Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾವೋವಾದಿಗಳೊಂದಿಗೆ ಮಾತುಕತೆಗೆ ಕೇಂದ್ರ...

ಮಾವೋವಾದಿಗಳೊಂದಿಗೆ ಮಾತುಕತೆಗೆ ಕೇಂದ್ರ ಸಿದ್ಧ : ರಾಜನಾಥ ಸಿಂಗ್

ವಾರ್ತಾಭಾರತಿವಾರ್ತಾಭಾರತಿ19 Feb 2016 5:22 PM IST
share
ಮಾವೋವಾದಿಗಳೊಂದಿಗೆ ಮಾತುಕತೆಗೆ ಕೇಂದ್ರ ಸಿದ್ಧ : ರಾಜನಾಥ ಸಿಂಗ್

ಕೋರಾಪತ್(ಒಡಿಶಾ),ಫೆ.19: ಮಾವೋವಾದಿಗಳು ಬೇಷರತ್ ಆಗಿ ಹಿಂಸೆಯನ್ನು ತ್ಯಜಿಸಿದರೆ ಅವರೊಂದಿಗೆ ಮಾತುಕತೆಗಳಿಗೆ ಕೇಂದ್ರವು ಸಿದ್ಧವಿದೆ ಎಂದು ಕೇಂದ್ರ ಗೃಹಸಚಿವ ರಾಜನಾಥ ಸಿಂಗ್ ಅವರು ಶುಕ್ರವಾರ ಇಲ್ಲಿ ಹೇಳಿದರು.

ನಕ್ಸಲ್ ಪೀಡಿತ ಕೋರಾಪತ್ ಜಿಲ್ಲೆಯಲ್ಲಿ ಎಡಪಂಥೀಯ ಉಗ್ರವಾದದಿಂದ ಸೃಷ್ಟಿಯಾಗಿರುವ ಪರಿಸ್ಥಿತಿಯನ್ನು ಪುನರ್‌ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಹಿಂಸೆಯ ಮಾರ್ಗವನ್ನು ತೊರೆದು ಮುಖ್ಯವಾಹಿನಿಗೆ ಸೇರುವಂತೆ ಮಾವೋವಾದಿಗಳಿಗೆ ಮನವಿ ಮಾಡಿಕೊಳ್ಳಲು ನಾನು ಬಯಸುತ್ತೇನೆ. ಯಾವುದೇ ಷರತ್ತುಗಳಿಲ್ಲದೆ ಹಿಂಸೆಯನ್ನು ತೊರೆದರೆ ಅವರೊಂದಿಗೆ ಮಾತಕತೆಗಳನ್ನು ನಡೆಸಲು ಕೇಂದ್ರವು ಸಿದ್ಧವಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಿಂಸೆಗೆ ಸ್ಥಾನವಿಲ್ಲ ಎಂದ ಅವರು, ಮಾವೋವಾದಿಗಳು ಶಸ್ತ್ರಾಸ್ತ್ರಗಳನ್ನು ತೊರೆದು ಮಾತುಕತೆಗಳಿಗೆ ಮುಂದಾಗಬೇಕು ಎಂದರು.

ಎನ್‌ಡಿಎ ಸರಕಾರವು ಹಲವಾರು ಕಲ್ಯಾಣ ಮತ್ತು ಅಭಿವೃದ್ಧಿ ಯೋಜನೆಗಳನ್ನು ಆರಂಭಿಸಿದ್ದು, ಮಾವೋವಾದಿಗಳು ಶಸ್ತ್ರಾಸ್ತ್ರಗಳನ್ನು ತೊರೆದು ಈ ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಎಂದು ಅವರು ನುಡಿದರು.

ಕೆಲವು ಮಾವೋವಾದಿಗಳು ಕೊಲ್ಲಲ್ಪಟ್ಟಿರುವ ಜಾರ್ಖಂಡ್ ಮತ್ತು ಛತ್ತೀಸ್‌ಗಡಗಳಲ್ಲಿ ಪೊಲೀಸ್ ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡ ಅವರು, ಕೆಲವೊಮ್ಮೆ ಭದ್ರತಾ ಪಡೆಗಳು ಆತ್ಮರಕ್ಷಣೆಗಾಗಿ ಪ್ರತಿದಾಳಿಗಳನ್ನು ನಡೆಸುವುದು ಅನಿವಾರ್ಯವಾಗಿರುತ್ತದೆ ಮತ್ತು ಇಂತಹ ಸಂದರ್ಭಗಳಲ್ಲಿ ನಕ್ಸಲ್‌ರು ಕೊಲ್ಲಲ್ಪಡುತ್ತಾರೆ ಎಂದರು.

ಮಾವೋವಾದಿ ನಿಗ್ರಹ ಕಾರ್ಯಾಚರಣೆಗಳಲ್ಲಿ ಒಡಿಶಾ ಸರಕಾರ,ರಾಜ್ಯ ಪೊಲೀಸ್,ಆಡಳಿತ ಮತ್ತು ಅರೆ ಮಿಲಿಟರಿ ಪಡೆಗಳ ಪಾತ್ರವನ್ನು ಪ್ರಶಂಸಿಸಿದ ಅವರು ಇದಕ್ಕಾಗಿ ಅಧಿಕಾರಿಗಳನ್ನು ಅಭಿನಂದಿಸಿದರು.

ನೆರೆಯ ಜಾರ್ಖಂಡ್ ಮತ್ತು ಛತ್ತೀಸ್‌ಗಡಗಳಲ್ಲಿ ಎಡಪಂಥೀಯ ಉಗ್ರವಾದದ ಹಾವಳಿಯ ಹಿನ್ನೆಲೆಯಲ್ಲಿ ನಕ್ಸಲ್ ಪೀಡಿತ ಪ್ರದೇಶಗಳಿಗೆ ಅವರ ಭೇಟಿಯು ಮಹತ್ವವನ್ನು ಪಡೆದುಕೊಂಡಿದೆ ಎಂದ ಮೂಲಗಳು, ಒಡಿಶಾ-ಆಂಧ್ರಪ್ರದೇಶ ಗಡಿ ಪ್ರದೇಶಗಳಲ್ಲಿನ ಸ್ಥಿತಿಯು ಕೂಡ ಕಳವಳಕ್ಕೆ ಕಾರಣವಾಗಿದೆ ಎಂದು ತಿಳಿಸಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X