Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಾಕ್ ಜೈಲಿನಲ್ಲಿ ಕೊಳೆಯುತ್ತಿರುವ ಮುಂಬೈನ...

ಪಾಕ್ ಜೈಲಿನಲ್ಲಿ ಕೊಳೆಯುತ್ತಿರುವ ಮುಂಬೈನ ಎಂಜಿನಿಯರ್ ಬಿಡುಗಡೆಗೆ ಹೆತ್ತವರ ಮೊರೆ

ವಾರ್ತಾಭಾರತಿವಾರ್ತಾಭಾರತಿ17 Feb 2016 9:37 PM IST
share
ಪಾಕ್ ಜೈಲಿನಲ್ಲಿ ಕೊಳೆಯುತ್ತಿರುವ ಮುಂಬೈನ ಎಂಜಿನಿಯರ್ ಬಿಡುಗಡೆಗೆ ಹೆತ್ತವರ ಮೊರೆ

ಮುಂಬೈ,ಫೆ.17: ಗೂಢಚರ್ಯೆ ಆರೋಪದಲ್ಲಿ ಪಾಕಿಸ್ತಾನದ ಜೈಲಿನಲ್ಲಿ ಕೊಳೆಯುತ್ತಿರುವ ಮುಂಬೈನ ಎಂಜಿನಿಯರ್‌ವೋರ್ವನ ಬಗ್ಗೆ ಅನುಕಂಪ ತೋರಿಸುವಂತೆ ಮತ್ತು ಮಾನವೀಯ ನೆಲೆಯಲ್ಲಿ ಬಿಡುಗಡೆಗೊಳಿಸುವಂತೆ ಅವರ ಹೆತ್ತವರು ಆ ರಾಷ್ಟ್ರದ ಅಧಿಕಾರಿಗಳನ್ನು ಕೋರಿಕೊಂಡಿದ್ದಾರೆ.

ನನ್ನ ಮಗನ ಪ್ರಕರಣವನ್ನು ಅನುಕಂಪದಿಂದ ಮತ್ತು ರಾಜಕೀಯವನ್ನು ಮೀರಿ ಪರಿಶೀಲಿಸುವಂತೆ ನಾನು ಭಾರತ ಮತ್ತು ಪಾಕಿಸ್ತಾನ ಸರಕಾರಗಳನ್ನು ಕೋರುತ್ತಿದ್ದೇನೆ ಎಂದು ಫೌಝಿಯಾ ಅನ್ಸಾರಿ ಹೇಳಿದರು. ಅವರ ಪುತ್ರ 31ರ ಹರೆಯದ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಪದವೀಧರ ಹಾಮಿದ್ ನೆಹಲ್ ಅನ್ಸಾರಿಗೆ ಪಾಕಿಸ್ತಾನದ ನ್ಯಾಯಾಲಯವು ಮೂರು ವರ್ಷಗಳ ಶಿಕ್ಷೆ ವಿಧಿಸಿ ಜೈಲಿಗೆ ತಳ್ಳಿದೆ.

ಆನ್‌ಲೈನ್‌ನಲ್ಲಿ ಸ್ನೇಹ ಬೆಳೆಸಿದ್ದ ಯುವತಿಯನ್ನು ಭೇಟಿಯಾಗಲು 2012ರಲ್ಲಿ ಅಫಘಾನಿಸ್ಥಾನದಿಂದ ಅಕ್ರಮವಾಗಿ ಪಾಕಿಸ್ತಾನವನ್ನು ಪ್ರವೇಶಿಸಿದ್ದ ಅನ್ಸಾರಿ ಆ ಬಳಿಕ ನಾಪತ್ತೆಯಾಗಿದ್ದ. ಬಳಿಕ ಆತನನ್ನು ಬಂಧಿಸಿ ಪಾಕಿಸ್ತಾನದ ಮಿಲಿಟರಿ ನ್ಯಾಯಾಲಯದಲ್ಲಿ ವಿಚಾರಣೆಗೊಳಪಡಿಸಿ ಗೂಢಚರ್ಯೆ ಆರೋಪವನ್ನು ಹೊರಿಸಿ ಅಪರಾಧಿಯೆಂದು ಘೋಷಿಸಲಾಗಿತ್ತು.

ಆತನ ಹೆತ್ತವರು ಪಾಕಿಸ್ತಾನಿ ನ್ಯಾಯಾಲಯವೊಂದರಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿದ್ದು,ತಮ್ಮ ಮಗ ಪಾಕಿಸ್ತಾನಿ ಸೇನೆಯ ವಶದಲ್ಲಿದ್ದಾನೆಂಬ ವಿಷಯ ಅವರಿಗೆ ಜನವರಿಯಲ್ಲಿ ತಿಳಿದುಬಂದಿತ್ತು. ರವಿವಾರ ಖೈಬರ್ ಪಕ್ತುಂಖ್ವಾ ಪ್ರಾಂತ್ಯದ ಕೋಹಟ್‌ನ ನ್ಯಾಯಾಲಯವು ಅನ್ಸಾರಿಯನ್ನು ಅಪರಾಧಿಯೆಂದು ಘೋಷಿಸಿದ್ದು, ಪೇಷಾವರ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ.

ಅನ್ಸಾರಿಯ ತಂದೆ ನೆಹಲ್ ಅಹ್ಮದ್ ಅನ್ಸಾರಿ(59) ಅವರು ನಿವೃತ್ತ ಬ್ಯಾಂಕ್ ಮ್ಯಾನೇಜರ್ ಆಗಿದ್ದರೆ,ಅಣ್ಣ ಖಾಲಿದ್ ಅನ್ಸಾರಿ(32) ದಂತವೈದ್ಯರಾಗಿದ್ದಾರೆ.

ನಾವು ಆಸೆಯನ್ನು ಬಿಟ್ಟಿಲ್ಲ, ನಾವು ದೇವರಲ್ಲಿ ವಿಶ್ವಾಸವಿರಿಸಿದ್ದೇವೆ. ಭಾರತ ಸರಕಾರ ಮತ್ತು ನ್ಯಾಯಾಂಗದಲ್ಲಿ ನಮಗೆ ವಿಶ್ವಾಸವಿದೆ ಮತ್ತು ಆತನನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ಎಲ್ಲ ಪ್ರಯತ್ನಗಳನ್ನೂ ನಾವು ಮಾಡುತ್ತೇವೆ ಎಂದು ಫೌಝಿಯಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X