Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಫ್ಘಾನಿಸ್ತಾನಕ್ಕೆ ರೋಚಕ ಜಯ

ಅಫ್ಘಾನಿಸ್ತಾನಕ್ಕೆ ರೋಚಕ ಜಯ

ವಾರ್ತಾಭಾರತಿವಾರ್ತಾಭಾರತಿ20 Feb 2016 11:52 PM IST
share
ಅಫ್ಘಾನಿಸ್ತಾನಕ್ಕೆ ರೋಚಕ ಜಯ

ಏಷ್ಯಾಕಪ್ ಅರ್ಹತಾ ಪಂದ್ಯ

 ಫತಾವುಲ್ಲಾ, ಫೆ.20: ನೂರ್ ಅಲಿ ಝದ್ರಾನ್(63 ರನ್, 44 ಎಸೆತ) ಹಾಗೂ ನಜೀಬುಲ್ಲಾ ಝದ್ರಾನ್‌ರ(23 ರನ್, 21) ವೀರೋಚಿತ ಪ್ರದರ್ಶನದ ನೆರವಿನಿಂದ ಅಫ್ಘಾನಿಸ್ತಾನ ತಂಡ ಒಮನ್ ವಿರುದ್ಧದ ಏಷ್ಯಾಕಪ್‌ನ ಅರ್ಹತಾ ಸುತ್ತಿನ ಪಂದ್ಯವನ್ನು 3 ವಿಕೆಟ್‌ಗಳ ಅಂತರದಿಂದ ರೋಚಕವಾಗಿ ಗೆದ್ದುಕೊಂಡಿದೆ. ಈ ಗೆಲುವಿನೊಂದಿಗೆ ಟೂರ್ನಿಯ ಪ್ರಧಾನ ಸುತ್ತಿಗೆ ಅರ್ಹತೆ ಪಡೆಯುವ ವಿಶ್ವಾಸ ಹೆಚ್ಚಿಸಿಕೊಂಡಿದೆ.

ಶನಿವಾರ ನಡೆದ ಪಂದ್ಯದಲ್ಲಿ ಗೆಲ್ಲಲು 166ರನ್ ಗುರಿ ಪಡೆದಿದ್ದ ಅಫ್ಘಾನಿಸ್ತಾನ 19.3 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 168 ರನ್ ಗಳಿಸಿತು. ಎಡಗೈ ಸ್ಪಿನ್ನರ್ ಅಜಯ್ ಲಾಲ್‌ಚೆಟಾ ಎಸೆದ ಅಂತಿಮ ಓವರ್‌ನ ಸತತ ಎರಡು ಎಸೆತಗಳಲ್ಲಿ ಸಿಕ್ಸರ್ ಸಿಡಿಸಿದ ದೌಲತ್ ಝದ್ರಾನ್(ಔಟಾಗದೆ 12, 2 ಎಸೆತ) ಅಫ್ಘಾನಿಸ್ತಾನ ಇನ್ನೂ 3 ಎಸೆತಗಳು ಬಾಕಿ ಇರುವಾಗಲೇ ಗೆಲುವಿನ ದಡ ಸೇರಲು ನೆರವಾದರು.

  ತಲಾ ಮೂರು ವಿಕೆಟ್‌ಗಳನ್ನು ಉರುಳಿಸಿದ ಒಮನ್ ಬೌಲರ್‌ಗಳಾದ ಬಿಲಾಲ್ ಖಾನ್(3-33) ಹಾಗೂ ಮೆಹ್ರಾನ್ ಖಾನ್(3-18) ತಂಡಕ್ಕೆ ಟೂರ್ನಿಯಲ್ಲಿ ಸತತ 2ನೆ ಗೆಲುವು ತಂದುಕೊಡುವ ವಿಶ್ವಾಸ ಮೂಡಿಸಿದ್ದರು. ಆದರೆ, ದೌಲತ್ ಝದ್ರಾನ್ ಅಫ್ಘಾನ್ ತಂಡವನ್ನು ಸೋಲಿನ ದವಡೆಯಿಂದ ಪಾರು ಮಾಡಿದರು.

ಅಫ್ಘಾನ್ ಮೊದಲ ಓವರ್‌ನಲ್ಲೇ ಆರಂಭಿಕ ದಾಂಡಿಗ ಮುಹ್ಮಮದ್ ಶಹಝಾದ್(4) ವಿಕೆಟ್ ಕಳೆದುಕೊಂಡಿತ್ತು. ನಾಯಕ ಸ್ಟಾನಿಕ್‌ಝೈ(34 ರನ್) ಹಾಗೂ ನೂರ್ ಅಲಿ ಝದ್ರಾನ್(63) 2ನೆ ವಿಕೆಟ್‌ಗೆ 54 ರನ್ ಜೊತೆಯಾಟ ನಡೆಸಿ ತಂಡಕ್ಕೆ ಆಸರೆಯಾದರು.

