Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದಕ್ಷಿಣ ಏಷ್ಯನ್ ಗೇಮ್ಸ್: ಕವಿತಾ ರಾವುತ್...

ದಕ್ಷಿಣ ಏಷ್ಯನ್ ಗೇಮ್ಸ್: ಕವಿತಾ ರಾವುತ್ ಒಲಿಂಪಿಕ್ಸ್‌ಗೆ ಅರ್ಹತೆ

ವಾರ್ತಾಭಾರತಿವಾರ್ತಾಭಾರತಿ12 Feb 2016 6:22 PM IST
share

ಗುವಾಹಟಿ, ಫೆ.12: ಇಲ್ಲಿ ನಡೆಯುತ್ತಿರುವ ದಕ್ಷಿಣ ಏಷ್ಯನ್ ಗೇಮ್ಸ್‌ನಲ್ಲಿ ಆತಿಥೇಯ ಭಾರತ ಚಿನ್ನದ ಸುರಿಮಳೆಯನ್ನು ಮುಂದುವರಿಸಿದ್ದು, ದೀರ್ಘ ಅಂತರದ ಓಟಗಾರ್ತಿ ಕವಿತಾ ರಾವುತ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿರುವುದು ಗೇಮ್ಸ್‌ನ ಏಳನೆ ದಿನವಾದ ಶುಕ್ರವಾರದ ವಿಶೇಷವಾಗಿತ್ತು.

 ಒಟ್ಟು 248 ಪದಕಗಳನ್ನು(146 ಚಿನ್ನ, 79 ಬೆಳ್ಳಿ, 23 ಕಂಚು) ಸೂರೆಗೈದಿರುವ ಭಾರತ ಪದಕ ಪಟ್ಟಿಯಲ್ಲಿ ಅಗ್ರ ಸ್ಥಾನ ಭದ್ರಪಡಿಸಿಕೊಂಡಿದೆ. ಶ್ರೀಲಂಕಾ(157) 2ನೆ ಸ್ಥಾನದಲ್ಲಿದೆ.

ಶೂಟಿಂಗ್: ಈಗಾಗಲೇ ರಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿರುವ ಭಾರತದ ಸ್ಟಾರ್ ಶೂಟರ್ ಚೈನ್ ಸಿಂಗ್ ಪುರುಷರ 10 ಮೀ. ಏರ್‌ರೈಫಲ್ ಸ್ಪರ್ಧೆಯಲ್ಲಿ ಚಿನ್ನದ ಪದಕಕ್ಕೆ ಗುರಿ ಇಟ್ಟಿದ್ದಾರೆ. ಭಾರತದ ಇನ್ನೋರ್ವ ಹಿರಿಯ ಆಟಗಾರ ಗಗನ್ ನಾರಂಗ್ 204.6 ಅಂಕ ಗಳಿಸಿ ಬೆಳ್ಳಿಗೆ ತೃಪ್ತಿಪಟ್ಟರು. ಭಾರತ ಶೂಟಿಂಗ್‌ನಲ್ಲಿ ಶುಕ್ರವಾರ 4 ಚಿನ್ನ ಜಯಿಸಿತು.

 ಚೈನ್ ಸಿಂಗ್, ನಾರಂಗ್ ಹಾಗೂ ಇಮ್ರಾನ್ ಖಾನ್ ಅವರನ್ನೊಳಗೊಂಡ ಭಾರತದ ಶೂಟಿಂಗ್ ತಂಡ 1863.4 ಅಂಕ ಗಳಿಸಿ ಚಿನ್ನ ಜಯಿಸಿತು. ಬಾಂಗ್ಲಾದೇಶ ಹಾಗೂ ಶ್ರೀಲಂಕಾ ಕ್ರಮವಾಗಿ ಬೆಳ್ಳಿ ಹಾಗೂ ಕಂಚು ಜಯಿಸಿದವು.

ಪುರುಷರ ವೈಯಕ್ತಿಕ 20 ಮೀ. ಸ್ಟಾಂಡರ್ಡ್ ಪಿಸ್ತೂಲ್ ಸ್ಪರ್ಧೆಯಲ್ಲಿ ನೀರಜ್ ಕುಮಾರ್(569 ಅಂಕ) ಚಿನ್ನದ ಪದಕ ಜಯಿಸಿದ್ದಾರೆ. ಗುರುಪ್ರೀತ್ ಸಿಂಗ್(566) ಹಾಗೂ ಮಹೇಂದರ್ ಸಿಂಗ್(563) ಕ್ರಮವಾಗಿ ಬೆಳ್ಳಿ ಹಾಗೂ ಕಂಚಿನ ಪದಕ ಜಯಿಸಿದರು.

