Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಖಾಸಗಿ ಕ್ಷೇತ್ರದತ್ತ ಯುವಜನರನ್ನು...

ಖಾಸಗಿ ಕ್ಷೇತ್ರದತ್ತ ಯುವಜನರನ್ನು ನಿರ್ದೇಶಿಸುತ್ತಿರುವ ಕೊಲ್ಲಿ ದೇಶಗಳು

ಕುಸಿಯುತ್ತಿರುವ ತೈಲ ಬೆಲೆ ಪರಿಣಾಮ

ವಾರ್ತಾಭಾರತಿವಾರ್ತಾಭಾರತಿ19 Feb 2016 11:45 PM IST
share

ದುಬೈ, ಫೆ.19: ಪೆಟ್ರೋಡಾಲರ್‌ಗಳು ಕೊಲ್ಲಿಯ ಅರಬ್ ದೇಶಗಳಿಗೆ ದಶಕಗಳ ಕಾಲ ಸಂಪತ್ತಿನ ಹೊಳೆಯನ್ನೇ ಹರಿಸಿದವು. ಆಗ ಜನರಿಗೆ ತಕ್ಕಮಟ್ಟಿನ ಶಿಕ್ಷಣವನ್ನು ನೀಡಿ ಆರಾಮದಾಯಕ ಸರಕಾರಿ ಉದ್ಯೋಗವನ್ನು ನೀಡಿದರೆ ಸಾಕಿತ್ತು. ರಾಜಪ್ರಭುತ್ವಕ್ಕೆ ಯುವ ಜನರ ನಿಷ್ಠೆಯೂ ಲಭಿಸುತ್ತಿತ್ತು, ದೇಶದಲ್ಲಿ ಸ್ಥಿರತೆಯೂ ನೆಲೆಸಿತ್ತು.
ಆದರೆ, ಈಗ ಕಾಲ ಬದಲಾಗಿದೆ. ಕುಸಿಯುತ್ತಿರುವ ತೈಲ ಬೆಲೆಯಿಂದ ಕಂಗೆಟ್ಟಿರುವ ಕೊಲ್ಲಿ ಅರಬ್ ಸರಕಾರಗಳು, ಜಾಗತಿಕವಾಗಿ ಸ್ಪರ್ಧೆ ನೀಡಬಲ್ಲ ಉದ್ಯೋಗ ವಲಯದತ್ತ ತಮ್ಮ ಯುವ ಜನತೆಯನ್ನು ನಿರ್ದೇಶಿಸುತ್ತಿವೆ.
 ಲಂಡನ್‌ನ ಇಂಪೀರಿಯಲ್ ಕಾಲೇಜ್ ವಿದ್ಯಾರ್ಥಿ ತಾಲಿಬ್ ಅಲ್ಹಿನೈ ತನ್ನ ಸಹಪಾಠಿಗಳೊಂದಿಗೆ ಸೇರಿ ಡ್ರೋನ್‌ನ ಪ್ರತಿಕೃತಿಯನ್ನು ನಿರ್ಮಿಸಿದ್ದಾರೆ. ಇದು ಸರಕಾರಿ ಉದ್ಯೋಗ ಮಾತ್ರವಲ್ಲದೆ ಇತರ ಕ್ಷೇತ್ರಗಳಲ್ಲೂ ಕೊಲ್ಲಿ ಯುವಜನತೆ ತಮ್ಮನ್ನು ತೊಡಗಿಸಿಕೊಳ್ಳಬಲ್ಲರು ಎಂಬ ಧನಾತ್ಮಕ ಸಂದೇಶವನ್ನು ಹರಡುವಲ್ಲಿ ಯಶಸ್ವಿಯಾಗಿದೆ. ಅವರ ಈ ಪ್ರತಿಕೃತಿ ‘‘ಉತ್ತಮ ಕೆಲಸಕ್ಕಾಗಿ ಡ್ರೋನ್’’ ಎಂಬ ಸರಕಾರಿ ಪ್ರಾಯೋಜಿತ ಸ್ಪರ್ಧೆಯಲ್ಲಿ ಪ್ರಥಮ ಪ್ರಶಸ್ತಿ ಗಳಿಸಿದೆ.
‘‘ಕೊಲ್ಲಿ ಅರಬ್ ಯುವಜನರು ತಮ್ಮ ಕಲ್ಪನೆಗಳನ್ನು ಬಳಸಿ ಜೀವನೋಪಾಯ ಗಳಿಸಲು ಕಾತರರಾಗಿದ್ದಾರೆ’’ ಎಂದು ಅಲ್ಹಿನೈ ಹೇಳಿದರು.
 ‘‘ತೈಲದ ಸಂಪತ್ತು ಕೊನೆಯವರೆಗೂ ನಮ್ಮ ಜೊತೆಗಿರಲಾರದು ಎಂಬ ವಾಸ್ತವವನ್ನು ನನ್ನ ತಲೆಮಾರು ಅರ್ಥಮಾಡಿಕೊಂಡಿದೆ. ವಿಶೇಷವಾಗಿ ಹೊಸತನದ ಉಪಕ್ರಮಗಳು ಮತ್ತು ತಂತ್ರಜ್ಞಾನದ ಮೂಲಕ ನಮ್ಮ ಸಮಾಜದ ಋಣ ಸಂದಾಯ ಮಾಡುವ ವೇಗವನ್ನು ಹೆಚ್ಚಿಸುವ ಅಗತ್ಯವನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ನಾವು ಸೋಮಾರಿಗಳಾಗಿದ್ದೇವೆ ಎಂಬ ಸಾರ್ವತ್ರಿಕ ಅಭಿಪ್ರಾಯವನ್ನು ತೊಡೆದುಹಾಕುವ ಸಮಯ ಈಗ ಸನ್ನಿಹಿತವಾಗಿದೆ’’ ಎಂದು ಅವರು ಹೇಳುತ್ತಾರೆ.
ಕೊಲ್ಲಿ ಅರಬ್ ರಾಷ್ಟ್ರೀಯರ ಪೈಕಿ ಅರ್ಧಕ್ಕೂ ಹೆಚ್ಚಿನ ಮಂದಿ ಸರಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಕುವೈತ್‌ನಲ್ಲಿ ಈ ಸಂಖ್ಯೆ ಸುಮಾರು 80 ಶೇಕಡ.

