Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ದೇವಸ್ಥಾನದ ಬಳಿ ನಾಲ್ಕು...

ಉಡುಪಿ: ದೇವಸ್ಥಾನದ ಬಳಿ ನಾಲ್ಕು ಹೆಬ್ಬಾವು ಪ್ರತ್ಯಕ್ಷ!

ವಾರ್ತಾಭಾರತಿವಾರ್ತಾಭಾರತಿ11 Feb 2016 11:56 PM IST
share
ಉಡುಪಿ: ದೇವಸ್ಥಾನದ ಬಳಿ ನಾಲ್ಕು ಹೆಬ್ಬಾವು ಪ್ರತ್ಯಕ್ಷ!

ಉಡುಪಿ, ಫೆ.11: ಇಲ್ಲಿಗೆ ಸಮೀಪದ ಪುತ್ತೂರು ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ಬಳಿ ಗುರುವಾರ ಅಪರಾಹ್ನ ಖಾಸಗಿ ಜಾಗವೊಂದರಲ್ಲಿ ನಾಲ್ಕು ಹೆಬ್ಬಾವುಗಳನ್ನು ಕಂಡು ಪರಿಸರದ ಜನತೆ ದಿಗ್ಭ್ರಮೆಗೊಳಗಾಗಿದ್ದು, ಕೊನೆಗೆ ಉರಗ ತಜ್ಞರು ಬಂದು ಅವುಗಳನ್ನು ಹಿಡಿದು ಜನರ ಆತಂಕವನ್ನು ದೂರ ಮಾಡಿದ್ದಾರೆ. ಪುತ್ತೂರು ಎಲ್‌ವಿಟಿ ದೇವಸ್ಥಾನದ ಬಳಿ ಸುಮಾರು 3.5 ಎಕರೆ ಖಾಸಗಿ ಜಮೀನನ್ನು ಜೆಸಿಬಿ ಮೂಲಕ ಇಂದು ಸಮತಟ್ಟು ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿ ಒಂದು ಹೆಬ್ಬಾವಿಗೆ ಏಟಾಗಿದ್ದು ಅದು ಹೊರ ಬಂದಿದೆ. ಹೆಬ್ಬಾವು ಕಂಡು ಜೆಸಿಬಿ ಚಾಲಕ ಜೆಸಿಬಿಯನ್ನು ನಿಲ್ಲಿಸಿದ್ದಾನೆ. ಏಟು ಬಿದ್ದ ಹೆಬ್ಬಾವು ಪೊದೆಗಳತ್ತ ಓಡಿಹೋಗಿತ್ತು.

 ಇದಾದ ಸ್ವಲ್ಪವೇ ಹೊತ್ತಿಗೆ ಇನ್ನೊಂದು ಹೆಬ್ಬಾವು ಹೊರಬಂದಿದ್ದು, ಇದು ಪೊದೆಗಳ ಮರೆಗೆ ಹೋಗುವಾಗ ಮತ್ತೊಂದು ಹೆಬ್ಬಾವು ಕಂಡಿದೆ. ಇಷ್ಟರಲ್ಲೇ ಭಯಭೀತರಾದ ಸ್ಥಳೀಯರು ಪರಿಸರದ ಖ್ಯಾತ ಉರಗತಜ್ಞ ಗುರುರಾಜ ಸನಿಲ್‌ಗೆ ದೂರವಾಣಿ ಕರೆ ಮಾಡಿದ್ದು, ಗುರುರಾಜ್ ಜನರಿಗೆ ಧೈರ್ಯ ತುಂಬುವ ಪ್ರಯತ್ನ ಮಾಡಿ, ಅವುಗಳು ತಮ್ಮಷ್ಟಕ್ಕೆ ಹೊರಟು ಹೋಗುತ್ತವೆ ಎನ್ನುತಿದ್ದಾಗಲೇ ನಾಲ್ಕನೇ ಹೆಬ್ಬಾವು ಕಾಣಿಸಿಕೊಂಡಿದೆ. ಹೀಗೆ ಒಂದರ ಹಿಂದೆ ಒಂದರಂತೆ ನಾಲ್ಕು ಹೆಬ್ಬಾವುಗಳ ಮೆರವಣಿಗೆಯನ್ನು ಕಂಡು ನೆರೆದಿದ್ದ ಜನ ಆತಂಕಕ್ಕೊಳಗಾಗಿದ್ದಾರೆ. ಸ್ಥಳಕ್ಕೆ ಬರುವಂತೆ ಗುರುರಾಜ್ ಸನಿಲ್‌ಗೆ ಒತ್ತಾಯಿಸಿದ್ದು, ಗುರುರಾಜ್ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆಯ ದೇವರಾಜ ಪಾಣ, ಸಿಬ್ಬಂದಿ ಮತ್ತು ಗುರುರಾಜ್ ಸ್ಥಳಕ್ಕೆ ಆಗಮಿಸಿದರು.
ಸಮತಟ್ಟುಗೊಂಡಿರುವ ಪ್ರದೇಶ ಬಿಟ್ಟು ಪಕ್ಕದ ಪೊದೆಗಳಲ್ಲಿ ಬೇರೆ ಬೇರೆ ಕಡೆ ಅಡಗಿ ಕುಳಿತಿದ್ದ ನಾಲ್ಕು ಹೆಬ್ಬಾವುಗಳನ್ನು ಗುರುರಾಜ್ ಹಿಡಿದಿದ್ದು, ಸ್ಥಳೀಯರಾದ ಅನಿಲ್, ರಾಘವೇಂದ್ರ ಭಟ್, ಪ್ರದೀಪ್, ವಿಜಯ ತೆಂಡೂಲ್ಕರ್, ನಂದ ಪೂಜಾರಿ ಮುಂತಾದವರು ಅವರಿಗೆ ಸಹಕರಿಸಿದರು.
ಹಿಡಿದ ಎಲ್ಲಾ ಹಾವುಗಳನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X