 ದ್ಯುತಿಗೆ ಬೆಳ್ಳಿ: ಲಿಂಗ ಪರೀಕ್ಷೆಯಲ್ಲಿ ವಿವಾದಕ್ಕೆ ಸಿಲುಕಿ ದೋಷ ಮುಕ್ತಗೊಂಡಿರುವ ಒಡಿಶಾದ ಅಥ್ಲೀಟ್ ದುತಿ ಚಂದ್ ಮಹಿಳೆಯರ 200 ಮೀ. ಓಟದಲ್ಲಿ ಬೆಳ್ಳಿ ಜಯಿಸಿದರು. ಭಾರತದ ಸೃಬಾನಿ ನಂದಾ ಚಿನ್ನದ ಪದಕ ಜಯಿಸಿದ್ದಾರೆ. ಶ್ರೀಲಂಕದ ರತ್ನನಾಯಕ ಕಂಚಿನ ಪದಕ ಪಡೆದರು.

 ಭಾರತದ ದೀರ್ಘ ಅಂತರದ ಓಟಗಾರ್ತಿ ಕವಿತಾ ರಾವುತ್  12ನೆ ಆವೃತ್ತಿಯ ದಕ್ಷಿಣ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ ಮ್ಯಾರಥಾನ್‌ನಲ್ಲಿ ಚಿನ್ನದ ಪದಕವನ್ನು ಜಯಿಸಿದರು. ಈ ಮೂಲಕ ಮುಂಬರುವ ರಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.

30ರ ಹರೆಯದ ರಾವುತ್ 2 ಗಂಟೆ, 38 ನಿಮಿಷ ಹಾಗೂ 38 ಸೆಕೆಂಡ್‌ನಲ್ಲಿ ಗುರಿ ತಲುಪಿ ಮ್ಯಾರಥಾನ್‌ನಲ್ಲಿ ಚಿನ್ನದ ನಗು ಬೀರಿದರು. ಈ ಸಾಧನೆಯ ಮೂಲಕ ರಿಯೋ ಗೇಮ್ಸ್‌ನ ಮಹಿಳೆಯರ ಮ್ಯಾರಥಾನ್‌ಗೆ ಅರ್ಹತೆ ಪಡೆದ ಭಾರತದ ನಾಲ್ಕನೆ ಮಹಿಳಾ ಅಥ್ಲೀಟ್ ಎನಿಸಿಕೊಂಡರು. ಒ.ಪಿ ಜೈಶಾ, ಲಲಿತಾ ಬಬ್ಬರ್ ಹಾಗೂ ಸುಧಾ ಸಿಂಗ್ ಈಗಾಗಲೇ ರಿಯೋ ಒಲಿಂಪಿಕ್ಸ್‌ನ ಮಹಿಳೆಯರ ಮ್ಯಾರಥಾನ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.
ಮಹಿಳೆಯರ ಮ್ಯಾರಥಾನ್‌ನಲ್ಲಿ ಶ್ರೀಲಂಕಾದ ಎನ್‌ಜಿ ರಾಜಸೇಖರ(2:50:47.00) ಹಾಗೂ ಬಿ. ಅನುರುಧಿ(2:52:15:00) ಕ್ರಮವಾಗಿ ಬೆಳ್ಳಿ ಹಾಗೂ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.


ನಾಸಿಕ್‌ನ ಓಟಗಾರ್ತಿ ರಾವುತ್ ಪ್ರಸ್ತುತ ನಡೆಯುತ್ತಿರುವ ದಕ್ಷಿಣ ಏಷ್ಯನ್ ಗೇಮ್ಸ್‌ನ ಮೂಲಕ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿರುವ ಭಾರತದ ಏಕೈಕ ಅಥ್ಲೀಟ್ ಆಗಿದ್ದಾರೆ. ಈಗಾಗಲೇ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿರುವ ನಿತೇಂದರ್ ಸಿಂಗ್ ರಾವತ್ ಪುರುಷರ ಮ್ಯಾರಥಾನ್‌ನಲ್ಲಿ 2:15:18 ಸೆಕೆಂಡ್‌ನಲ್ಲಿ ಗುರಿ ತಲುಪಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.

ಶುಕ್ರವಾರ 2 ಚಿನ್ನ, ಒಂದು ಕಂಚಿನ ಪದಕವನ್ನು ಜಯಿಸಿರುವ ಭಾರತದ ಅಥ್ಲೀಟ್‌ಗಳು ಟೂರ್ನಿಯಲ್ಲಿ ಒಟ್ಟು 28 ಚಿನ್ನ, 22 ಬೆಳ್ಳಿ ಹಾಗೂ 9 ಕಂಚಿನ ಪದಕಗಳನ್ನು ಜಯಿಸುವುದರೊಂದಿಗೆ ತಮ್ಮ ಅಭಿಯಾನ ಅಂತ್ಯಗೊಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X