Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಶಾಂತಿಯುತವಾಗಿ ನಡೆದ ಮತದಾನ

ಮಂಗಳೂರು : ಶಾಂತಿಯುತವಾಗಿ ನಡೆದ ಮತದಾನ

ವಾರ್ತಾಭಾರತಿವಾರ್ತಾಭಾರತಿ20 Feb 2016 11:54 PM IST
share

 ಮಂಗಳೂರು,ಫೆ.20: ಸ್ಥಳೀಯ ತಾಲೂಕಿನ 10 ಜಿ.ಪಂ ಕ್ಷೇತ್ರಗಳು ಮತ್ತು 39 ತಾ.ಪಂ ಕ್ಷೇತ್ರಗಳಿಗೆ ಚುನಾವಣೆ ಶಾಂತಿಯುತವಾಗಿ ನಡೆಯಿತು.  ದ.ಕ ಜಿಲ್ಲಾ ಪಂಚಾಯತ್‌ಗೆ ಮಂಗಳೂರು ತಾಲೂಕಿನಿಂದ 2010ರಲ್ಲಿ ಹತ್ತು ಕೇತ್ರಗಳಿದ್ದು ಕ್ಷೇತ್ರ ಪುನರ್ವಿಂಗಡಣೆಯ ನಂತರವೂ ಮಂಗಳೂರು ತಾಲೂಕಿನಲ್ಲಿ ಹತ್ತು ಕೇತ್ರವು ಉಳಿದುಕೊಂಡಿದೆ. ಕಿನ್ನಿಗೋಳಿ, ಪುತ್ತಿಗೆ, ಶಿರ್ತಾಡಿ, ಕಟೀಲು ಬಜಪೆ, ಎಡಪದವು ಗುರುಪುರ, ನೀರುಮಾರ್ಗ, ಕೋಣಾಜೆ,ಸೋಮೇಶ್ವರ ಜಿ.ಪಂ ಕ್ಷೇತ್ರಗಳಿಗೆ ಚುನಾವಣೆಯು ನಡೆದಿದೆ. 2010ರಲ್ಲಿ ಹತ್ತು ಕ್ಷೇತ್ರದಲ್ಲಿ ಬಿಜೆಪಿ 6 ಸ್ಥಾನವನ್ನು, ಕಾಂಗ್ರೆಸ್ 4 ಸ್ಥಾನವನ್ನು ಪಡೆದುಕೊಂಡಿತ್ತು.

ಮಂಗಳೂರು ತಾಲೂಕು ಪಂಚಾಯತ್‌ಗೆ 2010ರಲ್ಲಿ 37 ಕ್ಷೇತ್ರಗಳಿದ್ದರೆ ಈ ಬಾರಿ ಕ್ಷೇತ್ರ ಪುನರ್ವಿಂಗಡಣೆಯ ನಂತರ 39 ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. 2010ರಲ್ಲಿ 37 ಕ್ಷೇತ್ರಗಳಲ್ಲಿ ಬಿಜೆಪಿ 19 ಸ್ಥಾನಗಳನ್ನು, ಕಾಂಗ್ರೆಸ್ 18 ಸ್ಥಾನಗಳನ್ನು ಗಳಿಸಿಕೊಂಡಿತ್ತು. ಬಾಕ್ಸ್ ಮಾಡಬಹುದು:

ನಿಧಾನಗತಿಯ ಮತದಾನ

  ಮಂಗಳೂರು ತಾಲೂಕಿನಲ್ಲಿ ಬೆಳಗ್ಗಿನಿಂದಲೇ ಮತದಾರರು ತೀರಾ ಕಡಿಮೆ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸುವ ಮೂಲಕ ನಿಧಾನಗತಿಯಲ್ಲಿ ಮತದಾನ ಪ್ರಕ್ರಿಯೆ ಕಂಡು ಬಂತು. ಬೆಳಿಗ್ಗೆ 11 ರ ಸುಮಾರಿಗೆ 29.01 ಶೇಕಡ ಮತದಾನವಾಗಿತ್ತು. ಮದ್ಯಾಹ್ನ 1 ಗಂಟೆಯ ಸುಮಾರಿಗೆ 43.08 ಶೇಕಡ ಮತದಾನವಾದರೆ 3 ಗಂಟೆಗೆ 55.95 ಶೇಕಡ ಮತದಾನವಾಗಿತ್ತು. ವಿಳಂಬ: ಚುನಾವಣಾ ಆಯೋಗ ಚುನಾವಣೆಗೆ ಎಲ್ಲಾ ರೀತಿಯ ಸಿದ್ದತೆ ನಡೆಸಿದ್ದರೂ ಕೆಲವೆಡೆ ಮತಯಂತ್ರ ದೋಷದಿಂದ ಚುನಾವಣೆ ನಿಗದಿತ ಸಮಯಕ್ಕೆ ಆರಂಭವಾಗಲಿಲ್ಲ. ಕಟೀಲು ಜಿ.ಪಂ ಕ್ಷೇತ್ರದ ನಡುಗೋಡು ಬೂತ್ ಸಂಖ್ಯೆ 117ರಲ್ಲಿ ಮತಯಂತ್ರ ದೋಷದಿಂದ ಚುನಾವಣೆ ವಿಳಂಬವಾಗಿ ಆರಂಭವಾಯಿತು. ಅಡ್ಯಾರ್‌ನಲ್ಲಿ ಮತಯಂತ್ರ ದೋಷದ ಪರಿಣಾಮ ಚುನಾವಣೆ ಅರ್ಧ ಗಂಟೆ ವಿಳಂಬವಾಗಿ ನಡೆಯಿತು. ಎಡಪದವು ಜಿ.ಪಂ ಕ್ಷೇತ್ರದ ಕುಪ್ಪೆಪದವು ತಾ.ಪಂ ಕ್ಷೇತ್ರ ವ್ಯಾಪ್ತಿಯ ಕಲ್ಲಾಡಿ ಬೂತ್ ನಂ.188ರಲ್ಲಿ ಮತಯಂತ್ರ ದೋಷದಿಂದ 15 ನಿಮಿಷ ಚುನಾವಣೆ ವಿಳಂಬವಾಗಿ ಆರಂಭವಾಯಿತು.

342 ಮತಗಟ್ಟೆಗಳಲ್ಲಿ ಚುನಾವಣೆ

  ಮಂಗಳೂರು ತಾಲೂಕಿನಲ್ಲಿ 307402 ಮತದಾರರಿದ್ದು 342 ಮತಗಟ್ಟೆಗಳಲ್ಲಿ ಇಂದು ಚುನಾವಣೆ ನಡೆದಿದೆ. ಜಿ.ಪಂ ನ ಹತ್ತು ಕ್ಷೇತ್ರಗಳಿಗೆ 36 ಅಭ್ಯರ್ಥಿಗಳು, ತಾಲೂಕು ಪಂಚಾಯತ್‌ನ 39 ಕ್ಷೇತ್ರಗಳಿಗೆ 115 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X