Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೆದರಿಕೆಯ ವಿರುದ್ಧ ಹೋರಾಟ: ಸಿಪಿಎಂ ನಾಯಕ...

ಬೆದರಿಕೆಯ ವಿರುದ್ಧ ಹೋರಾಟ: ಸಿಪಿಎಂ ನಾಯಕ ಕಾರಟ್

ಜೆಎನ್‌ಯು ವಿವಾದ

ವಾರ್ತಾಭಾರತಿವಾರ್ತಾಭಾರತಿ15 Feb 2016 11:27 PM IST
share
ಬೆದರಿಕೆಯ ವಿರುದ್ಧ ಹೋರಾಟ: ಸಿಪಿಎಂ ನಾಯಕ ಕಾರಟ್

ಹೊಸದಿಲ್ಲಿ, ಫೆ.15: ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದ ವಿವಾದದ ಕುರಿತಾದ ತಮ್ಮ ನಿಲುವಿಗೆ ‘ದೇಶ ವಿರೋಧಿ’ ಎಂಬ ಹಣೆಪಟ್ಟಿ ಹಚ್ಚುತ್ತಿರುವುದರ ಬಗ್ಗೆ ತಮಗೆ ‘ಯಾವುದೇ ಭಯವಿಲ್ಲ. ಯಾವುದೇ ಬೆದರಿಕೆಯ ವಿರುದ್ಧ ತಾವು ಹೋರಾಡುತ್ತೇವೆಂದು ಎಡಪಕ್ಷಗಳಿಂದು ಹೇಳಿವೆ.

ಸಿಪಿಎಂ ನಾಯಕ ಸೀತಾರಾಮ ಯೆಚೂರಿಯವರಿಗೆ ಈ ವಿಷಯದಲ್ಲಿ ಬೆದರಿಕೆ ಕರೆಗಳು ಬಂದ ಬಳಿಕ ಅವುಗಳ ಈ ಹೇಳಿಕೆ ಹೊರಟಿದೆ.
ಘಟನೆಯನ್ನು ಖಂಡಿಸಿರುವ ಜೆಡಿಯು, ಯೆಚೂರಿಯವರಿಗೆ ಬಂದಿರುವ ಬೆದರಿಕೆಗಳು ಅಭಿವ್ಯಕ್ತಿ ಸ್ವಾತಂತ್ರದ ಮೇಲಿನ ದಾಳಿಯೆಂದು ವ್ಯಾಖ್ಯಾನಿಸಿದ್ದು, ಈ ಬೆಳವಣಿಗೆಯನ್ನು ‘ಹೊಸ ರೀತಿಯ ತುರ್ತು ಪರಿಸ್ಥಿತಿ’ ಎಂದು ಕರೆದಿದೆ.
ಈ ಎಲ್ಲ ಬೆದರಿಕೆ ಕರೆಗಳನ್ನು ಎದುರಿಸಲು ತಾವು ಸಿದ್ಧರಿದ್ದೇವೆ. ತಾವು ಚಿಂತಿತರಾಗಿಲ್ಲ. ತಮಗೆ ದೇಶವಿರೋಧಿಗಳೆಂಬ ಹಣೆಪಟ್ಟಿ ಕಟ್ಟುತ್ತಿರುವ ಬಗ್ಗೆ ಚಿಂತೆಯಿಲ್ಲ. ತಾವಿದನ್ನು ಎದುರಿಸಲು ಸಿದ್ಧರಿದ್ದೇವೆ ಹಾಗೂ ಅದರ ವಿರುದ್ಧ ಹೋರಾಡುತ್ತೇವೆಂದು ಸಿಪಿಎಂ ನಾಯಕ ಪ್ರಕಾಶ್ ಕಾರಟ್ ಹೇಳಿದ್ದಾರೆ.
ಬೆದರಿಕೆ ಕರೆಗಳು ಹಾಗೂ ಸಿಪಿಎಂ ಮುಖ್ಯಾಲಯದ ಮೇಲಿನ ದಾಳಿಗಳು, ಜೆಎನ್‌ಯು ವಿದ್ಯಾರ್ಥಿ ಸಮುದಾಯದ ಮೇಲೆ ದೌರ್ಜನ್ಯ ಹಾಗೂ ಕ್ಯಾಂಪಸ್‌ನಲ್ಲಿ ಸರಕಾರಿ ಪ್ರಾಯೋಜಿತ ಹಿಂದುತ್ವ ಸಿದ್ಧಾಂತ ಹೇರಿಕೆಯ ವಿರುದ್ಧ ‘ದೃಢ’ ನಿಲುವಿಗೆ ಎಡಪಕ್ಷಗಳಿಗೆ ಬಲಪಂಥೀಯ ಸಂಘಟನೆಗಳು ನೀಡಿರುವ ಪ್ರತಿಕ್ರಿಯೆಯಾಗಿದೆಯೆಂದು ಅವರು ಆರೋಪಿಸಿದ್ದಾರೆ.
ಪ್ರತಿಭಟನಾಕಾರರನ್ನು ಬೆಂಬಲಿಸಿದುದಕ್ಕಾಗಿ ಅದೇ ರೀತಿಯ ಬೆದರಿಕೆ ಕರೆಗಳು ಬಂದಿವೆಯೆಂದು ಪ್ರತಿಪಾದಿಸಿರುವ ಸಿಪಿಐ ನಾಯಕ ಡಿ. ರಾಜಾ ಈ ವಿಷಯವನ್ನೀಗ ಔಪಚಾರಿಕವಾಗಿ ಸರಕಾರದ ಬಳಿಗೆ ಒಯ್ಯಲಾಗುವುದು ಎಂದಿದ್ದಾರೆ.
ತನಗೂ ಬೆದರಿಕೆಯ ಕರೆಗಳು ಬರುತ್ತಿವೆ. ಗೃಹ ಸಚಿವರನ್ನು ಭೇಟಿಯಾಗಿದ್ದ ವೇಳೆ, ಅನಾಮಧೇಯ ಕರೆಗಳು ಬರುತ್ತಿರುವುದು ಹಾಗೂ ತಮ್ಮನ್ನು ಗುಂಡಿಕ್ಕಿ ಕೊಲ್ಲುವೆವೆಂದು ಬೆದರಿಸಿರುವ ವಿಚಾರವನ್ನು ಅವರಿಗೆ ತಿಳಿಸಿದ್ದೇವೆ. ಈ ಎಲ್ಲ ಘಟನೆಗಳು ನಡೆಯುತ್ತಿವೆ. ಆದುದರಿಂದ ತಾವದನ್ನು ಔಪಚಾರಿಕವಾಗಿ ಸರಕಾರದ ಬಳಿಗೆ ಒಯ್ಯಲಿದ್ದೇವೆಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X