Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ಹಯ್ಯಾ ಬಿಡುಗಡೆಗೆ ಕಾರ್ನಾಡ್ ಆಗ್ರಹ

ಕನ್ಹಯ್ಯಾ ಬಿಡುಗಡೆಗೆ ಕಾರ್ನಾಡ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ19 Feb 2016 11:47 PM IST
share
ಕನ್ಹಯ್ಯಾ ಬಿಡುಗಡೆಗೆ ಕಾರ್ನಾಡ್ ಆಗ್ರಹ

ಬೆಂಗಳೂರು, ಫೆ.19: ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಹೀಗಾಗಿ ಆತನನ್ನು ಈ ಕೂಡಲೇ ಬಿಡುಗಡೆ ಮಾಡಬೇಕೆಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಆಗ್ರಹಿಸಿದ್ದಾರೆ.
ಶುಕ್ರವಾರ ‘ಜೆಎನ್‌ಯು ಉಳಿಸಿ-ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸಿ’ ಎಂಬ ಘೋಷಣೆಯಡಿ ಎಸ್‌ಎಫ್‌ಐ ಸಂಘಟನೆ ನಗರದ ಪುರಭವನದ ಮುಂಭಾಗ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಅಭಿವ್ಯಕ್ತಿಸುವ ಸ್ವಾತಂತ್ರವಿದೆ. ಆ ಪ್ರಕಾರವಾಗಿಯೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಮಾತನಾಡಿದ್ದಾರೆ. ಅವರ ಮಾತುಗಳನ್ನು ಭಾರತೀಯರಾದ ಪ್ರತಿಯೊಬ್ಬರೂ ಒಪ್ಪಿಕೊಳ್ಳುವಂತಹದ್ದಾಗಿದೆ. ಹೀಗಾಗಿ ಕನ್ಹಯ್ಯಾನನ್ನು ಬಂಧಿಸಿರುವುದು ರಾಜಕೀಯ ಪಿತೂರಿಯಿಂದ ಕೂಡಿದೆ ಎಂದು ಅವರು ತಿಳಿಸಿದರು.
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಅಣ್ಣಾದೊರೈ ತಮಿಳುನಾಡು ಭಾರತದಿಂದ ಪ್ರತ್ಯೇಕವಾಗಲಿ ಎಂದು ಹೇಳಿಕೆ ನೀಡಿದ್ದರು. ಇದರಿಂದ ಯಾವ ಸಮಸ್ಯೆಯಾಗಿದೆ. ಹೀಗಾಗಿ ಹಿಂಸಾಚಾರ ನಡೆಸದೆ ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ಅಭಿವ್ಯಕ್ತಿಸುವ ಸ್ವಾತಂತ್ರ ಎಲ್ಲರಿಗೂ ಇದೆ ಎಂದು ಗಿರೀಶ್ ಕಾರ್ನಾಡ್ ಹೇಳಿದರು.
ಕನ್ಹಯ್ಯನ ಪ್ರಕರಣದಲ್ಲಿ ಪೊಲೀಸ್ ವ್ಯವಸ್ಥೆ ನಿಸ್ಪಕ್ಷಪಾತವಾಗಿ ತನಿಖೆ ನಡೆಸಿಲ್ಲ. ಕೆಲವು ಮೂಲಭೂತವಾದಿಗಳು ಕೊಟ್ಟ ದೂರನ್ನು ಆಧರಿಸಿ ಬಂಧಿಸಲಾಗಿದೆ. ಹಾಗೂ ನ್ಯಾಯಾಲಯದಲ್ಲಿ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ವಕೀಲರು ಹಲ್ಲೆ ನಡೆಸಿರುವುದು ಅಕ್ಷಮ್ಯ ಅಪರಾಧವಾಗಿದೆ. ಆದರೆ, ಈ ಬಗ್ಗೆ ಪೊಲೀಸ್ ಯಾವುದೇ ಕ್ರಮ ತೆಗೆದುಕೊಳ್ಳದಿರುವುದಕ್ಕೆ ಕಾರಣ ಏನು ಎಂದು ಅವರು ಸಂಶಯ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಮಾತನಾಡಿ, ಈ ಹಿಂದೆಯೇ ಹಿರಿಯ ಸಾಹಿತಿ ಯು.ಆರ್.ಅನಂತಮೂರ್ತಿ ಕೋಮುವಾದಿ ಭಾರತದಲ್ಲಿ ಇರಲು ಬಯಸುವುದಿಲ್ಲವೆಂದು ಹೇಳಿದ್ದರು. ಈಗ ಅಂತಹ ಭಾರತದಲ್ಲಿ ನಾವು ಬದುಕುತ್ತಿದ್ದೇವೆ ಎಂದು ವಿಷಾಧ ವ್ಯಕ್ತಪಡಿಸಿದರು.
ಬಲಪಂಥೀಯ ವಿಚಾರಗಳನ್ನು ವಿರೋಧಿಸಿದ ಮಾತ್ರಕ್ಕೆ ವಿದ್ಯಾರ್ಥಿ ಮುಖಂಡ ಕನ್ಹಯ್ಯಾರಿಗೆ ದೇಶದ್ರೋಹಿ ಎಂಬ ಪಟ್ಟ ಕಟ್ಟಲಾಗಿದೆ. ಹಾಗಾದರೆ ನಾನು ಸಹ ಬಲಪಂಥೀಯ ವಿಚಾರಗಳನ್ನು ಒಪ್ಪುವುದಿಲ್ಲ. ಹೀಗಾಗಿ ಕೋಮುವಾದಿಗಳ ದೃಷ್ಟಿಯಲ್ಲಿ ನಾನೂ ದೇಶದ್ರೋಹಿಯೇ. ಒಟ್ಟಾರೆ ಕೋಮುವಾದಿ ಶಕ್ತಿಗಳು ಪ್ರಗತಿಪರ ವಿಚಾರಧಾರೆಯನ್ನು ಹೊಂದಿರುವವರಿಗೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತಿದೆ ಎಂದು ಅವರು ತಿಳಿಸಿದರು.

