Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಪಿಎಲ್ ಫಿಕ್ಸಿಂಗ್: ಪಾಕ್ ಅಂಪೈರ್...

ಐಪಿಎಲ್ ಫಿಕ್ಸಿಂಗ್: ಪಾಕ್ ಅಂಪೈರ್ ರವೂಫ್‌ಗೆ ಬಿಸಿಸಿಐ ನಿಷೇಧ

ವಾರ್ತಾಭಾರತಿವಾರ್ತಾಭಾರತಿ12 Feb 2016 6:13 PM IST
share
ಐಪಿಎಲ್ ಫಿಕ್ಸಿಂಗ್: ಪಾಕ್ ಅಂಪೈರ್ ರವೂಫ್‌ಗೆ ಬಿಸಿಸಿಐ ನಿಷೇಧ

ಮುಂಬೈ, ಫೆ.12: ಐಪಿಎಲ್ ಟೂರ್ನಿಯಲ್ಲಿ ಭ್ರಷ್ಟಾಚಾರ ಚಟುವಟಿಕೆಗಳಲ್ಲಿ ಭಾಗಿಯಾಗಿ ಕ್ರಿಕೆಟ್‌ನ ಘನತೆಗೆ ಧಕ್ಕೆ ತಂದ ಆರೋಪದಲ್ಲಿ ಪಾಕಿಸ್ತಾನದ ಕಳಂಕಿತ ಅಂಪೈರ್ ಅಸದ್ ರವೂಫ್‌ಗೆ ಬಿಸಿಸಿಐ ಐದು ವರ್ಷಗಳ ಕಾಲ ನಿಷೇಧ ಹೇರಿದೆ.

ಐಸಿಸಿ ಎಲೈಟ್ ಪ್ಯಾನಲ್‌ನಲ್ಲಿದ್ದ, ಹಲವಾರು ಟೆಸ್ಟ್ ಪಂದ್ಯಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸಿದ್ದ 59ರ ಹರೆಯದ ರವೂಫ್ 2013ರ ಆವೃತ್ತಿಯ ಐಪಿಎಲ್ ಟೂರ್ನಿಯ ವೇಳೆ ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸಿದ್ದಲ್ಲದೆ, ಬುಕ್ಕಿಗಳಿಂದ ದುಬಾರಿ ಬೆಲೆಯ ಉಡುಗೊರೆಗಳನ್ನು ಸ್ವೀಕರಿಸಿದ್ದ ಆರೋಪ ಎದುರಿಸುತ್ತಿದ್ದಾರೆ.

ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್, ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ನಿರಂಜನ್ ಶಾ ಅವರಿದ್ದ ಬಿಸಿಸಿಐನ ಶಿಸ್ತು ಸಮಿತಿ ಶುಕ್ರವಾರ ಪಾಕ್ ಅಂಪೈರ್ ರವೂಫ್‌ಗೆ ನಿಷೇಧ ವಿಧಿಸುವ ತೀರ್ಮಾನ ಕೈಗೊಂಡಿದೆ.

ರವೂಫ್ ವಿರುದ್ಧ ಫಿಕ್ಸಿಂಗ್ ಆರೋಪ ಕೇಳಿ ಬಂದ ತಕ್ಷಣ ಪಾಕಿಸ್ತಾನವು ಐಸಿಸಿ ಎಲೈಟ್ ಪ್ಯಾನಲ್‌ನಿಂದ ರವೂಫ್ ಹೆಸರನ್ನು ಹಿಂದಕ್ಕೆ ಪಡೆದುಕೊಂಡಿತ್ತು. ಬಿಸಿಸಿಐ ಹಾಗೂ ಅದರ ಅಧೀನದಲ್ಲಿರುವ ಸಂಸ್ಥೆಗಳಲ್ಲಿ ಅಸದ್ ರವೂಫ್ ಯಾವುದೇ ಮಾದರಿಯ ಕ್ರಿಕೆಟ್‌ನಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸದಂತೆ ಐದು ವರ್ಷಗಳ ಕಾಲ ನಿಷೇಧ ಹೇರಲಾಗಿದೆ ಎಂದು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಕಳೆದ ತಿಂಗಳು ಹರ್ಯಾಣದ ಆಫ್-ಸ್ಪಿನ್ನರ್ ಅಜಿತ್ ಚಾಂಡಿಲಾರಿಗೆ 2013ರ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿ ಬಿಸಿಸಿಐ ಅಜೀವ ನಿಷೇಧ ವಿಧಿಸಿತ್ತು. ಮುಂಬೈ ದಾಂಡಿಗ ಹಿಕೇನ್ ಶಾ ವಿರುದ್ಧವೂ ಮ್ಯಾಚ್ ಫಿಕ್ಸಿಂಗ್ ನಡೆಸಿದ ಆರೋಪದಲ್ಲಿ ಐದು ವರ್ಷಗಳ ಕಾಲ ನಿಷೇಧ ಹೇರಲಾಗಿತ್ತು.

