Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾನು ಪ್ರವಾದಿ ಮಹಮ್ಮದ್ ರ ಯ ದೊಡ್ಡ...

ನಾನು ಪ್ರವಾದಿ ಮಹಮ್ಮದ್ ರ ಯ ದೊಡ್ಡ ಅಭಿಮಾನಿ : ರಾಮ್ ಜೇಠ್ಮಲಾನಿ

ವಾರ್ತಾಭಾರತಿವಾರ್ತಾಭಾರತಿ19 Feb 2016 3:56 PM IST
share
ನಾನು ಪ್ರವಾದಿ ಮಹಮ್ಮದ್ ರ ಯ ದೊಡ್ಡ ಅಭಿಮಾನಿ : ರಾಮ್ ಜೇಠ್ಮಲಾನಿ

ನವದೆಹಲಿ : ಆಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕೆಂಬ ಬೇಡಿಕೆಯನ್ನು ಬಲವಾಗಿ ಸಮರ್ಥಿಸಿರುವ ಹಿರಿಯ ನ್ಯಾಯವಾದಿ ಹಾಗೂ ಮಾಜಿ ಕೇಂದ್ರ ಕಾನೂನು ಸಚಿವ ರಾಮ್ ಜೇಠ್ಮಲಾನಿ ಇಸ್ಲಾಂ ಧರ್ಮದ ಬಗ್ಗೆ ಶಿಕ್ಷಣ ನೀಡುವ ಯೋಚನೆಯ ಬಗ್ಗೆಯೂ ತಮ್ಮ ಸಹಮತ ವ್ಯಕ್ತಪಡಿಸಿದ್ದಾರೆ.

‘‘ನಾನೊಬ್ಬ ಹಿಂದೂ ಎಂಬುದು ರಹಸ್ಯವೇನಲ್ಲ. ನಾನು ಹುಟ್ಟಿದ್ದು ಹಿಂದುವಾಗಿ. ಆದರೆ ನಾನು ಈ ಬೃಹತ್ ಸಂಸ್ಥೆಯ ಸಂಸ್ಥಾಪಕ ಸರ್ ಸಯ್ಯದ್ ಅಹಮದ್ ಖಾನ್ ಅವರ ಅಭಿಮಾನಿ,’’ ಎಂದು ಸಮಾರಂಭವೊಂದರಲ್ಲಿ ಮಾತನಾಡುತ್ತಾ ಜೇಠ್ಮಲಾನಿ ಹೇಳಿದರು.

‘‘ಆಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯವನ್ನು ಮುಸ್ಲಿಮರ ಶಿಕ್ಷಣಕ್ಕಾಗಿ ಮುಸ್ಲಿಮರೇ ಸ್ಥಾಪಿಸಿದ ಸಂಸ್ಥೆಯೆಂದು ಗವರ್ನರ್ ಜನರಲ್ ಅವರ ಹೇಳಿಕೆ ತಿಳಿಸುತ್ತದೆ,’’ಎಂದರು ಜೇಠ್ಮಲಾನಿ.

ತಾನು ಹಲವಾರು ಧರ್ಮಗಳ ಅಧ್ಯಯನ ನಡೆಸಿದ್ದರೂ ಪ್ರವಾದಿ ಮಹಮ್ಮದ್ ಅವರ ಶಿಕ್ಷಣದ ಬಗೆಗಿನ ದೃಷ್ಟಿಕೋನ ತನಗೆ ಹೆಚ್ಚು ಹಿಡಿಸಿದೆಯೆಂದರು.

‘‘ಒಬ್ಬ ಹಿಂದುವಾಗಿ ನಾನು ಇಸ್ಲಾಂ ಸೇರಿದಂತೆ ಎಲ್ಲಾ ಧರ್ಮಗಳ ವಿದ್ಯಾರ್ಥಿ. ನಾನು ಪ್ರವಾದಿ ಮಹಮ್ಮದರ ದೊಡ್ಡ ಅಭಿಮಾನಿ. ಪ್ರವಾದಿಯವರು ಹೇಳಿದಂತೆ, ನೀವು ಜ್ಞಾನವನ್ನು ಅರಸಿ ನಡೆದರೆ, ನೀವು ದೇವರತ್ತ ನಡೆದಂತೆ ಎಂದು ತಮ್ಮ ಅನುಯಾಯಿಗಳಿಗೆ ಹೇಳಿದ ಬೇರ್ಯಾವುದೇ ಧರ್ಮದ ನಾಯಕನ ಬಗ್ಗೆ ನನಗೆ ಹೇಳಿ,"" ಎಂದು ದೆಹಲಿ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ರಾಜೇಂದ್ರ ಸಾಚಾರ್ ಜತೆ ವೇದಿಕೆ ಹಂಚಿದ ಜೇಠ್ಮಲಾನಿ ಹೇಳಿದರು.

ತಮ್ಮ ದೃಷ್ಟಿಕೋನದಲ್ಲಿ ಇಸ್ಲಾಂ ಧರ್ಮದ ಮೂಲಸಾರವನ್ನು ವಿವರಿಸಿದ ಅವರು ಇಂತಹ ಮೂಲಸಾರವನ್ನು ಹೊಂದಿದ ಧರ್ಮವನ್ನು ಗೌರವಿಸಬೇಕಲ್ಲದೆ, ಪ್ರವಾದಿಯನ್ನು ಆರಾಧಿಸಬೇಕು, ಎಂದು ಅವರು ಅಭಿಪ್ರಾಯ ಪಟ್ಟರು.

‘‘ಪ್ರತಿಯೊಂದು ಧರ್ಮದಲ್ಲೂ ಎಸೆಯಬಹುದಾದಂತಹ ಕಲ್ಮಶಗಳಿರುತ್ತವೆಯೆಂದು ಹೇಳಿದ ಜೇಠ್ಮಲಾನಿ ‘‘ಪ್ರಾಯಶಃ ನನ್ನ ಧರ್ಮದಲ್ಲಿ ಇತರ ಬೇರ್ಯಾವುದೇ ಧರ್ವದಲ್ಲಿರುವುದಕ್ಕಿಂತ ಇಂತಹ ಕಲ್ಮಶಗಳು ಅಧಿಕವಾಗಿವೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X