Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಜೀವನ ನಿರ್ವಹಣೆಗೆ ಕಾರು ತೊಳೆಯುವ...

ಜೀವನ ನಿರ್ವಹಣೆಗೆ ಕಾರು ತೊಳೆಯುವ ಪ್ಯಾರಾಥ್ಲೀಟ್..!

ವಾರ್ತಾಭಾರತಿವಾರ್ತಾಭಾರತಿ16 Feb 2016 10:59 PM IST
share
ಜೀವನ ನಿರ್ವಹಣೆಗೆ ಕಾರು ತೊಳೆಯುವ ಪ್ಯಾರಾಥ್ಲೀಟ್..!

ಹೊಸದಿಲ್ಲಿ, ಫೆ.16: ಜೂನಿಯರ್ ನ್ಯಾಶನಲ್ ಲೆವೆಲ್ ಅಥ್ಲೆಟಿಕ್ಸ್ 2005 ಮತ್ತು 2009ರಲ್ಲಿ ವರ್ಲ್ಡ್ ಗೇಮ್ಸ್‌ನಲ್ಲಿ ಹಲವು ಚಿನ್ನದ ಪದಕವನ್ನು ಭಾರತದ ಖಾತೆಗೆ ಜಮೆ ಮಾಡಿದ್ದ ಈಜುಪಟು ಭರತ್ ಕುಮಾರ್ ಐರ್ಲೆಂಡ್‌ನಲ್ಲಿ 2006ರಲ್ಲಿ ನಡೆದ ಜೂನಿಯರ್ ವರ್ಲ್ಡ್ ಅಥ್ಲೆಟಿಕ್ಸ್‌ನಲ್ಲಿ ಬೆಳ್ಳಿ ಜಯಿಸಿದ್ದರು. ಭರತ್ ಕುಮಾರ್ ಇಷ್ಟೆಲ್ಲಾ ಸಾಧನೆ ಮಾಡಿದ್ದರೂ, ಅವರಿಗೆ ಸಂತೃಪ್ತ ಬದುಕು ಸಾಧ್ಯವಾಗಲಿಲ್ಲ. ಹರ್ಯಾಣದ ಪ್ಯಾರಾಲಿಂಪಿಕ್ಸ್ ಈಜುಗಾರ ಭರತ್ ಕುಮಾರ್ ಗೆಹುಟ್ಟಿನಿಂದ ಎಡಗೈ ಇಲ್ಲ. ಹೀಗಿದ್ದರೂ ಅವರು ಸತತ ಪರಿಶ್ರಮದ ಮೂಲಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಹಲವು ಪದಕಗಳನ್ನು ಬಾಚಿಕೊಂಡಿದ್ದರು. ಚೀನಾದಲ್ಲಿ 2010ರಲ್ಲಿ ನಡೆದ ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್‌ಗೆ ಆಯ್ಕೆಯಾಗಿದ್ದರು. ಅಥ್ಲೀಟ್ ಭರತ್ ಕುಮಾರ್ ಜೀವನ ಸಾಗಿಸಲು ಬೇರಿ ದಾರಿಯಿಲ್ಲದೆ ಕಾರು ತೊಳೆಯುವ ವೃತ್ತಿಯನ್ನವಲಂಭಿಸಿದರು. ತಂದೆ ಕೂಲಿ ಕಾರ್ಮಿಕ. ಎಂಟರ ಹರೆಯಕ್ಕೆ ಕಾಲಿಟ್ಟಾಗ ಭರತ್ ಕುಮಾರ್‌ನನ್ನು ತಂದೆ ತನ್ನ ಚಿಕ್ಕಮ್ಮನ ಬಳಿ ಇರುವ ಕೋಣಗಳ ಮೈ ತೊಳೆಯುವ ಕಾರ್ಯಕ್ಕೆ ನಿಯೋಜಿಸಿದ್ದರು. ನಾಲ್ಕು ಕೋಣಗಳನ್ನು ನದಿಗೆ ಕೊಂಡೊಯ್ದು ಅವುಗಳಿಗೆ ಸ್ನಾನ ಮಾಡಿಸುತ್ತಾ ಈಜು ಕಲಿತ ಭರತ್ ಬಳಿಕ ಶಾಲಾ ಮಟ್ಟದ ,ವಲಯ ಮಟ್ಟದ ಈಜು ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವು ಪದಕಗಳನ್ನು ಬಾಚಿಕೊಂಡಿದ್ದರು.

 2010ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಾಲು ನೋವಿನಿಂದಾಗಿ ಭಾಗವಹಿಸಲಿಲ್ಲ. ಬಳಿಕ ಅವರು ಈಜುಗಾರನಾಗಿ ಸ್ಪರ್ಧಿಸುವ ನಿರ್ಧಾರ ಕೈಗೊಂಡರು. 2011ರಲ್ಲಿ ರಾಷ್ಟ್ರಮಟ್ಟದ ಈಜುಗಾರನಾಗಿ ರೂಪುಗೊಂಡ ಭರತ್ ಕುಮಾರ್ ಈ ತನಕ 50ಕ್ಕೂ ಅಧಿಕ ಪದಕಗಳನ್ನು ಬಾಚಿಕೊಂಡಿದ್ದಾರೆ. ನೆಹರೂ ಸ್ಟೇಡಿಯಂನಲ್ಲಿ ತರಬೇತಿ ಪಡೆಯುವಾಗ ಪಥ್ಯಾನ್ನದ ಬಗ್ಗೆ ಚಿಂತೆ ಮಾಡಲಿಲ್ಲ. ಆದರೆ ಆಹಾರಕ್ಕಾಗಿ ಹಣವಿಲ್ಲದಾಗ ಸಾಯಿ ದೇವಸ್ಥಾನದ ಹೊರಗಡೆ ಭಿಕ್ಷುಕರ ಜತೆ ಭಿಕ್ಷೆ ಬೇಡಿದ್ದರು. ಭರತ್ ಕುಮಾರ್ ಅನೇಕ ಸ್ಪರ್ಧೆಗಳಲ್ಲಿ ಚಾಂಪಿಯನ್ ಆಗಿದ್ದರೂ, ಅವರಿಗೆ ಸರಕಾರಿ ಕೆಲಸ ಸಿಕ್ಕಿಲ್ಲ. ಈ ಕಾರಣದಿಂದಾಗಿ ಅವರು ಕಾರು ತೊಳೆಯುವ ವೃತ್ತಿಯನ್ನು ಆಯ್ದುಕೊಂಡಿದ್ದಾರೆ.

 ‘‘ ನನಗೆ ಒಂದು ಕೈ ಇಲ್ಲ. ಈ ಕಾರಣಕ್ಕಾಗಿ ನಾನು ಯಾರಿಗೂ ಬೇಕಾಗಿಲ್ಲ. ನನಗೆ ಪ್ರೋತ್ಸಾಹದ ಕೊರತೆ ಇದೆ. 2017ರ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಲು ನನಗೆ ಪ್ರೋತ್ಸಾಹ ಅಗತ್ಯ. ನಾನು ನೆರವು ಯಾಚಿಸಿ ಹಲವು ಸೆಲೆಬ್ರಿಟಿಗಳ ಮೊರೆ ಹೋದೆ. ಆದರೆ ಯಾರಿಂದಲೂ ಈ ತನಕ ನನಗೆ ನೆರವು ಸಿಕ್ಕಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೆ. ಅವರ ಸಹಾಯದ ನಿರೀಕ್ಷೆಯಲ್ಲಿರುವೆ’’ ಎಂದು ಭರತ್ ಕುಮಾರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X