Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಎನ್‌ಯು ವಿವಾದ:ಕನ್ಹಯಾ ಸೇರಿದಂತೆ ಎಂಟು...

ಜೆಎನ್‌ಯು ವಿವಾದ:ಕನ್ಹಯಾ ಸೇರಿದಂತೆ ಎಂಟು ವಿದ್ಯಾರ್ಥಿಗಳು ತರಗತಿಯಿಂದ ಡಿಬಾರ್

ವಾರ್ತಾಭಾರತಿವಾರ್ತಾಭಾರತಿ14 Feb 2016 7:16 PM IST
share
ಜೆಎನ್‌ಯು ವಿವಾದ:ಕನ್ಹಯಾ ಸೇರಿದಂತೆ ಎಂಟು ವಿದ್ಯಾರ್ಥಿಗಳು ತರಗತಿಯಿಂದ ಡಿಬಾರ್

ಹೊಸದಿಲ್ಲಿ,ಫೆ.14: ಸಂಸತ್ ದಾಳಿಯ ದೋಷಿ ಅಫ್ಝಲ್ ಗುರು ಸ್ತುತಿಗೆ ಸಂಬಂಧಿಸಿದಂತೆ ಜವಾಹರಲಾಲ ನೆಹರು ವಿವಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ರಾಜಕೀಯ ಬಣ್ಣ ಪಡೆದುಕೊಳ್ಳುತ್ತಿದ್ದರೆ ಇತ್ತ ವಿವಿಯ ಉನ್ನತ ಮಟ್ಟದ ವಿಚಾರಣಾ ಸಮಿತಿಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯಾ ಕುಮಾರ ಮತ್ತು ಕಾರ್ಯದರ್ಶಿ ರಾಮ ನಾಗಾ ಸೇರಿದಂತೆ ಎಂಟು ವಿದ್ಯಾರ್ಥಿಗಳು ಫೆ.9ರಂದು ವಿವಿ ಕ್ಯಾಂಪಸ್‌ನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ‘‘ಆಕ್ಷೇಪಾರ್ಹ ಘೋಷಣೆಗಳನ್ನು’’ಕೂಗುತ್ತಿದ್ದುದು ಮೇಲ್ನೋಟಕ್ಕೆ ರುಜುವಾತಾಗಿದೆ ಎಂದು ನಿರ್ಧರಿಸಿದೆ ಮತ್ತು ಈ ಎಂಟೂ ವಿದ್ಯಾರ್ಥಿಗಳು ತರಗತಿಗಳನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ತನ್ಮಧ್ಯೆ ಜೆಎನ್‌ಯು ವಿದ್ಯಾರ್ಥಿ ಸಂಘವು ಸೋಮವಾರ ಮುಷ್ಕರಕ್ಕೆ ಕರೆ ನೀಡಿದ್ದು ಕನ್ಹಯಾರನ್ನು ಬೇಷರತ್ ಬಿಡುಗಡೆಗೊಳಿಸುವವರೆಗೆ ಮುಷ್ಕರವನ್ನು ಮುಂದುವರಿಸುವುದಾಗಿ ಹೇಳಿದೆ. ಸಮಿತಿಯ ನಿರ್ಧಾರವು ವಿದ್ಯಾರ್ಥಿ ಸಂಘದ ನಿಲುವನ್ನು ಇನ್ನಷ್ಟು ಕಠೋರಗೊಳಿಸುವ ಸಾಧ್ಯತೆಯಿದೆ.


  ಮೂವರು ಸದಸ್ಯರ ಸಮಿತಿಯು ಶುಕ್ರವಾರ ಸಂಜೆ ತನ್ನ ಮಧ್ಯಂತರ ವರದಿಯನ್ನು ಸಲ್ಲಿಸಿದ್ದು, ಎಂಟು ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳಿಂದ ಡಿಬಾರ್ ಮಾಡುವಂತೆ ಶಿಫಾರಸು ಮಾಡಿದೆ ಎಂದು ವಿವಿಯ ಕುಲಸಚಿವ ಭೂಪಿಂದರ್ ಝುಟ್ಶಿ ಅವರು ಪ್ರಕಟಿಸಿದರು. ಈ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳಿಂದ ಡಿಬಾರ್ ಮಾಡಲಾಗಿದೆಯಾದರೂ ಅವರು ವಿಚಾರಣೆಗೆ ಹಾಜರಾಗಬೇಕಿರುವುದರಿಂದ ಹಾಸ್ಟೆಲ್‌ಗಳನ್ನು ತೆರವುಗೊಳಿಸುವಂತೆ ಸೂಚಿಸಿಲ್ಲ ಎಂದರು.


 ಪೊಲೀಸರು ಕ್ಯಾಂಪಸ್‌ನಿಂದ ನಿರ್ಗಮಿಸಬೇಕೆಂಬ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಆಗ್ರಹವನ್ನು ತಳ್ಳಿ ಹಾಕಿದ ಅವರು,ವಿವಿ ಆವರಣದಲ್ಲಿ ಪೊಲೀಸರ ಉಪಸ್ಥಿತಿಯಿಲ್ಲ ಎಂದು ಹೇಳಿದರು. ಪೊಲೀಸರು ವಿವಿ ಅಧಿಕಾರಿಗಳ ಅನುಮತಿ ಪಡೆದುಕೊಂಡೇ ಕನ್ಹಯಾ ಕುಮಾರ ಬಂಧನಕ್ಕಾಗಿ ಬ್ರಹ್ಮಪುತ್ರಾ ಹೆಸರಿನ ಒಂದು ಹಾಸ್ಟೆಲ್‌ಗೆ ಮಾತ್ರ ಹೋಗಿದ್ದರು ಎಂದರು. ವಿವಿಯ ಕುಲಪತಿಗಳು ಶುಕ್ರವಾರ ವಿವಿಧ ಕೇಂದ್ರಗಳ ಡೀನ್‌ಗಳು ಮತ್ತು ಮುಖ್ಯಸ್ಥರನು ್ನಭೇಟಿಯಾಗಿ ಅವರಿಗೆ ವಸ್ತುಸ್ಥಿತಿಯನ್ನು ವಿವರಿಸಿದ್ದಾರೆ ಎಂದು ಝುಟ್ಶಿ ತಿಳಿಸಿದರು. ರವಿವಾರ ಬೆಳಿಗ್ಗೆ ಕ್ಯಾಂಪಸ್‌ಗೆ ಭೇಟಿ ನೀಡಿದ್ದ ಕುಲಾಧಿಪತಿ ಕೆ.ಕಸ್ತೂರಿ ರಂಗನ್ ಅವರು ಅಧಿಕಾರಿಗಳು,ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಕಂಡು ಮಾತುಕತೆ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X