ ಪಳಗಿರುವ ಭಾರತದ ಜೂನಿಯರ್ ತಂಡ ಶ್ರೀಲಂಕಾವನ್ನು 97 ರನ್‌ಗಳ ಅಂತರದಿಂದ ಮಣಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿತು. ಫೆ.14 ರಂದು ನಡೆಯಲಿರುವ ಫೈನಲ್‌ನಲ್ಲಿ ವೆಸ್ಟ್‌ಇಂಡೀಸ್ ಅಥವಾ ಆತಿಥೇಯ ಬಾಂಗ್ಲಾದೇಶವನ್ನು ಎದುರಿಸಲಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ಕಳಪೆ ಆರಂಭದ ಹೊರತಾಗಿಯೂ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 267 ರನ್ ಗಳಿಸಲು ಸಮರ್ಥವಾಯಿತು. ಗೆಲುವಿಗೆ ಕಠಿಣ ಸವಾಲು ಪಡೆದ ಶ್ರೀಲಂಕಾ 42.4 ಓವರ್‌ಗಳಲ್ಲಿ 170 ರನ್‌ಗೆ ಆಲೌಟಾಯಿತು.
ಟೂರ್ನಿಯಲ್ಲಿ ಆಡಿರುವ ಐದನೆ ಇನಿಂಗ್ಸ್‌ನಲ್ಲಿ ನಾಲ್ಕನೆ ಬಾರಿ ಫಿಫ್ಟಿ ಪ್ಲಸ್ ಸ್ಕೋರ್ ದಾಖಲಿಸಿದ ಸರ್ಫರಾಝ್ ಖಾನ್‌(59 ರನ್, 71 ಎಸೆತ) ಹಾಗೂ ಅನ್ಮೋಲ್‌ಪ್ರೀತ್ ಸಿಂಗ್(72 ರನ್, 92 ಎಸೆತ) ಭಾರತದ ಬ್ಯಾಟಿಂಗ್ ಸ್ಟಾರ್‌ಗಳಾಗಿ ಮೂಡಿ ಬಂದರು.
ಬೆಳಗ್ಗಿನ ಮೋಡ ಕವಿದ ವಾತಾವರಣದಲ್ಲಿ ಬ್ಯಾಟಿಂಗ್‌ಗೆ ಆಹ್ವಾನಿಸಲ್ಪಟ್ಟ ಭಾರತ ಫಾರ್ಮ್‌ನಲ್ಲಿರುವ ಆರಂಭಿಕ ಆಟಗಾರರಾದ ರಿಷಭ್ ಪಂತ್(14) ಹಾಗೂ ನಾಯಕ ಐಶಾನ್ ಕಿಶನ್‌ರನ್ನು(7) ಅಲ್ಪ ಮೊತ್ತಕ್ಕೆ ಕಳೆದುಕೊಂಡಿತು. ಆಗ ಭಾರತ 27 ರನ್‌ಗೆ 2 ವಿಕೆಟ್ ಕಳೆದುಕೊಂಡಿತು.

ಆಗ ಜೊತೆಯಾದ ಅನ್ಮೋಲ್ ಪ್ರೀತ್ ಹಾಗೂ ಸರ್ಫರಾಝ್ ಖಾನ್‌ ಮೂರನೆ ವಿಕೆಟ್‌ಗೆ 96 ರನ್ ಸೇರಿಸಿ ತಂಡವನ್ನು ಆಧರಿಸಿದರು. ಅನ್ಮೋಲ್ ಅಗ್ರ ಸ್ಕೋರರ್ (72 ರನ್, 92 ಎಸೆತ, 6 ಬೌಂಡರಿ, 1 ಸಿಕ್ಸರ್)ಎನಿಸಿಕೊಂಡರು. 18ರ ಹರೆಯದ ಮುಂಬೈ ಬ್ಯಾಟ್ಸ್‌ಮನ್ ಸರ್ಫ್‌ರಾಝ್ ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ಮುಂದುವರಿಸಿದರು. ಈಗಾಗಲೇ 76, ಔಟಾಗದೆ 21, 74 ಹಾಗೂ 74 ರನ್ ಗಳಿಸಿದ್ದ ಪವರ್-ಹಿಟ್ಟರ್ ಸರ್ಫ್‌ರಾಝ್ ಮಂಗಳವಾರದ ಸೆಮಿಫೈನಲ್‌ನಲ್ಲಿ 71 ಎಸೆತಗಳನ್ನು ಎದುರಿಸಿ 6 ಬೌಂಡರಿ, 1 ಸಿಕ್ಸರ್‌ಗಳ ಸಹಿತ 59 ರನ್ ಬಾರಿಸಿದರು.