ಭಾರತದ ಸ್ವಾತಂತ್ರಕ್ಕಾಗಿ ಕಿಂಚಿತ್ತೂ ಕೊಡುಗೆ ನೀಡದ ಸಂಘಪರಿವಾರ, ಸ್ವಾತಂತ್ರದ ನಂತರದಲ್ಲಿ ಹಿಂಸಾಚಾರ ನಡೆಸುತ್ತಾ ಬರುತ್ತಿದೆ. ಮುಸ್ಲಿಮ್, ಕ್ರಿಶ್ಚಿಯನ್ ಸಮುದಾಯಗಳನ್ನು ಗುರಿಯಾಗಿಸಿಕೊಂಡು ದಲಿತ, ಹಿಂದುಳಿದ ಸಮುದಾಯದ ವ್ಯಕ್ತಿಗಳಲ್ಲಿ ಕೋಮುವಾದಿ ಬೀಜಗಳನ್ನು ಬಿತ್ತುತ್ತಾ ಬರುತ್ತಿದೆ. ಕೋಮುವಾದಿಗಳ ಈ ಷಡ್ಯಂತ್ರವನ್ನು ತಡೆಯಬೇಕಾದರೆ ಪ್ರಗತಿಪರ ಸಂಘಟನೆಗಳು, ಸಾಹಿತಿಗಳು ಹಾಗೂ ವಿದ್ಯಾರ್ಥಿಗಳು ಒಟ್ಟಾಗಬೇಕಾದ ಅಗತ್ಯವಿದೆ ಎಂದು ಅವರು ತಿಳಿಸಿದರು. ಹಿರಿಯ ಸಾಹಿತಿ ಡಾ.ಮರುಳಸಿದ್ದಪ್ಪ ಮಾತನಾಡಿ, ದೇಶದ ಭವಿಷ್ಯವನ್ನು ರೂಪಿಸುವ ವಿಶ್ವವಿದ್ಯಾನಿಲಯಗಳಲ್ಲಿ ಸಂಘಪರಿವಾರ ಜಾತಿ ತಾರತಮ್ಯ ಹಾಗೂ ಕೋಮುವಾದವನ್ನು ಬಿತ್ತುವ ಮೂಲಕ ವಿಶ್ವವಿದ್ಯಾನಿಲಯದ ಘನತೆಯನ್ನು ಹಾಳು ಮಾಡುತ್ತಿದೆ. ಇದರಿಂದ ದೇಶದ ಭವಿಷ್ಯ ಕುಂಠಿತಗೊಳ್ಳಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಹಾಗೂ ಸಾಹಿತಿ ಲಲಿತಾ ನಾಯಕ್, ಪತ್ರಕರ್ತೆ ಗೌರಿ ಲಂಕೇಶ್, ದಸಂಸ ಮುಖಂಡ ಮಾವಳ್ಳಿ ಶಂಕರ್, ಹಿಂದುಳಿದ ವರ್ಗಗಳ ಮುಖಂಡ ನರಸಿಂಹಯ್ಯ, ಮಾನವ ಹಕ್ಕುಗಳ ಹೋರಾಟಗಾರ ನಗರಗೆರೆ ರಮೇಶ್, ಎಸ್‌ಎಫ್‌ಐ ರಾಜ್ಯಾಧ್ಯಕ್ಷ ಅಂಬರೀಶ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

 ದೇಶದಲ್ಲಿ ಎಬಿವಿಪಿ ಅಪಾಯಕಾರಿ ಸಂಘಟನೆಯಾಗಿದ್ದು, ಒಂದು ವೇಳೆ ದೇಶ ವಿಭಜನೆಯಾಗುವುದಾದರೆ ಅದು ಎಬಿವಿಪಿ ಸಂಘಟನೆಯ ಷಡ್ಯಂತ್ರದಿಂದ ಮಾತ್ರ ಸಾಧ್ಯ. ಹೀಗಾಗಿ ಈ ಸಂಘಟನೆಯ ಕುರಿತು ಸಾರ್ವಜನಿಕರು ಜಾಗೃತಗೊಳ್ಳುವ ಅಗತ್ಯವಿದೆ.                               ಗಿರೀಶ್ ಕಾರ್ನಾಡ್, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X