Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಯಾಚಿನ್‌ನಲ್ಲಿ ಅರ್ಧಗಂಟೆ ಹುದುಗಿ...

ಸಿಯಾಚಿನ್‌ನಲ್ಲಿ ಅರ್ಧಗಂಟೆ ಹುದುಗಿ ಬದುಕಿ ಬಂದ ಯೋಧ ವರುಣ್

ವಾರ್ತಾಭಾರತಿವಾರ್ತಾಭಾರತಿ12 Feb 2016 11:23 PM IST
share

ಜಮ್ಮು, ಫೆ.12: ಭಾರತೀಯ ಭೂ ಸೇನೆಯ ಮೇಜರ್ ವರುಣ್ ಖಜುರಿಯಾ 6 ವರ್ಷಗಳ ಹಿಂದೆಯೇ ಕಂಡುಕೊಂಡಂತೆ, ಹಿಮಪಾತದಡಿ ಹೂತು ಹೋಗುವುದು ಹಾಗೂ ರಕ್ಷಣೆ ಸಹ ಒಮ್ಮಮ್ಮೆ ನೋವಿನ ರೂಪದಲ್ಲಿ ಬರುತ್ತದೆ.
ತಾನು ಹಿಮದಡಿ ಹೂತು ಹೋಗಿದ್ದೆ. ಒಮ್ಮಿಂದೊಮ್ಮೆಲೇ ನೀರ್ಗಲ್ಲು ಸರಳೊಂದು (ಹಿಮದಲ್ಲಿ ಹೂತು ಹೋದವರನ್ನು ಹುಡುಕಲು ಒಳಗೆ ತೂರಿಸುವ ಒಂದು ಸರಳು ) ತನ್ನ ತಲೆಗೆ ಬಡಿಯಿತು. ರಕ್ತ ಸುರಿಯಲಾರಂಭಿಸಿತು. ಇದು ರಕ್ಷಕರು, ತಾನು ಹಿಮದೊಳಗೆ ಹೂತು ಹೋಗಿದ್ದೇನೆಂದು ತಿಳಿದುಕೊಂಡ ವಿಧಾನವಾಗಿತ್ತು ಎಂದವರು ವಿವರಿಸಿದ್ದಾರೆ.
ರಕ್ಷಿಸಲ್ಪಟ್ಟ ಕೆಲವೇ ನಿಮಿಷಗಳಲ್ಲಿ ಮೇಜರ್ ಖಜುರಿಯಾ ರಕ್ಷಕನಾಗಿ ಬದಲಾದರು.ಅನೇಕ ಸೈನಿಕರು ಇನ್ನೂ ಟನ್‌ಗಟ್ಟಲೆ ಹಿಮದ ಅಡಿಯಲ್ಲಿದ್ದರು.
ಕಾಶ್ಮೀರದ ಗುಲ್ಮಾರ್ಗ್‌ನ ಸಮೀಪದ ಅಫರ್ವತ್‌ನಲ್ಲಿ ತರಬೇತಿ ಪಡೆಯುತ್ತಿದ್ದ ಕನಿಷ್ಠ 22 ಮಂದಿ ಸೈನಿಕರು. 2010ರ ಫೆ.8ರಂದು ಇಳುಕಲಲ್ಲಿ ಸಂಭವಿಸಿದ್ದ ಹಿಮಪಾತದಡಿಯಲ್ಲಿ ಹೂತು ಹೋಗಿದ್ದರು. ಆ ಸಮಯ ಸುಮಾರು 17 ಸೈನಿಕರು ಸಾವಿಗೀಡಾಗಿದ್ದರು. ರಕ್ಷಣಾ ಕಾರ್ಯ ಒಂದು ವಾರದ ಕಾಲ ನಡೆದಿತ್ತು.
ರಕ್ಷಣಾ ಕಾರ್ಯಾಚರಣೆಯಲ್ಲಿ ಮಾಡಿದ ಕೆಲಸಕ್ಕಾಗಿ ಮೇಜರ್ ವರುಣ್‌ರಿಗೆ ಭೂ ಸೇನೆಯಿಂದ ಸೇನಾ ಪದಕ ಲಭಿಸಿತ್ತು.
ಕೇವಲ 20 ನಿಮಿಷಗಳ ಕಾಲವಾಗಿದ್ದರೂ, ಹಿಮದಡಿಯಲ್ಲಿ ಹೂತು ಹೋಗಿದ್ದ ಸ್ವಾನುಭವ ಹೊಂದಿರುವ ವರುಣ್, ಲ್ಯಾನ್ಸ್ ನಾಯ್ಕ್ ಹನುಮಂತಪ್ಪ ಸಿಯಾಚಿನ್‌ನಲ್ಲಿ 25 ಅಡಿ ಹಿಮದಾಳದಲ್ಲಿ 6 ದಿನಗಳ ಕಾಲ ಬದುಕಿದ್ದುದು ಪವಾಡಕ್ಕಿಂತ ಕಡಿಮೆಯೇನಲ್ಲ ಎನ್ನುತ್ತಾರೆ.
ಇದು, ಅದ್ಭುತ ಸಹನೆ ಹಾಗೂ ಸಂಕಲ್ಪ ಶಕ್ತಿಗೆ ಪುರಾವೆಯಾಗಿದೆಯೆಂದು ಅವರು ಹೇಳಿದ್ದಾರೆ.
ಸಿಯಾಚಿನ್‌ನಲ್ಲಿ ಫೆ.3ರಂದು ಸಂಭವಿಸಿದ್ದ ಹಿಮಪಾತದಿಂದಾಗಿ ಲ್ಯಾನ್ಸ್ ನಾಯ್ಕ್ ಹನುಮಂತಪ್ಪ ಹಾಗೂ 9 ಮಂದಿ ಸಹ-ಯೋಧರು ಮಂಜುಗಡ್ಡೆಯ ರಾಶಿಯಡಿ ಹೂತು ಹೋಗಿದ್ದರು. ಚಿಂತಾಜನಕ ಸ್ಥಿತಿಯಲ್ಲಿ ಸೋಮವಾರ ಹನುಮಂತಪ್ಪನವರೊಬ್ಬರೇ ಜೀವಂತವಾಗಿ ರಕ್ಷಿಸಲ್ಪಟ್ಟವರಾಗಿದ್ದರು. ಆದರೆ, ಅವರು ಗುರುವಾರ ದಿಲ್ಲಿಯ ಸೇನಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X