Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊವಿಟ್ಜರ್ ಜೋಡಣೆ, ಪರೀಕ್ಷೆ: ಮಹೀಂದ್ರ...

ಹೊವಿಟ್ಜರ್ ಜೋಡಣೆ, ಪರೀಕ್ಷೆ: ಮಹೀಂದ್ರ ಜತೆ ಬಿಎಇ ಒಪ್ಪಂದ

ವಾರ್ತಾಭಾರತಿವಾರ್ತಾಭಾರತಿ17 Feb 2016 7:40 PM IST
share
ಹೊವಿಟ್ಜರ್ ಜೋಡಣೆ, ಪರೀಕ್ಷೆ: ಮಹೀಂದ್ರ ಜತೆ ಬಿಎಇ ಒಪ್ಪಂದ

ನವದೆಹಲಿ: ಸುಮಾರು 25 ಕಿಲೋಮೀಟರ್ ದೂರದ ವರೆಗೂ ಗುರಿ ಇಡಬಹುದಾದ ಲಘುತೂಕದ ಫಿರಂಗಿ ತೋಪುಗಳ ಜೋಡಣೆ ಮತ್ತು ಪರೀಕ್ಷೆಗೆ ಮಹೀಂದ್ರ ಕಂಪನಿಯನ್ನು ಭಾರತದಲ್ಲಿ ಪಾಲುದಾರ ಸಂಸ್ಥೆಯಾಗಿ ಆಯ್ಕೆ ಮಾಡಿರುವುದಾಗಿ, 145 ಎಂ-777 ಹೊವಿಟ್ಜರ್‌ಗಳನ್ನು ಸರಬರಾಜು ಮಾಡಲು 700 ದಶಲಕ್ಷ ಡಾಲರ್ ಗುತ್ತಿಗೆ ಪಡೆದಿರುವ ಬಿಎಇ ಸಿಸ್ಟಮ್ಸ್ ಪ್ರಕಟಿಸಿದೆ.

"ವಿದೇಶಿ ಸೇನಾ ಮಾರಾಟ ವ್ಯವಸ್ಥೆ ಮೂಲಕ ಬಂದೂಕುಗಳನ್ನು ಖರೀದಿಸಲಾಗಿದ್ದರೂ, ಅದರ ಬಿಡಿಭಾಗಗಳು, ನಿರ್ವಹಣೆ ಹಾಗೂ ಮದ್ದುಗುಂಡುಗಳನ್ನು ಭಾರತೀಯ ವ್ಯವಸ್ಥೆಯ ಮೂಲಕ ನಿರ್ವಹಿಸಲಾಗುತ್ತದೆ" ಎಂದು ರಕ್ಷಣಾ ಮೂಲಗಳು ಹೇಳಿವೆ.

145 ಇಂಥ ಫಿರಂಗಿಗಳ (ಎಂ777ಎ2ಎಲ್‌ಡಬ್ಲ್ಯು155)ನ್ನು ಭಾರತಕ್ಕೆ ಸರಬರಾಜು ಮಾಡುವ ಬಗ್ಗೆ ಭಾರತ ಹಾಗು ಅಮೆರಿಕ ಚರ್ಚೆ ನಡೆಸುತ್ತಿವೆ. ಇವುಗಳ ಜೋಡಣೆ, ಸಮಗ್ರಗೊಳಿಸುವಿಕೆ ಹಾಗೂ ಪರೀಕ್ಷೆ ನಡೆಸಲು ಮಹೇಂದ್ರ ಜೊತೆ ಮುಂದಿನ ವಾರಗಳಲ್ಲಿ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಕಂಪನಿ ಪ್ರಕಟಿಸಿದೆ.

ಈ ಶಸ್ತ್ರವ್ಯವಸ್ಥೆಯನ್ನು ಹೆಚ್ಚು ಸ್ವದೇಶೀಕರಿಸುವ ಪ್ರಸ್ತಾವವನ್ನು ಬಿಎಇ ಕಳೆದ ವರ್ಷ ಅಮೆರಿಕ ಸರ್ಕಾರಕ್ಕೆ ಸಲ್ಲಿಸಿತ್ತು. ಇದರ ಅನ್ವಯ ಭಾರತದ ದೇಶೀಯ ಕಂಪನಿಯ ಜತೆ ಒಪ್ಪಂದ ಮಾಡಿಕೊಳ್ಳಲು ನಿರ್ಧರಿಸಲಾಗಿತ್ತು. ಇದೀಗ ಕಂಪನಿಯನ್ನು ಆಯ್ಕೆ ಮಾಡಿಕೊಂಡ ಬಳಿಕ, ಅಗತ್ಯತೆಗಳನ್ನು ಪೂರೈಸಲು ಕಂಪನಿ ಸಾಮರ್ಥ್ಯ ಹೊಂದಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಯಲಿದೆ. ಬಳಿಕ ಮುಂದಿನ ಹಂತದಲ್ಲಿ ಭಾರತದಲ್ಲಿ ಅದನ್ನು ಮಹತ್ವದ ಪಾಲುದಾರ ಕಂಪನಿಯಾಗಿ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಕಂಪನಿ ವಿವರಿಸಿದೆ.

ಬಿಎಇ ಸಿಸ್ಟಮ್ಸ್‌ನ ಶಸ್ತ್ರಾಸ್ತ್ರ ವಿಭಾಗದ ಪ್ರಧಾನ ವ್ಯವಸ್ಥಾಪಕ ಹಾಗೂ ಉಪಾಧ್ಯಕ್ಷ ಜೋಯ್ ಸೆಂಟಲ್ ಈ ಬಗ್ಗೆ ಹೇಳಿಕೆ ನೀಡಿ, ಭಾರತದಲ್ಲಿ ರಕ್ಷಣಾ ಉತ್ಪಾದನೆಯ ಸಂಸ್ಥಾಪಕ ಪಾಲುದಾರನಾಗಿ ಮಹೇಂದ್ರ ಕಂಪನಿಯನ್ನು ಆಯ್ಕೆ ಮಾಡಿಕೊಂಡಿದೆ ಎಂದು ಹೇಳಿದ್ದಾರೆ.

ಉಭಯ ಸರ್ಕಾರಗಳು ಒಪ್ಪಂದ ಮಾಡಿಕೊಳ್ಳಲು ಬೇಕಾದ ಬೆಂಬಲವನ್ನು ನಾವು ನೀಡಲಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಭಾರತೀಯ ಸೇನೆಗೆ ಮಹೀಂದ್ರ ಕಂಪನಿ ಕಾರ್ಯಾಚರಣೆ ಲಾಭ ಹಾಗೂ ಅತ್ಯುನ್ನತ ತಂತ್ರಜ್ಞಾನದ ಸೌಲಭ್ಯ ಒದಗಿಸಿಕೊಡಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X