ಅಫ್ಘಾನ್‌ಗೆ ಕೊನೆಯ 2 ಓವರ್‌ಗಳಲ್ಲಿ 21 ಅಗತ್ಯವಿತ್ತು. ಸಮೀವುಲ್ಲಾ ಶೆನ್ವಾರಿ ಸತತ ಬೌಂಡರಿ ಬಾರಿಸಿ ತಂಡದ ಒತ್ತಡ ಕಡಿಮೆ ಮಾಡಿದರು. ಅಫ್ಘಾನ್‌ಗೆ ಅಂತಿಮ ಓವರ್‌ನಲ್ಲಿ 10 ರನ್ ಬೇಕಾಗಿತ್ತು. 19.1ನೆ ಓವರ್‌ನಲ್ಲಿ ಶೆನ್ವಾರಿ ಔಟಾದರು. ಆಗ ಸತತ ಎಸೆತಗಳಲ್ಲಿ ಸಿಕ್ಸರ್ ಸಿಡಿಸಿದ ದೌಲತ್ ಝದ್ರಾನ್ ಅಫ್ಫಾನ್‌ಗೆ ರೋಚಕ ಗೆಲುವು ತಂದುಕೊಟ್ಟರು.

ಒಮನ್ 165/4: ಇದಕ್ಕೆ ಮೊದಲು ಬ್ಯಾಟಿಂಗ್ ಮಾಡಿದ್ದ ಒಮನ್ ತಂಡ ಆರಂಭಿಕ ದಾಂಡಿಗ ಝೀಶಾನ್ ಮಕ್ಸೂದ್(52 ರನ್, 42 ಎಸೆತ, 5 ಬೌಂಡರಿ, 2 ಸಿಕ್ಸರ್) ಹಾಗೂ ಅದ್ನಾನ್ ಇಲಿಯಾಸ್(54 ರನ್, 27 ಎಸೆತ, 3 ಬೌಂಡರಿ, 4 ಸಿಕ್ಸರ್) ಮಹತ್ವದ ಕೊಡುಗೆಯ ಸಹಾಯದಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 165 ರನ್ ಗಳಿಸಿತು.

ಮಕ್ಸೂದ್ ಹಾಗೂ ಜತೀಂದರ್ ಸಿಂಗ್(23) 10.4 ಓವರ್‌ಗಳಲ್ಲಿ 72 ರನ್ ಜೊತೆಯಾಟ ನಡೆಸಿ ಒಮನ್‌ಗೆ ಭದ್ರ ಬುನಾದಿ ಹಾಕಿಕೊಟ್ಟರು.

ಸಂಕ್ಷಿಪ್ತ ಸ್ಕೋರ್

ಒಮನ್: 20 ಓವರ್‌ಗಳಲ್ಲಿ 165/4

(ಅದ್ನಾನ್ ಇಲಿಯಾಸ್ 54, ಝೀಶಾನ್ ಮಕ್ಸೂದ್ 52, ಜತೀಂದರ್ 23, ಗುಲ್ಬ್ಬುದ್ದೀನ್ ನೈಬ್ 2-24)

ಅಫ್ಘಾನಿಸ್ತಾನ: 19.3 ಓವರ್‌ಗಳಲ್ಲಿ 168/7

(ನೂರ್ ಅಲಿ ಝದ್ರಾನ್ 63, ಅಸ್ಘರ್ ಸ್ಟಾನಿಕ್‌ಝೈ 34, ಬಿಲಾಲ್ ಖಾನ್ 3-33, ಮೆಹ್ರಾನ್ ಖಾನ್ 3-18)

ಇಂದಿನ ಪಂದ್ಯಗಳು

ಅಫ್ಘಾನಿಸ್ತಾನ-ಹಾಂಕಾಂಗ್

ಸ್ಥಳ: ಢಾಕಾ

ಸಮಯ: ಮಧ್ಯಾಹ್ನ 3:00

ಒಮನ್-ಯುಎಇ

ಸ್ಥಳ: ಢಾಕಾ

ಸಮಯ: ರಾತ್ರಿ 7:30

share
ವಾರ್ತಾಭಾರತಿ
ವಾರ್ತಾಭಾರತಿ
Next Story
X