ಸರ್ಫ್‌ರಾಝ್ ಔಟಾದ ನಂತರ ವಿ. ಸುಂದರ್(43 ರನ್, 45 ಎಸೆತ) ಅವರೊಂದಿಗೆ ಇನಿಂಗ್ಸ್ ಬೆಳೆಸಿದ ಅನ್ಮೋಲ್ ಉಪಯುಕ್ತ 70 ರನ್ ಜೊತೆಯಾಟ ನಡೆಸಿದರು.
 ಕೊನೆಯ 10 ಓವರ್‌ಗಳಲ್ಲಿ ಸುಂದರ್, ಅರ್ಮಾನ್ ಜಾಫರ್(29 ರನ್, 16 ಎಸೆತ) ಹಾಗೂ ಮಯಾಂಕ್ ದಾಗಾರ್(17 ರನ್, 10 ಎಸೆತ) ಸಂದರ್ಭೋಚಿತವಾಗಿ ಬ್ಯಾಟಿಂಗ್ ಬೀಸುವ ಮೂಲಕ ಭಾರತ ಸ್ಪರ್ಧಾತ್ಮಕ ಸ್ಕೋರ್ ಗಳಿಸಲು ನೆರವಾದರು.
ಗೆಲ್ಲಲು ಕಠಿಣ ಸವಾಲು ಪಡೆದ ಶ್ರೀಲಂಕಾ ದಾಂಡಿಗರಿಗೆ ಎಡಗೈ ಸ್ಪಿನ್ನರ್ ದಾಗಾರ್ (3-21)ನೇತೃತ್ವದ ಭಾರತದ ಬೌಲರ್‌ಗಳು ಸವಾಲಾಗಿ ಪರಿಣಮಿಸಿದರು. ಟೂರ್ನಿಯಲ್ಲಿ ಗರಿಷ್ಠ ವಿಕೆಟ್‌ಗಳನ್ನು ಪಡೆದಿರುವ ವೇಗದ ಬೌಲರ್ ಆವೇಶ್‌ಖಾನ್(2-41) ಮೊದಲ ಓವರ್‌ನಲ್ಲಿ ಅವಿಷ್ಕಾ ಫೆರ್ನಾಂಡೊ ವಿಕೆಟ್ ಉರುಳಿಸಿ ಶ್ರೀಲಂಕಾಕ್ಕೆ ಶಾಕ್ ನೀಡಿದರು.
ನಿರಂತರವಾಗಿ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಾ ಸಾಗಿದ ಶ್ರೀಲಂಕಾ 35ನೆ ಓವರ್‌ಗಳಲ್ಲಿ 133 ರನ್‌ಗೆ 6 ವಿಕೆಟ್ ಕಳೆದುಕೊಂಡಿತ್ತು. ಎರಡನೆ ಬಾರಿ ಫೈನಲ್‌ಗೆ ತಲುಪುವ ಅವಕಾಶವನ್ನು ಕೈಚೆಲ್ಲಿತು. ಕಮಿಂಡು ಮೆಂಡಿಸ್(39) ಹಾಗೂ ಶಮ್ಮು ಅಶಾನ್(38) ಲಂಕಾದ ಪರ ಎರಡಂಕೆ ಸ್ಕೋರ್ ದಾಖಲಿಸಿದರು.
ಸಂಕ್ಷಿಪ್ತ ಸ್ಕೋರ್
ಭಾರತ ಅಂಡರ್-19 ತಂಡ: 50 ಓವರ್‌ಗಳಲ್ಲಿ 267/9
(ಅನ್ಮೋಲ್‌ಪ್ರೀತ್ ಸಿಂಗ್ 72, ಎಸ್‌ಎನ್ ಖಾನ್ 59, ವಿ. ಸುಂದರ್ 43, ಫೆರ್ನಾಂಡೊ(4-43), ಕುಮಾರ 2-50, ನಿಮೇಶ್ 2-50)
ಶ್ರೀಲಂಕಾ ಅಂಡರ್-19 ತಂಡ: 42.4 ಓವರ್‌ಗಳಲ್ಲಿ 170 ರನ್‌ಗೆ ಆಲೌಟ್
(ಕಮಿಂಡು ಮೆಂಡಿಸ್ 39, ಶಮ್ಮು ಅಶಾನ್ 38, ಮಯಾಂಕ್ ದಾಗಾರ್ 3-21, ಆವೇಶ್ ಖಾನ್ 2-41)
ಪಂದ್ಯಶ್ರೇಷ್ಠ: ಅನ್ಮೋಲ್‌ಪ್ರೀತ್ ಸಿಂಗ್.
..........

share
ವಾರ್ತಾಭಾರತಿ
ವಾರ್ತಾಭಾರತಿ
Next Story
X