Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸವಿವರ ಯೋಜನಾ ವರದಿ ಸಿದ್ಧ

ಸವಿವರ ಯೋಜನಾ ವರದಿ ಸಿದ್ಧ

‘ಬೆಂಗಳೂರು ಉಪನಗರ ರೈಲು ಸಂಚಾರ ವ್ಯವಸ್ಥೆ’

ವಾರ್ತಾಭಾರತಿವಾರ್ತಾಭಾರತಿ17 Feb 2016 11:39 PM IST
share

ಬೆಂಗಳೂರು, ಫೆ.17: ಬೆಂಗಳೂರು ಉಪನಗರ ರೈಲು ಸಂಚಾರ ವ್ಯವಸ್ಥೆ ಅನುಷ್ಠಾಗೊಳಿಸುವ ಮೂಲಕ ಬೆಂಗಳೂರು ಸುತ್ತಲಿನ ಇತರ ನಗರಗಳು ಹಾಗೂ ಪಟ್ಟಣಗಳೊಂದಿಗೆ ಜೋಡಿಸುವ ಯೋಜನೆಗೆ ಭಾರತ ಸರಕಾರದ ರೈಲ್ವೆ ಮಂತ್ರಾಲಯದ ಸಹಮತಿಯನ್ನು ಪಡೆಯಲು ರಾಜ್ಯ ಸರಕಾರವು ತನ್ನ ಪ್ರಯತ್ನ ಮುಂದುವರಿಸಿದೆ.
ರಾಜ್ಯ ಸರಕಾರವು ತಾನಾಗಿಯೇ ಬೆಂಗಳೂರು ಉಪನಗರ ರೈಲು ಯೋಜನೆಯ ಒಂದನೆ ಹಂತವನ್ನು ಶೀಘ್ರ ಅನುಷ್ಠಾನಗೊಳಿಸುವ ಸಲುವಾಗಿ ಸವಿವರ ಯೋಜನಾ ವರದಿ(ಡಿಪಿಆರ್)ಯೊಂದನ್ನು ಸಿದ್ಧಪಡಿಸಿದೆ. ಕಳೆದ ಸಾಲಿನ ಆ.14ರಂದು ರೈಲ್ವೆ ರಾಜ್ಯ ಸಚಿವರು ಮುಖ್ಯಮಂತ್ರಿಗೆ ಬರೆದಿರುವ ಪತ್ರದಲ್ಲಿ ಉಪನಗರ ರೈಲು ಯೋಜನೆಗೆ ಸಂಬಂಧಿಸಿದಂತೆ ಸವಿವರ ಯೋಜನಾ ವರದಿಯನ್ನು ಒಪ್ಪಿಸುವಂತೆ ಕೋರಿದ್ದರು.
ರೈಟ್ಸ್ ಸಂಸ್ಥೆಯವರು ಈ ಸಂಬಂಧ ಕರಡು ಸವಿವರ ಯೋಜನಾ ವರದಿಯನ್ನು ತಯಾರಿಸಿದ್ದು, ಈ ವರದಿಯನ್ನು ರೈಲ್ವೆ ಮಂತ್ರಾಲಯದ ರೈಲ್ವೆ ಮಂಡಳಿಯ ಸಲಹೆಗಾರರು ಹಾಗೂ ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ(ಜನರಲ್ ಮ್ಯಾನೇಜರ್) ಅವರೊಂದಿಗೆ ವಿನಿಮಯ ಮಾಡಿಕೊಳ್ಳಲಾಗಿದೆ.
ಈ ವರದಿಯ ಕುರಿತು ರೈಲ್ವೆಯ ದಂಡು ಪ್ರದೇಶದ ನಿರ್ಮಾಣ/ಯೋಜನೆಯ ಮುಖ್ಯ ಇಂಜಿನಿಯರ್ ಕೆಲವು ಅಂಶಗಳ ಮೇಲೆ ಸ್ಪಷ್ಟೀಕರಣ ಕೋರಿದ್ದು, ಅವುಗಳ ಅನುಪಾಲನೆಗಾಗಿ ರೈಟ್ಸ್ ಸಂಸ್ಥೆಯವರು ಪುನರ್ ಪರಿಶೀಲಿಸಿ ಅಗತ್ಯ ಅನುಪಾಲನಾ ವರದಿಯನ್ನು ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಹಾಗೂ ಬೆಂಗಳೂರಿನ ನೈಋತ್ಯ (ಸೌತ್ ವೆಸ್ಟ್ರನ್) ರೈಲ್ವೆ ಮುಖ್ಯ ಇಂಜಿನಿಯರ್(ನಿರ್ಮಾಣ/ಯೋಜನಾ)ಗೆ ಪ್ರಸ್ತುತ ಸಾಲಿನ ಜ.27ರಂದು ಸಲ್ಲಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರದ ರೈಲ್ವೆ ಸಚಿವರಿಗೆ ಪತ್ರ ಬರೆದು ಈ ಯೋಜನೆ ಅನುಷ್ಠಾನದಲ್ಲಿ ಎದುರಾಗಬಹುದಾದ ಕೆಲವು ಗುರುತರ ಸವಾಲುಗಳನ್ನು ಎದುರಿಸಲು ಅಗತ್ಯ ಕ್ರಮಗಳನ್ನು ಸರಿಯಾದ ಹಂತದಲ್ಲಿ ರಾಜ್ಯ ಸರಕಾರವು ತೆಗೆದುಕೊಳ್ಳುವುದಾಗಿ ತಿಳಿಸಿ ಈ ಪ್ರಸ್ತಾವನೆಗೆ ಒಪ್ಪಿಗೆಯನ್ನು ನೀಡಬೇಕೆಂದು ಕೋರಿದ್ದಾರೆ.
ಬೆಂಗಳೂರಿನ ಬಹು ದಿನದ ಬೇಡಿಕೆಯಾದ ಈ ಯೋಜನೆಗೆ ಭಾರತ ಸರಕಾರದ ಸಹಮತಿಯನ್ನು ನೀಡಬೇಕೆಂದು ಕೋರಿ ಫೆ.4ರಂದು ರೈಲ್ವೆ ಸಚಿವರು ಬೆಂಗಳೂರಿಗೆ ಭೇಟಿ ನೀಡದಿದ್ದಾಗ ಭಿನ್ನವತ್ತಳೆಯನ್ನು ಅರ್ಪಿಸಲಾಗಿದೆ ಎಂದು ರಾಜ್ಯ ನಗರ ಭೂ ಸಾರಿಗೆ ನಿರ್ದೇಶನಾಲಯದ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X