Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರ್‌ಟಿಇ-ಆರ್‌ಟಿಐ ಕಾಯ್ದೆಗಳ ದುರುಪಯೋಗ:...

ಆರ್‌ಟಿಇ-ಆರ್‌ಟಿಐ ಕಾಯ್ದೆಗಳ ದುರುಪಯೋಗ: ಸದಾನಂದಗೌಡ ಅಸಮಾಧಾನ

ಎಜು ಸ್ಟೇಟಸ್ ಇನ್ ಕರ್ನಾಟಕ-ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ19 Feb 2016 11:44 PM IST
share
ಆರ್‌ಟಿಇ-ಆರ್‌ಟಿಐ ಕಾಯ್ದೆಗಳ ದುರುಪಯೋಗ: ಸದಾನಂದಗೌಡ ಅಸಮಾಧಾನ

ಬೆಂಗಳೂರು, ಫೆ.19: ದೇಶದ ಬಹುತೇಕ ಜನರನ್ನು ಗಮನದಲ್ಲಿರಿಸಿಕೊಂಡು ಸರಕಾರ ಜಾರಿಗೊಳಿಸಿದ ಆರ್‌ಟಿಇ ಮತ್ತು ಆರ್‌ಟಿಐ ಕಾಯ್ದೆಗಳು ಇಂದು ದುರುಪಯೋಗವಾಗುತ್ತಿವೆ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ರಾಜ್ಯ ಅನುದಾನ ರಹಿತ ಶಾಲಾಡಳಿತ ಮಂಡಳಿ ಆಯೋಜಿಸಿದ್ದ ಎಜು ಸ್ಟೇಟಸ್ ಇನ್ ಕರ್ನಾಟಕ ಎಂಬ ವಿಷಯದ ಕುರಿತ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ದೇಶದ ಬಹುತೇಕ ಜನರಿಗೆ ಸದುಪಯೋಗವಾಗಲೆಂದು ಸರಕಾರ ಆರ್‌ಟಿಇ ಮತ್ತು ಆರ್‌ಟಿಐ ಕಾಯ್ದೆಗಳನ್ನು ಅನುಷ್ಠಾನಗೊಳಿಸಿತು. ಆದರೆ ಈ ಶಾಸನಗಳನ್ನು ಇಂದು ದುರು ಪಯೋಗಪಡಿಸಿಕೊಳ್ಳುತ್ತಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಲು ಸರಕಾರದಿಂದ ಸಾಧ್ಯವಾಗುವುದಿಲ್ಲ. ಇಂತಹ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರಕಾರಕ್ಕೆ ಜನತೆಯ ಸಹಕಾರ ಮುಖ್ಯ. ಯಾವ ಕಾರ್ಯದಲ್ಲಿ ಪಾರದಶರ್ಕತೆಯಿರುತ್ತದೆಯೋ ಅಲ್ಲಿ ಸದುದ್ದೇಶ ಈಡೇರಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಎಲ್ಲ ಕ್ಷೇತ್ರಗಳಲ್ಲಿ ಸಮಸ್ಯೆಗಳಿರುತ್ತವೆ. ಕೇಂದ್ರ ಸರಕಾರ ಬಜೆಟ್‌ನಲ್ಲಿ ನ್ಯಾಯಾಂಗಕ್ಕೆ ಶೇ0.5ರಷ್ಟು ಮಾತ್ರ ಅನುದಾನ ನೀಡುತ್ತಿದೆ.ಆದರೆ ಶಿಕ್ಷಣ ಕ್ಷೇತ್ರಕ್ಕೆ ವಾರ್ಷಿಕ ಶೇ. 10ರಿಂದ 15 ರಷ್ಟು ಅನುದಾನವನ್ನು ಬಜೆಟ್‌ನಲ್ಲಿ ಹೆಚ್ಚಳ ಮಾಡುತ್ತದೆ. ಆದರೂ ಶಿಕ್ಷಣ ಕ್ಷೇತ್ರ ಸಮಸ್ಯೆಗಳಿಂದ ವಿಮುಕ್ತಿ ಹೊಂದಿಲ್ಲ ಎಂದು ಹೇಳಿದರು.
ಅನುದಾನ ರಹಿತ ಖಾಸಗಿ ಶಾಲೆಗಳು ತಮ್ಮ ಸಮಸ್ಯೆಗಳ ಕುರಿತು ಬಜೆಟ್‌ಗೂ ಮುನ್ನ ಸಲಹೆ ಮತ್ತು ಮನವಿ ಸಲ್ಲಿಸಿದರೆ ಸಮಸ್ಯೆಗಳಿಗೆ ಸ್ಪಂದಿಸಬಹುದಿತ್ತು. ಆದರೆ ಬಜೆಟ್ ಅವಧಿ ಮುಗಿಯುವ ಹಂತದಲ್ಲಿರುವುದರಿಂದ ಬಗೆಹರಿಸಲು ಸರಕಾರಕ್ಕೆ ಕಷ್ಟವಾಗುತ್ತದೆ ಎಂದು ಹೇಳಿದ ಅವರು, ಖಾಸಗಿ ಶಾಲೆಗಳ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ, ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ ಖಾಸಗಿ ಶಾಲೆಗಳ ಸಮಸ್ಯೆಗಳನ್ನು ಮನವರಿಕೆ ಮಾಡುತ್ತೇನೆ ಎಂದು ಸದಾನಂದಗೌಡ ಭರವಸೆ ನೀಡಿದರು.
  ವಿಚಾರ ಸಂಕಿರಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಜಯ್ ಸೇಠ್ ಮಾತನಾಡಿ, ಬಡ ಮತ್ತು ಮಾಧ್ಯಮ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಉಚಿತವಾಗಿ ನೀಡಲು ಆರ್‌ಟಿಇ ಜಾರಿಗೆ ಬಂತು. ಆದರೆ ಈಗ ಈ ಕಾಯ್ದೆ ಸಮಸ್ಯೆಗಳಿಗೆ ಸಿಲುಕಿಕೊಂಡಿದೆ. ಈ ಸಮಸ್ಯೆಗಳಿಗೆ ಕೂಡಲೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಹೇಳಿದರು.
ಆರ್‌ಟಿಐ ಕಾಯ್ದೆಯಡಿ ಶಿಕ್ಷಣ ನೀಡುತ್ತಿರುವ ಶಾಲೆಗಳಿಗೆ ಶುಲ್ಕ ಮರು ಪಾವತಿ ನೀಡಲು ನಾವು ಸಿದ್ಧರಿದ್ದೇವೆ. ಮಾರ್ಚ್ ತಿಂಗಳ ಅಂತ್ಯದೊಳಗೆ ಆರ್‌ಟಿಐ ಕಾಯ್ದೆಯಡಿ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಶಾಲೆಗಳು ಲೆಕ್ಕ ಪರಿಶೋಧನ ವರದಿಯನ್ನು ಸಲ್ಲಿಸಬೇಕು. ಅನುದಾನ ರಹಿತ ಖಾಸಗಿ ಶಾಲೆಗಳ ಸಮಸ್ಯೆಗಳನ್ನು ಮುಂದಿನ ಬಜೆಟ್ ಅಧಿವೇಶನದೊಳಗಾಗಿ ಸರಕಾರದ ಗಮನಕ್ಕೆ ತರಲಾಗುವುದು ಎಂದು ಅವರು ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X