Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾಲಾ ಬಾಲಕನನ್ನು ಥಳಿಸಿ "ಕೊಂದ"...

ಶಾಲಾ ಬಾಲಕನನ್ನು ಥಳಿಸಿ "ಕೊಂದ" ಮುಖ್ಯೋಪಾಧ್ಯಾಯ

ವಾರ್ತಾಭಾರತಿವಾರ್ತಾಭಾರತಿ9 Feb 2016 9:25 PM IST
share
ಶಾಲಾ ಬಾಲಕನನ್ನು ಥಳಿಸಿ ಕೊಂದ ಮುಖ್ಯೋಪಾಧ್ಯಾಯ

ಕೊಲ್ಕತ್ತಾ ,ಫೆ.9 : ಅನುಮತಿಯಿಲ್ಲದೆ ತನ್ನ ಹೆತ್ತವರನ್ನು ಭೇಟಿಯಾಗಲು ಶಾಲಾ ಆವರಣದಿಂದ ಹೊರಗೆ ಹೋಗಿದ್ದಕ್ಕೆ ವಸತಿ ಶಾಲೆಯೊಂದರ ಮುಖ್ಯೋಪಾಧ್ಯಾ ೧೪ ವರ್ಷದ ಬಾಲಕನನ್ನು ಥಳಿಸಿದ ಪರಿಣಾಮ ಬಾಲಕ ಮೃತನಾದ ದಾರುಣ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದಿದೆ. 

ಸ್ಥಳೀಯ ಆಸ್ಪತ್ರೆಗೆ ತಂದಾಗ ಬಾಲಕ ಶಮೀಮ್ ಮಲಿಕ್ ನ ಪ್ರಾಣ ಪಕ್ಷಿ ಹಾರಿ ಹೋಗಿದೆ ಎಂದು ಆಸ್ಪತ್ರೆಯಲ್ಲಿ ಘೋಸಿಸಲಾಯಿತು. ಪೊಲೀಸರು ಮುರ್ಷಿದಾಬಾದ್ ನ ಕುಗ್ರಾಮ ಮಜ್ಲಿಸ್ ಪುರದ ಅಲ ಇಸ್ಲಾಮಿಯ ಮಿಶನ್ ಶಾಲೆಯ ಮುಖ್ಯೋಪಾಧ್ಯಾಯ ಹಾಗು ಮಾಲಕನನ್ನು ಬಂಧಿಸಿದ್ದಾರೆ. 

" ಆತ ನಮ್ಮ ಒಬ್ಬನೇ ಮಗ. ಸರಕಾರೀ ಶಾಲೆಗೇ ಹೋಗುತ್ತಿದ್ದ ಆತನನ್ನು ಚೆನ್ನಾಗಿ ಕಲಿಯಲಿ ಎಂಬ ಕಾರಣಕ್ಕೆ ಈ ಖಾಸಗಿ ವಸತಿ ಶಾಲೆಗೆ ಸೇರಿಸಿದ್ದೆವು. ಆದರೆ ಅವರು ಆತನನ್ನು ಕೊಂದೇ ಬಿಟ್ಟರು. ಅಪರಾಧಿಗಳಿಗೆ ಗಲ್ಲು ಶಿಕ್ಷೆಯಾಗಬೇಕು" ಎಂದು ಪುತ್ರನನ್ನು ಕಳೆದುಕೊಂಡ ದುಖ: ಭರಿಸಲಾಗದೆ ಗೋಳಾಡುತ್ತಿದ್ದ ತಾಯಿ ಶಮೀಮ ಬೀಬಿ ಆಗ್ರಹಿಸಿದ್ದಾರೆ.

ಮೃತನ ಹೆತ್ತವರು ಸೋಮವಾರ ಸಂಜೆ ಆತನನ್ನು ಭೇಟಿಯಾಗಲು ಶಾಲೆಗೆ ಹೋಗಿದ್ದರು. ಆಗ ಅವರನ್ನು ಮಾತನಾಡಿಸಲು ಶಮೀಮ್ ಶಾಲೆಯ ಆವರಣದಿಂದ ಹೊರ ಬಂದ. ಅನುಮತಿಯಿಲ್ಲದೆ ಹೊರಗೆ ಬಂದಿದ್ದರಿಂದ ಕೆರಳಿದ ಶಾಲಾ ಮುಖ್ಯೋಪಾಧ್ಯಾಯ ಆತನಿಗೆ ಥಳಿಸಿದ್ದಾರೆ. 

" ಶಾಲೆಯ ಆಡಳಿತ ನಮಗೆ ಏನನ್ನು ತಿಳಿಸಿಲ್ಲ. ಮಧ್ಯರಾತ್ರಿ ನಮಗೆ ಆಸ್ಪತ್ರೆಯಿಂದ ದೂರವಾಣಿ ಕರೆ ಮಾಡಿದರು. ಆಗ ಶಾಲೆಗೆ ಕರೆ ಮಾಡಿ ಕೇಳಿದಾಗ ಶಾಲೆಯಲ್ಲಿ ಕಲಿಯುತ್ತಿರುವಾಗ ನಮ್ಮ ಮಗ ಅಸ್ವಸ್ಥನಾದ ಎಂದು ತಿಳಿಸಿದರು" ಎಂದು ಮೃತನ ತಂದೆ ಜುಗ್ನು ಮಲ್ಲಿಕ್ ಹೇಳಿದ್ದಾರೆ. 

ಘಟನೆಯಿಂದ ಪ್ರತಿಭಟನೆ ಭುಗಿಲೆದ್ದಿದ್ದು ಗ್ರಾಮಸ್ಥರು ರಾಜ್ಯ ಹೆದ್ದಾರಿಯನ್ನು ತಡೆದು ಪೊಲೀಸರೊಂದಿಗೆ ಘರ್ಷಣೆಗೆ ಇಳಿದರು. ಶಾಲೆಯ ಹೆಚ್ಚಿನ ಶಿಕ್ಷಕರು ತಲೆ ಮರೆಸಿಕೊಂಡಿದ್ದಾರೆ. 

ಕಳೆದ ಕೆಲವು ವಾರಗಳಲ್ಲಿ ಶಾಲೆಯಲ್ಲಿ ವಿದ್ಯಾರ್ಥಿಗಳು ಸಾವಿಗೀಡಾಗುತ್ತಿರುವ ಮೂರನೇ ಘಟನೆ ಇದಾಗಿದೆ. ಕಳೆದ ವಾರ ರಾಚಿಯ ಶಾಲೆಯೊಂದರಲ್ಲಿ ೧೨ ವರ್ಷದ ಹುಡುಗನೊಬ್ಬ  ತಲೆ ಬುರುಡೆ ಮುರಿತ ಹಾಗು ಅಂಗಾಂಗಗಳಿಗೆ ಗಾಯಗಳಾಗಿ ಕೊಲೆಯಾಗಿ ಪತ್ತೆಯಾಗಿದ್ದ. ದೆಹಲಿಯ ರಯಾನ್ ಇಂಟರ್ನ್ಯಾಷನಲ್ ಶಾಲೆಯ ನೀರಿನ ಟ್ಯಾಂಕ್ ನಲ್ಲಿ ೬ ವರ್ಷದ ಬಾಲಕನೊಬ್ಬ ಮುಳುಗಿ ಮೃತಪಟ್ಟಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X