Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಪಟ 'ಗುರುವಿನ' ಆಶ್ರಮದಿಂದ ಐಐಟಿ-ಎಂ...

ಕಪಟ 'ಗುರುವಿನ' ಆಶ್ರಮದಿಂದ ಐಐಟಿ-ಎಂ ವಿದ್ಯಾರ್ಥಿನಿಯ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ16 Feb 2016 11:32 PM IST
share

ಚೆನ್ನೈ, ಫೆ.16: ಸನ್ಯಾಸಿಯಾಗುವ ಇಚ್ಛೆಯಿಂದ ಜ.17ರಂದು ನಿಗೂಢವಾಗಿ ಕಾಣೆಯಾಗಿದ್ದ ಐಐಟಿ-ಎಂ ವಿದ್ಯಾರ್ಥಿನಿಯೊಬ್ಬಳು ಕಳೆದ ವಾರ ಕೊನೆಗೂ ಡೆಹ್ರಾಡೂನ್ ಬಳಿ ಸ್ವಯಂ ಘೋಷಿತ ಗುರುವೊಬ್ಬನ ಆಶ್ರಮದಲ್ಲಿದ್ದ ಪತ್ತೆಯಾಗಿದ್ದಾಳೆ.

ವೇದಾಂತಂ ಎಲ್ ಪ್ರತ್ಯೂಷಾ ಎಂಬ ಸ್ನಾನಕೋತ್ತರ ಪದವಿ ವಿದ್ಯಾರ್ಥಿನಿಯನ್ನು ಉತ್ತರಾಂಚಲ ಪೊಲೀಸರು ಹಾಗೂ ಆಕೆಯ ಹೆತ್ತವರು ಶಿವಗುಪ್ತ ಎಂಬಾತನ ಆಶ್ರಮದಿಂದ ರಕ್ಷಿಸಿ ಕರೆ ತಂದಿದ್ದಾರೆ.
ತನ್ನ ಮಗಳೀಗ ಕುಟುಂಬದೊಂದಿಗಿದ್ದಾಳೆ. ಅವಳು ಕಾಣೆಯಾದೊಡನೆ ದಾಖಲಿಸಲಾಗಿರುವ ಪ್ರಕರಣವನ್ನು ಕೊನೆಗೊಳಿಸಬೇಕೆಂದು ಯುವತಿಯ ತಂದೆ ಪುರುಷೋತ್ತಮನ್ ಎಂಬವರು ಸೋಮವಾರ ಕೊಟ್ಟುರುಪುರಂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
26ರ ಹರೆಯದ ಪ್ರತ್ಯೂಷಾ, ಅಧ್ಯಾತ್ಮದ ಶೋಧಕ್ಕಾಗಿ ತಾನು ಹಿಮಾಲಯಕ್ಕೆ ಹೋಗುತ್ತಿದ್ದೇನೆಂದು ತನ್ನ ಹಾಸ್ಟೆಲ್ ಕೊಠಡಿಯಲ್ಲಿ ಪತ್ರಗಳಲ್ಲಿ ಬರೆದಿಟ್ಟು ಕಾಣೆಯಾಗಿದ್ದಳು.
ಹದಿಹರೆಯದವರೂ ಸೇರಿದಂತೆ ಇನ್ನೂ ಅನೇಕ ಹುಡುಗಿಯರು ಗುಪ್ತನ ಆಶ್ರಮದಲ್ಲಿದ್ದಾರೆಂದು ಪುರುಷೋತ್ತಮನ್ ತಮಗೆ ಮಾಹಿತಿ ನೀಡಿದ್ದಾರೆಂದು ಕೊಟ್ಟೂರುಪುರಂ ಪೊಲೀಸರು ತಿಳಿಸಿದ್ದಾರೆ. ಆದರೆ, ಗುಪ್ತನ ವಿರುದ್ಧ ಯಾರದೇ ದೂರು ಬರದ ಕಾರಣ ಉತ್ತರಾಂಚಲ ಪೊಲೀಸರು ಆತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ತನಿಖಾಧಿಕಾರಿಯೊಬ್ಬರು ಹೇಳಿದ್ದಾರೆ. ಇತರ ಹುಡುಗಿಯರು ಹಾಗೂ ಮಹಿಳೆಯರು ಸ್ವ ಇಚ್ಛೆಯಿಂದಲೇ ಆಶ್ರಮದಲ್ಲಿರುವಂತೆ ಕಾಣುತ್ತಿದೆ.
ಪ್ರತ್ಯೂಷಾ, ಕೊಯಮತ್ತೂರಿನ ಭಾಸ್ಕರ ಗುಪ್ತ ಎಂಬವನೊಂದಿಗೆ ಮುಂಬೈಗೆ ಹೋಗುವ ರೈಲು ಹತ್ತಿರುವುದು ನಗರ ಪೊಲೀಸರಿಗೆ ತಿಳಿದು ಬಂದಿದೆಯೆಂದು ಜ.23ರಂದು ಟಿಒಐ ವರದಿ ಮಾಡಿತ್ತು. ಕಾಣೆಯಾದ ದಿನ ಆಕೆ ಗುಪ್ತನೊಂದಿಗೆ 5 ಬಾರಿ ಮಾತನಾಡಿದ್ದಳೆಂದು ವಿದ್ಯಾರ್ಥಿನಿಯ ಸೆಲ್‌ಫೋನ್ ದಾಖಲೆ ತಿಳಿಸಿತ್ತು.
ಪ್ರತ್ಯೂಷಾ ಇರುವಳೆಂದು ಆಕೆಯ ಫೋನ್ ದಾಖಲೆ ತೋರಿಸಿದ್ದ ಡೆಹ್ರಾಡೂನ್ ಸಮೀಪದ ಸ್ಥಳವೊಂದರ ಮನೆಯನ್ನೂ ಆಕೆಯ ಕುಟುಂಬ ಸದಸ್ಯರು ಹಾಗೂ ಉತ್ತರಾಂಚಲ ಪೊಲೀಸರು ಶೋಧಿಸಿದ್ದರು. ಕೊನೆಗೂ ಪ್ರತ್ಯೂಷಾ, ಗುಪ್ತನ ಆಶ್ರಮದಲ್ಲಿ ಪತ್ತೆಯಾದಳೆಂದು ಪೊಲೀಸ್ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.
ಗುಪ್ತ, ಪ್ರತ್ಯೂಷಾಳ ಬ್ರೈನ್‌ವಾಶ್ ಮಾಡಿದಂತಿತ್ತು. ಆಕೆ ಮೊದಲು ಮನೆಗೆ ಮರಳಲು ನಿರಾಕರಿಸಿದ್ದಳೆಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X