Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಯಾಚಿನ್ ಹುತಾತ್ಮನ ಅಂತ್ಯಕ್ರಿಯೆ:...

ಸಿಯಾಚಿನ್ ಹುತಾತ್ಮನ ಅಂತ್ಯಕ್ರಿಯೆ: ಶವಪೆಟ್ಟಿಗೆಯಲ್ಲಿ ಜಯಾ ಫೋಟೊ ಪ್ರದರ್ಶಿಸಿದ ಸಚಿವ

ವಾರ್ತಾಭಾರತಿವಾರ್ತಾಭಾರತಿ17 Feb 2016 7:08 PM IST
share
ಸಿಯಾಚಿನ್ ಹುತಾತ್ಮನ ಅಂತ್ಯಕ್ರಿಯೆ: ಶವಪೆಟ್ಟಿಗೆಯಲ್ಲಿ ಜಯಾ ಫೋಟೊ ಪ್ರದರ್ಶಿಸಿದ ಸಚಿವ

ಚೆನ್ನೈ: ತಮಿಳುನಾಡಿನ ರಾಜಕೀಯ ಪ್ರಚಾರದ ಗೀಳು ಸಿಯಾಚಿನ್ ಯೋಧನ ಅಂತ್ಯಸ್ಕಾರವನ್ನೂ ಬಿಟ್ಟಿಲ್ಲ. ಯೋಧನ ಅಂತ್ಯಕ್ರಿಯೆ ಸಂದರ್ಭ ಶವಪೆಟ್ಟಿಗೆಯ ಮುಂದೆ, ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಭಾವಚಿತ್ರವನ್ನು ಪ್ರದರ್ಶಿಸುವುದನ್ನು ಸಚಿವ ಮರೆಯಲಿಲ್ಲ!

ಸಿಯಾಚಿನ್‌ನಲ್ಲಿ ಭೀಕರ ಹಿಮಪಾತಕ್ಕೆ ಬಲಿಯಾದ ಯೋಧ ಜಿ.ಗಣೇಶನ್ ಅವರ ಅಂತ್ಯಕ್ರಿಯೆ ಮಧುರೈನಲ್ಲಿ ಮಂಗಳವಾರ ಬೆಳಿಗ್ಗೆ ನಡೆಯಿತು.

ಸಾರ್ವಜನಿಕರು ಯೋಧನಿಗೆ ಅಂತಿಮ ನಮನ ಸಲ್ಲಿಸಲು ಬಂದಿದ್ದ ಸಂದರ್ಭದಲ್ಲಿ ರಾಜ್ಯದ ಸಚಿವ ಸೆಲ್ಲೂರು ರಾಜು ಕೂಡಾ ಜಿಲ್ಲಾಧಿಕಾರಿ ರಾಘವ ರಾವ್ ಜತೆ ಅಲ್ಲಿಗೆ ಬಂದರು.

ರಾಜ್ಯ ಸರ್ಕಾರದ ಪರವಾಗಿ 10 ಲಕ್ಷ ರೂಪಾಯಿ ಪರಿಹಾರ ಹಸ್ತಾಂತರಿಸಲು ಬಂದಿದ್ದ ಸಚಿವ, ಇದರ ಗೌರವ ಯಾರಿಗೆ ಸಲ್ಲಬೇಕು ಎಂಬ ಬಗ್ಗೆ ಯಾವುದೇ ಸಂಶಯ ಇರಬಾರದು ಎಂದು ಯೋಚಿಸಿದರು. ತಕ್ಷಣ ಮುಖ್ಯಮಂತ್ರಿ ಜಯಲಲಿತಾ ಅವರ ಭಾವಚಿತ್ರವನ್ನು ಶವಪೆಟ್ಟಿಗೆ ಮುಂದೆ ಪ್ರದರ್ಶಿಸಿದರು. ಮಗನ ಸಾವಿನ ದುಃಖ ತಡೆಯಲಾಗದೇ ಅಳುತ್ತಿದ್ದ ತಾಯಿಯತ್ತ ಸನ್ನೆ ಮಾಡಿ, ಯಾರು ಹಣ ಮಂಜೂರು ಮಾಡಿದ್ದಾರೆ ಎಂದು ನೋಡುವಂತೆ ಸೂಚಿಸಿದರು. ಆ ದುಃಖದ ಮಡುವಿನಲ್ಲಿದ್ದರೂ ತಾಯಿ ಕೃತಜ್ಞತೆಯಿಂದ ಕೈಮುಗಿದರು.

ಇದು ಸೇರಿದ್ದ ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಯಿತು. ಇದು ಹುತಾತ್ಮನ ಶವಪೆಟ್ಟಿಗೆ ಮುಂದೆ ಅವಿವೇಕದ ಹಾಗೂ ನಾಚಿಕೆಗೇಡಿನ ಕ್ರಮ ಎಂದು ಸ್ಥಳೀಯ ನಿವಾಸಿ ಪ್ರೇಮ್ ಆಕ್ರೋಶ ವ್ಯಕ್ತಪಡಿಸಿದರು. ಸಚಿವ ಹಾಗೂ ಜಿಲ್ಲಾಧಿಕಾರಿ ಪ್ರತಿಕ್ರಿಯೆಗೆ ಲಭ್ಯರಿರಲಿಲ್ಲ.

ಈ ವರ್ಷಾಂತ್ಯದಲ್ಲಿ ತಮಿಳುನಾಡು ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಎಐಎಡಿಎಂಕೆ ಕಾರ್ಯಕರ್ತರು ಸಾಧ್ಯವಿರುವ ಕಡೆಗಳಲ್ಲೆಲ್ಲ ಜಯಲಲಿತಾ ಅವರನ್ನು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಇತ್ತೀಚಿನ ಪ್ರವಾಹ ಪರಿಹಾರ ಕಾರ್ಯಾಚರಣೆ ವೇಳೆ ಕೂಡಾ ಜನರು ಹಾಗೂ ಸ್ವಯಂಸೇವಾ ಸಂಸ್ಥೆಗಳು ನೀಡಿದ್ದ ಪರಿಹಾರ ಸಾಮಗ್ರಿಗಳ ಮೇಲೆ ಜಯಲಲಿತಾ ಅವರ ಭಾವಚಿತ್ರದ ಸ್ಟಿಕ್ಕರ್ ಅಂಟಿಸಿದ್ದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಕಳೆದ ವಾರ ಪಕ್ಷ ಜಯಲಲಿತಾ ಅವರ 68ನೇ ಹುಟ್ಟುಹಬ್ಬದ ಅಂಗವಾಗಿ ಸಾಮೂಹಿಕ ವಿವಾಹವನ್ನು ಆಯೋಜಿಸಿತ್ತು. ನೂತನ ವಧೂವರರಿಗೆ ಜಯಲಲಿತಾ ಭಾವಚಿತ್ರವಿದ್ದ ಬಾಸಿಂಗಗಳನ್ನು ಕಟ್ಟಲಾಗಿತ್ತು!

share
ವಾರ್ತಾಭಾರತಿ
ವಾರ್ತಾಭಾರತಿ
Next Story
X