Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೀಗೊಂದು ರಾಜಕೀಯ ಪ್ರಹಸನ....! ...

ಹೀಗೊಂದು ರಾಜಕೀಯ ಪ್ರಹಸನ....! ಪಕ್ಷಕ್ಕೆ ಬರಮಾಡಿಕೊಂಡರು, ಬಳಿಕ ದಿಕ್ಕರಿಸಿದರು

ವಾರ್ತಾಭಾರತಿವಾರ್ತಾಭಾರತಿ11 Feb 2016 4:51 PM IST
share
ಹೀಗೊಂದು ರಾಜಕೀಯ ಪ್ರಹಸನ....!  ಪಕ್ಷಕ್ಕೆ ಬರಮಾಡಿಕೊಂಡರು, ಬಳಿಕ ದಿಕ್ಕರಿಸಿದರು

ಕಾರ್ಕಳ : ಪಕ್ಷಕ್ಕೆ ಅಗತ್ಯವಿದೆ ಎಂದು ಬರಮಾಡಿಕೊಂಡವರು. ಅನಗತ್ಯ ಎಂದಾಗ ದಿಕ್ಕರಿಸಿ ಬಿಟ್ಟರು. ಇದು ಕಾರ್ಕಳ ಕಾಂಗ್ರೆಸ್‌ನಲ್ಲಿ ಕಳೆದ ಹತ್ತೆ ದಿನಗಳಲ್ಲಿ ಚರ್ಚೆಗೆ ದಾರಿ ಮಾಡಿಕೊಟ್ಟ ರಾಜಕೀಯ ಪ್ರಹಸನ...!

ಹಿರ್ಗಾನ ಗ್ರಾ.ಪಂ.ಸದಸ್ಯೆಯಾಗಿ, ಒಂದು ಅವಧಿಗೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ರತ್ನಾವತಿ ನಾಯಕ್ ಹಿರಿಯ ರಾಜಕೀಯ ಧುರೀಣೆ. ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಆಕೆ, ಕಳೆದ ಗ್ರಾ.ಪಂ.ಚುನಾವಣೆಯಲ್ಲಿ ತಟಸ್ಥರಾಗಿದ್ದರು. ಈ ಹಿಂದಿನ ಮೊದಲ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಅವರು, ಎರಡನೇ ಅವಧಿಯಲ್ಲಿ ಸಾಮಾನ್ಯ ಮಹಿಳೆ ಮೀಸಲಾತಿ ಲಭಿಸಿದ್ದ ಹಿನ್ನೆಲೆಯಲ್ಲಿ ಗ್ರಾ.ಪಂ.ನ ಎರಡನೇ ಅವಧಿಯಲ್ಲೂ ತನಗೆ ಅಧ್ಯಕ್ಷಗಾದಿ ನೀಡಬೇಕೆನ್ನುವ ಬೇಡಿಕೆಯನ್ನು ಬಿಜೆಪಿ ಹೈಕಮಾಂಡ್ ಮುಂದಿಟ್ಟಿದ್ದರು. ಆದರೆ ಅನ್ಯರಿಗೆ ಅವಕಾಶ ನೀಡುವ ಮೂಲಕ ಬಿಜೆಪಿ ಹೈಕಮಾಂಡ್ ರೇವತಿ ಶೆಟ್ಟಿ ಅವರನ್ನು ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಗೊಳಿಸಿತು. ಇದು ರತ್ನಾವತಿ ನಾಯಕ್ ಅವರ ಅಸಮಾಧಾನಕ್ಕೂ ಕಾರಣವಾಗಿತ್ತು. ಪ್ರಸ್ತುತ ಬಿಜೆಪಿಯಿಂದ ದೂರವೇ ಉಳಿದಿರುವ ರತ್ನಾವತಿ ನಾಯಕ್ ಅವರನ್ನು ಕಾಂಗ್ರೆಸ್ ಪಕ್ಷವು ಬರ ಮಾಡಿಕೊಂಡಿತ್ತು. ಪಕ್ಷದ ಧ್ವಜವನ್ನು ನೀಡಿ ಅಧೀಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆಗೊಳಿಸಿತ್ತು. ಬಳಿಕ ಹಿರ್ಗಾನ ತಾ.ಪಂ.ಕ್ಷೇತ್ರದ ಸಾಮಾನ್ಯ ಮಹಿಳೆ ಮೀಸಲಾತಿಯನ್ವಯ ರತ್ನಾವತಿ ನಾಯಕ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಸುವ ತೀರ್ಮಾನವೂ ಕೈಗೊಂಡಿತ್ತು. ಅಂತೆಯೇ ರತ್ನಾವತಿ ನಾಯಕ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂದು ಪ್ರಚಾರ ಕಾರ್ಯವನ್ನು ಕೈಗೆತ್ತಿಕೊಂಡಿದ್ದರು. ಮತ ಯಾಚಿಸುತ್ತಾ ಒಂದು ಸುತ್ತು ಹಿರ್ಗಾನ ತಾ.ಪಂ.ಕ್ಷೇತ್ರವನ್ನು ಸುತ್ತಿದ್ದರು. ಆದರೆ ಕಾಂಗ್ರೆಸ್ ಕೊನೆಯ ಕ್ಷಣದಲ್ಲಿ ನಡೆಸಿದ ದಿಢೀರ್ ಬದಲಾವಣೆಯಿಂದಾಗಿ ಆ ಸ್ಥಾನಕ್ಕೆ ಗ್ರಾ.ಪಂ.ಉಪಾಧ್ಯಕ್ಷೆ ಲೀಲಾವತಿ ನಾಯಕ್ ಕಣಕ್ಕಿಳಿಸಿತ್ತು. ರತ್ನಾವತಿ ನಾಯಕ್ ಅವರಿಗೆ ಕೈಕೊಟ್ಟಿತ್ತು. ಇದೀಗ ರತ್ನಾವತಿ ನಾಯಕ್ ಅತ್ತಾವೂ ಇಲ್ಲ, ಇತ್ತಾವೂ ಇಲ್ಲ ಎನ್ನುವ ಸ್ಥಿತಿ ಅವರದ್ದಾಗಿದೆ. ಮಾತೃಪಕ್ಷದಲ್ಲೇ ತಾನು ಗುರುತಿಸಿಕೊಳ್ಳುವುದಾಗಿ ಹೇಳಿಕೊಂಡ ಅವರು ಸೇರ್ಪಡೆಗೊಂಡ ಹತ್ತೆ ದಿನದಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಬಿಜೆಪಿಗೆ ಬೆಂಬಲ :

