Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆ್ಯಪಲ್ ಉತ್ಪನ್ನಗಳ ಬಹಿಷ್ಕಾರಕ್ಕೆ...

ಆ್ಯಪಲ್ ಉತ್ಪನ್ನಗಳ ಬಹಿಷ್ಕಾರಕ್ಕೆ ಟ್ರಂಪ್ ಕರೆ !

ವಾರ್ತಾಭಾರತಿವಾರ್ತಾಭಾರತಿ20 Feb 2016 11:16 PM IST
share
ಆ್ಯಪಲ್ ಉತ್ಪನ್ನಗಳ ಬಹಿಷ್ಕಾರಕ್ಕೆ ಟ್ರಂಪ್ ಕರೆ !

 ನ್ಯೂಯಾರ್ಕ್, ಫೆ.20 : ಸ್ಯಾನ್ ಬೆರ್ನಾರ್ಡಿನೋ ಹತ್ಯಾಕಾಂಡದ ಹಂತಕರುಗಳ ಐ-ಫೋನ್ ಅನ್‌ಲಾಕ್ ಮಾಡಲು ತಂತ್ರಜ್ಞಾನ ದೈತ್ಯ ಆ್ಯಪಲ್ ಕಂಪೆನಿಯು ಸಹಕರಿಸಲು ಒಪ್ಪುವ ತನಕ ಆ ಕಂಪೆನಿಯ ಉತ್ಪನ್ನಗಳನ್ನು ಬಹಿಷ್ಕರಿಸಬೇಕೆಂದು ಅಮೆರಿಕದ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಕರೆ ನೀಡಿದ್ದಾರೆ.
 ದಕ್ಷಿಣ ಕ್ಯಾರೋಲಿನಾದ ಟೌನ್‌ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಹೇಳಿದ ಕೆಲವೇ ಗಂಟೆಗಳ ಬಳಿಕ ಅವರು ತಮ್ಮ ಆ್ಯಪಲ್ ಐ-ಫೋನಿನಿಂದಲೇ ಹಲವಾರು ಟ್ವೀಟ್‌ಗನ್ನು ಮಾಡಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.
 ಅವರು ಸೆಕ್ಯುರಿಟಿ ಸಂಖ್ಯೆಯನ್ನು ನೀಡುವ ತನಕ ನೀವು ಆ್ಯಪಲನ್ನು ಬಹಿಷ್ಕರಿಸಬೇಕೆಂದು ನನಗನಿಸುತ್ತದೆ ಎಂದು ಸಭೆಯಲ್ಲಿ ಹೇಳಿದ ಟ್ರಂಪ್ ನಿಮಗೆ ಏನನಿಸುತ್ತದೆ? ಎಂದವರು ಪ್ರಶ್ನಿಸಿದ್ದರು. ನಾನು ಕೂಡ ಅದರ ಬಗ್ಗೆಯೇ ಯೋಚಿಸುತ್ತಿದ್ದೇನೆ ಎಂದವರು ಹೇಳಿದ್ದರು.
     ಅಮೆರಿಕದ ಫೆಡರಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವೊಂದು ಶೂಟರುಗಳ ಐ-ಫೋನನ್ನು ಅನ್‌ಲಾಕ್ ಮಾಡಲು ಎಫ್‌ಬಿಐದೊಂದಿಗೆ ಕಂಪೆನಿ ಸಹಕರಿಸಬೇಕೆಂದು ಕೋರಿದಾಗ, ಆ್ಯಪಲ್ ಅದಕ್ಕೆ ನಿರಾಕರಿಸಿತ್ತು. ಕಂಪೆನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿಮ್ ಕುಕ್ ಈ ಬೇಡಿಕೆಯನ್ನು ನಿರಾಕರಿಸಿದ್ದರು. ಕಂಪೆನಿಯ ವೆಬ್‌ಸೈಟಿನಲ್ಲಿ ಈ ಆದೇಶಕ್ಕೆ ಪ್ರತಿಕ್ರಿಯಿಸಿದ ಕುಕ್, ನ್ಯಾಯಾಲಯದ ಈ ಆದೇಶವನ್ನು ಆ್ಯಪಲ್ ವಿರೋಧಿಸುವುದಾಗಿ ಹೇಳಿದ್ದರು ಹಾಗೂ ಈ ಬಗ್ಗೆ ಸಾರ್ವಜನಿಕ ಸಂವಾದ ನಡೆಯುವ ಅಗತ್ಯವಿದೆಯೆಂದು ಅಭಿಪ್ರಾಯಿಸಿದ್ದರು.
 
   ನಮ್ಮ ಗ್ರಾಹಕರ ಖಾಸಗಿ ತನಕ್ಕೆ ಬೆದರಿಕೆಯೊಡ್ಡುವಂತಹ ಕ್ರಮ ಕೈಗೊಳ್ಳಬೇಕೆಂದು ಸರಕಾರ ನಮ್ಮನ್ನು ಆಗ್ರಹಿಸಿದೆ,ಎಂದು ಅವರು ತಮ್ಮ ಕಂಪೆನಿಯ ವೆಬ್ ತಾಣದಲ್ಲಿ ಹೇಳಿಕೊಂಡಿದ್ದರು. ಅದೇ ಸಮಯ ಕುಕ್ ಶೂಟಿಂಗ್ ಘಟನೆಗೆ ತಮ್ಮಆಘಾತ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದು ನಮಗೆಭಯೋತ್ಪಾದಕರ ಬಗ್ಗೆ ಯಾವುದೇ ಕನಿಕರವಿಲ್ಲ ಎಂದಿದ್ದಾರೆ. ಕಳೆದ ವರ್ಷದ ಡಿಸೆಂಬರ್ 2ರಂದು ಕ್ಯಾಲಿಫೋರ್ನಿಯಾದ ಸ್ಯಾನ್‌ಬೆರ್ಡಿನೊದಲ್ಲಿ ಪಾಕ್ ಮೂಲದ ಅಮೆರಿಕನ್ ದಂಪತಿಯು ಸಾರ್ವಜನಿಕ ಸ್ಥಳದಲ್ಲಿ ಶೂಟೌಟ್ ನಡೆಸಿ 14 ಮಂದಿಯನ್ನು ಹತ್ಯೆಗೈದಿದ್ದರು. ಈ ಘಟನೆಯಲ್ಲಿ 22ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದವು. ಈ ದಂಪತಿಯ ಐಫೋನ್‌ನ್ನು ಅನ್‌ಲಾಕ್ ಮಾಡಲು ಸಹಕರಿಸುವಂತೆ ಅಮೆರಿಕದ ತನಿಖಾ ಸಂಸ್ಥೆ ಎಫ್‌ಬಿಐ ಕೋರಿದಾಗ ಆ್ಯಪಲ್ ಅದಕ್ಕೆ ನಿರಾಕರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X