ಸುಭಾಷ್ನಗರ : ಜಂತುಹುಳ ನಿವಾರಣಾ ಮಾತ್ರೆ ವಿತರಣೆ

ಮೂಡುಬಿದಿರೆ : ಇಲ್ಲಿಗೆ ಸಮೀಪದ ಸುಭಾಷ್ನಗರ ಪುಚ್ಚೇರಿಕಟ್ಟೆ ಅಂಗನವಾಡಿ ಕೇಂದ್ರ ಮತ್ತು ಕಿರಿಯ ಪ್ರಾಥಮಿಕ ಶಾಲೆ ಸುಭಾಷ್ ನಗರ ಇವುಗಳ ಜಂಟಿ ಆಶ್ರಯದಲ್ಲಿ 1-19 ವಯಸಿನೊಳಗಿನ ಮಕ್ಕಳಿಗೆ ಜಂತುಹುಳ ನಿವಾರಣೆಯ ಮಾತ್ರೆಯನ್ನು ಬುಧವಾರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಸುರೇಂದ್ರ ಪೂಜಾರಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯ ಇಬ್ರಾಹಿಂ, ಅಂಗನವಾಡಿ ಕಾರ್ಯಕರ್ತೆ ವಿಜಯಾ, ಸಹಾಯಕಿ ರಾಜಶ್ರೀ ಈ ಸಂದರ್ಭದಲ್ಲಿದ್ದರು.
Next Story