ಕಾಂಗ್ರೆಸ್ ಒಂದು ಕಸದ ಬುಟ್ಟಿ. ಅಲ್ಲಿ ಎಲ್ಲರನ್ನು ಬುಟ್ಟಿಗೆ ಬೀಸಾಡುತ್ತದೆ. ಬುಟ್ಟಿಗೆ ಬೀಸಾಡಿದ ಬಳಿಕ ಮತ್ತೆ ಎತ್ತಿ ತರುವ ಕೆಲಸವಾಗುವುದಿಲ್ಲ. ಸದ್ಯಕ್ಕೆ ನಾನು ಮನೆಯಲ್ಲಿದ್ದೇನೆ. ಈ ಬಾರಿಯ ತಾ.ಪಂ ಮತ್ತು ಜಿ.ಪಂ.ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಲು ನಿರ್ಧರಿಸಿದ್ದೇನೆ. ಆದರೆ ಕಾಂಗ್ರೆಸ್‌ನಿಂದ ಬಿಜೆಪಿ ಎಷ್ಟೋ ವಾಸಿ ಎನ್ನುತ್ತಾರೆ ರಾಜಕೀಯದಲ್ಲಿ ನೊಂದಿರುವ ರತ್ನಾವತಿ ನಾಯಕ್ ಹಿರ್ಗಾನ. ಕಾಂಗ್ರೆಸ್ ಸೇರ್ಪಡೆ ಸಂದರ್ಭ ಸೀಟಿನ ಅಪೇಕ್ಷೆ ಮುಂದಿಟ್ಟಿಲ್ಲ. ಆದರೆ ಕಾಂಗ್ರೆಸ್ ಸೀಟು ನೀಡುವ ಭರವಸೆ ನೀಡಿ ಕೊನೆಯ ಕ್ಷಣದಲ್ಲಿ ಕೈಕೊಟ್ಟಿದೆ. ಹಾಗಾಗಿ....ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ ಎನ್ನುತ್ತಾರೆ ಅವರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X