ಶೇ2.8ಕ್ಕೆ ಕುಸಿಯಲಿರುವ ಆರ್ಥಿಕತೆ
ಕೊಲ್ಲಿ ಸಹಕಾರ ಮಂಡಳಿಯ ಆರು ತೈಲ ರಫ್ತು ದೇಶಗಳ ಆರ್ಥಿಕ ಬೆಳವಣಿಗೆ 2014ರಲ್ಲಿದ್ದ 3.25 ಶೇಕಡದಿಂದ 2016ರಲ್ಲಿ 2.8 ಶೇಕಡಕ್ಕೆ ಕುಸಿಯಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಭವಿಷ್ಯ ನುಡಿದಿದೆ. ಅದೇ ವೇಳೆ ಖಾಸಗಿ ಕ್ಷೇತ್ರದ ಆರ್ಥಿಕ ಬೆಳವಣಿಗೆಯೂ ಕುಸಿದಿದೆ.
ಈ ಪರಿಸ್ಥಿತಿಯನ್ನು ಎದುರಿಸುವುದಕ್ಕಾಗಿ ಯುಎಇ ಮತ್ತು ಸೌದಿ ಅರೇಬಿಯಗಳು ವಿವಿಧ ಸೇವೆಗಳನ್ನು ಸರಕಾರಿ ಕ್ಷೇತ್ರದಿಂದ ಖಾಸಗಿ ಕ್ಷೇತ್ರಕ್ಕೆ ಪರಭಾರೆ ಮಾಡಲು ಈ ವರ್ಷ ಹಲವಾರು ಉಪಕ್ರಮಗಳನ್ನು ಆರಂಭಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X