Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮುದ್ರದಲ್ಲಿ ಈಜಲು ತೆರಳಿದ ಹಾಸನ ಮೂಲದ...

ಸಮುದ್ರದಲ್ಲಿ ಈಜಲು ತೆರಳಿದ ಹಾಸನ ಮೂಲದ ನಾಲ್ಕು ಯುವಕರು ನೀರುಪಾಲು :ನಾಲ್ವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ

ವಾರ್ತಾಭಾರತಿವಾರ್ತಾಭಾರತಿ14 Feb 2016 5:06 PM IST
share
ಸಮುದ್ರದಲ್ಲಿ ಈಜಲು ತೆರಳಿದ ಹಾಸನ ಮೂಲದ ನಾಲ್ಕು ಯುವಕರು ನೀರುಪಾಲು :ನಾಲ್ವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ

ಉಳ್ಳಾಲ: ಸಮುದ್ರದಲ್ಲಿ ಸ್ನಾನಕ್ಕೆಂದು ಹಾಸನ ಮೂಲದ ಆರು ಮಂದಿ ಯುವಕರ ಪೈಕಿ ನಾಲ್ವರು ಸಮುದ್ರಪಾಲಾಗಿ ನಾಪತ್ತೆಯಾಗಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ಭಾನುವಾರ ಮಧ್ಯಾಹ್ನ ವೇಳೆ ನಡೆದಿದೆ.

  ನಾಪತ್ತೆಯಾದವರನ್ನು ಹಾಸನದ ಹುಣಸೀಕೆರೆ ರಸ್ತೆಯ ಮಿರ್ಜಾ ಮೊಹಲ್ಲಾ ನಿವಾಸಿಗಳಾದ ಇಕ್ಬಾಲ್ ಪಾಶಾ ಎಂಬವರ ಪುತ್ರ ಇಮ್ರಾನ್ ಪಾಶಾ(19) ಖಲಂದರ್ ಎಂಬವರ ಮಹಮ್ಮದ್ ಸಿಯಾಬ್(19), ಮಹಮ್ಮದ್ ಶಬೀರ್ ಎಂಬವರ ಪುತ್ರ ಮಹಮ್ಮದ್ ಹನೀಫ್ (20), ಮಹಮ್ಮದ್ ಫಿರೋರ್ ಎಂಬವರ ಪುತ್ರ ಶಹೀದ್ ಖಲೀಲ್ (19) ಗುರುತಿಸಲಾಗಿದೆ.ನಾಲ್ವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

           ಬಶೀರ್ ಅಹಮ್ಮದ್ ಎಂಬವರ ಪುತ್ರ ಸಕಲೆಂ ಸಾಹಿಲ್ ಮತ್ತು ಮಹಮ್ಮದ್ ಫಾಝಿಲ್ ಪುತ್ರ ಸಾದಿಕ್ ಪಾಶಾ ಬದುಕುಳಿದವರಾಗಿದ್ದಾರೆ. ಹಾಸನದಿಂದ ಮೂರು ಬೈಕುಗಳಲ್ಲಿ ಉಳ್ಳಾಲ ದರ್ಗಾ ಸಂದರ್ಶನ ಮತ್ತು ಸಮುದ್ರ ವಿಹಾರಕ್ಕೆಂದು ಬಂದಿದ್ದ ಆರು ಜನರ ತಂಡ ದರ್ಗಾ ಹೋಗುವ ಮುನ್ನ ಸೋಮೇಶ್ವರ ಸಮುದ್ರ ತೀರಕ್ಕೆ ಮಧ್ಯಾಹ್ನ 1.30ರ ಹೊತ್ತಿಗೆ ಆಗಮಿಸಿದ್ದರು. 2.30ರ ಸಮಯದಲ್ಲಿ ಮೊದಲಿಗೆ ಖಲೀಲ್ ಸಮುದ್ರಕ್ಕಿಳಿದಿದ್ದ. ಈ ವೇಳೆ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿದ ಪರಿಣಾಮ ಖಲೀಲ್ ಸಮುದ್ರ ದ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಇದನ್ನು ಕಂಡ ಸ್ನೇಹಿತರು ಒಬ್ಬರೊಬ್ಬರೇ ಹಾರಿ ರಕ್ಷಣೆಗೆ ಯತ್ನಿಸಿದರೂ ಇತರ ಮೂವರು ಸಮುದ್ರದ ಅಲೆಗಳಲ್ಲಿ ಸಿಲುಕಿ ನಾಪತ್ತೆಯಾಗಿದ್ದಾರೆ. ದಡದ ಮೇಲೆ ಉಳಿದಿದ್ದ ಸಾಹಿಲ್ ಮತ್ತು ಸಾದಿಕ್ ಇಬ್ಬರೂ ಬಲೆ ಹಾಕಿ ಸ್ನೇಹಿತರನ್ನು ಉಳಿಸಲು ಯತ್ನಿಸಿದರಾದರೂ ಪ್ರಯೋಜನವಾಗಲಿಲ್ಲ. ನೀರುಪಾಲದವಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು ಎನ್ನಲಾಗಿದೆ.

ಬದುಕುಳಿದವರಲ್ಲಿ ಶಾಹಿಲ್ ಎಂಬಾತ ಹಾಸನ ಸರಕಾರಿ ಡಿಪ್ಲೋಮಾ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾಗಿದ್ದರೆ, ಸಾಧಿಕ್ ಕರಾಟೆ ತರಬೇತುದಾರನಾಗಿದ್ದಾನೆ . ಸಮುದ್ರಪಾಲಾದವರ ಬಗ್ಗೆ ಶೋಧ ಮುಂದುವರೆದಿದ್ದು ,ಉಳ್ಳಾಲ ಪೋಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ .

ಸೋಮೇಶ್ವರ ಉಚ್ಚಿಲದ ನಡುವೆ ದುರಂತ

 ಈಜುರಕ್ಷಕ ದಳದ ಅಶೋಕ್ ಮತ್ತು ಸಿಬ್ಬಂದಿಗಳು ರಕ್ಷಿಸಲು ಬಂದರೂ ಪ್ರಯೋಜನವಾಗಿಲ್ಲ .ಸೋಮೇಶ್ವರ ಮತ್ತು ಉಚ್ಚಿಲದ ನಡುವಿನ ಸಮುದ್ರಕಿನಾರೆಯಲ್ಲಿ ಇಂತಹ ದುರಂತ ನಡೆದದ್ದು ಪ್ರಥಮ. ಈಜುರಕ್ಷಕದವರು ಹೆಚ್ಚಾಗಿ ರುದ್ರಪಾದೆಯಲ್ಲೇ ಪಹರೆ ಕಾಯುತ್ತಿರುತ್ತಾರೆ .ಇದುವರೆಗೂ ಸೋಮೇಶ್ವರ ರುದ್ರ ಪಾದೆ ಮತ್ತು ಉಳ್ಳಾಲ ಬೀಚ್‌ಗಳಲ್ಲೇ ಇಂತಹ ದುರಂತಗಳು ಹೆಚ್ಚಾಗಿ ಸಂಭವಿಸುತ್ತಿದ್ದವು ಎಂದು ಅಶೋಕ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X