ಬಿಸಿಸಿಐಗೆ ತನ್ನನ್ನು ನಿಷೇಧಿಸುವ ಅಧಿಕಾರವಿಲ್ಲ: ರವೂಫ್

ಕರಾಚಿ, ಫೆ.12: ‘‘ತನ್ನ ವಿರುದ್ಧದ ಆರೋಪ ಸಾಬೀತುಪಡಿಸುವ ಪುರಾವೆಗಳು ಬಿಸಿಸಿಐ ಬಳಿ ಇಲ್ಲ. ಬಿಸಿಸಿಐ ಅಥವಾ ಐಪಿಎಲ್‌ಗೆ ತನ್ನ ಮೇಲೆ ನಿಷೇಧ ಹೇರುವ ಅಧಿಕಾರವಿಲ್ಲ. ಮುಂಬೈನ ನ್ಯಾಯಾಲಯ ಅಲ್ಲಿನ ಪೊಲೀಸರಿಗೆ ತನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ ಎಂದು ಹೇಳಿತ್ತು’’ಎಂದು ಕಳಂಕಿತ ಪಾಕಿಸ್ತಾನದ ಅಂಪೈರ್ ಅಸದ್ ರವೂಫ್ ಹೇಳಿದ್ದಾರೆ.

ರವೂಫ್‌ಗೆ 2013ರ ಐಪಿಎಲ್‌ನಲ್ಲಿ ಮ್ಯಾಚ್ ಫಿಕ್ಸಿಂಗ್‌ನಲ್ಲಿ ಭಾಗಿಯಾದ ಅರೋಪದಲ್ಲಿ ಬಿಸಿಸಿಐ ಶುಕ್ರವಾರ ಐದು ವರ್ಷಗಳ ಕಾಲ ನಿಷೇಧ ಹೇರಿದೆ. 13 ವರ್ಷಗಳ ಕಾಲ ಅಂತಾರಾಷ್ಟ್ರೀಯ ಟೂರ್ನಿಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸಿದ್ದ ರವೂಫ್ ಇನ್ನು ಮುಂದೆ ಬಿಸಿಸಿಐಗೆ ಸಂಬಂಧಪಟ್ಟ ಟೂರ್ನಿಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸುವಂತಿಲ್ಲ.

ಬಿಸಿಸಿಐ ಹಾಗೂ ಐಪಿಎಲ್‌ನಿಂದ ನೇಮಿಲ್ಪಟ್ಟಿರುವ ತನಿಖಾ ಸಮಿತಿಯು ತಾನು ಭಾರತದಿಂದ ಐಪಿಎಲ್ ಕೆಲಸವನ್ನು ಪೂರ್ಣಗೊಳಿಸದೇ ಪಾಕ್‌ಗೆ ಮರಳಿದ್ದೆ ಎಂದು ಹೇಳಿದೆೆ. ಅದರಲ್ಲಿ ಸತ್ಯಾಂಶವಿಲ್ಲ. ನಾನು ಐಪಿಎಲ್‌ನ ಎಲ್ಲ ಕೆಲಸವನ್ನು ಮುಗಿಸಿಕೊಂಡು ತವರಿಗೆ ಮರಳಿದ್ದೆ ಎಂದು ರವೂಫ್ ಹೇಳಿದ್ದಾರೆ.

ಪೊಲೀಸರ ತನಿಖೆಯಲ್ಲಿ ತನ್ನಿಂದ ಯಾವುದೇ ತಪ್ಪು ಕಂಡುಬಂದಿಲ್ಲ. ತಿಂಗಳಿಗೆ 3 ಮಿಲಿಯನ್ ರೂಪಾಯಿ ಸಂಪಾದಿಸುತ್ತಿರುವ ತಾನು ಜೀನ್ಸ್, ಟೀ-ಶರ್ಟ್‌ನಂತಹ ಉಡುಗೊರೆ ಸ್ವೀಕರಿಸುವುದು ತಪ್ಪಲ್ಲ ಎಂದು ನ್ಯಾಯಾಲಯವೇ ಹೇಳಿರುವುದಾಗಿ ರವೂಫ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X