Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನೀರ್ಜಾ: ಸಣ್ಣ ವಯಸ್ಸು, ದೊಡ್ಡ...

ನೀರ್ಜಾ: ಸಣ್ಣ ವಯಸ್ಸು, ದೊಡ್ಡ ಬದುಕು....

ವಾರ್ತಾಭಾರತಿವಾರ್ತಾಭಾರತಿ20 Feb 2016 11:55 PM IST
share
ನೀರ್ಜಾ: ಸಣ್ಣ ವಯಸ್ಸು, ದೊಡ್ಡ ಬದುಕು....

‘ನಾನು ದೊಡ್ಡ ಬದುಕನ್ನು ಬದುಕಲಿಚ್ಛಿಸುತ್ತೇನೆಯೇ ಹೊರತು ದೀರ್ಘ ಬದುಕನ್ನಲ್ಲ’’ ಬದುಕು ಶ್ರೇಷ್ಠವೆನಿಸಬೇಕಾದರೆ, ದೀರ್ಘವಾಗಿ ಬದುಕಬೇಕೆಂದೇನೂ ಇಲ್ಲ. ಆನಂದ್ ಚಿತ್ರದಲ್ಲಿ ರಾಜೇಶ್ ಖನ್ನಾ ಹೇಳುವ ಮಾತಿದು. ಅಂತೆಯೇ ನೀರ್ಜಾ ಭಾನೊಟ್ ಅವರಿಗೆ ದೊಡ್ಡದೊಂದು ಬದುಕನ್ನು ಬದುಕುವ ಆಸೆ. ಒಂದು ವಿಮಾನ ಪಯಣದಲ್ಲಿ ಆ ಆಸೆ ಈಡೇರುತ್ತದೆ. 1986ರಲ್ಲಿ ಲಿಬಿಯನ್ ಉಗ್ರಗಾಮಿಗಳಿಂದ ಅಪಹರಿಸಲ್ಪಟ್ಟ ವಿಮಾನದಲ್ಲಿ 300ಕ್ಕೂ ಅಧಿಕವಿರುವ ಪ್ರಯಾಣಿಕರಿಗಾಗಿ ಪ್ರಾಣ ಅರ್ಪಿಸುವ ಮೂಲಕ ದೇಶಭಕ್ತಿಯೆಂದರೆ ಏನು, ಶ್ರೇಷ್ಠವಾಗಿ ಬದುಕುವುದು ಎಂದರೆ ಏನು ಎನ್ನುವುದನ್ನು ಆಕೆ ತಿಳಿಸಿಕೊಡುತ್ತಾಳೆ. ಒಬ್ಬ ಗಗನ ಸಖಿಯ ಆತ್ಮಕತೆಯನ್ನು ಆಧಾರವಾಗಿಟ್ಟುಕೊಂಡು ಮಾಡಿರುವ ಸಿನೆಮಾ ‘ನೀರ್ಜಾ’. ಆದರೆ ಎಲ್ಲೂ ಸಾಕ್ಷಚಿತ್ರವಾಗುವುದಕ್ಕೆ ಅವಕಾಶ ಕೊಡದೆ, ರಕ್ತ ಮಾಂಸ ತುಂಬಿದ ಸಿನೆಮಾವಾಗಿ ಕಟ್ಟಿಕೊಡುತ್ತಾರೆ ನಿರ್ದೇಶಕ ರಾಮ್ ಮಧ್ವಾನಿ. ಇಲ್ಲಿ ವಾಸ್ತವ ಮತ್ತು ಸಿನೆಮಾದ ರೋಚಕತೆಯನ್ನು ಹದವಾಗಿ ಮಿಶ್ರಗೊಳಿಸಿದ್ದಾರೆ ನಿರ್ದೇಶಕರು. ಸೋನಮ್ ಅವರು ಗ್ಲಾಮರ್ ಮೂಲಕವೂ ಅಭಿನಯದ ಮೂಲಕವೂ ಪ್ರೇಕ್ಷಕರಿಗೆ ಹತ್ತಿರವಾಗುತ್ತಾರೆ. ಅವರ ನಾಯಕಿ ಪಾತ್ರಕ್ಕೆ ಪೂರಕವಾಗಿ ಶಬನಾ ಅಜ್ಮಿ, ಯೋಗೇಂದ್ರ ಟಿಕು ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಒಂದು ಆತ್ಮಕತೆಯನ್ನು ಎಲ್ಲೂ ಸೊರಗದಂತೆ ಸಿನೆಮಾ ಆಗಿ ಕಟ್ಟಿಕೊಡಲು ಅತಿದೊಡ್ಡ ಸಹಾಯ ಮಾಡಿರುವುದು ಚಿತ್ರಕತೆ. ಭಾವನಾತ್ಮಕವಾದ ದೃಶ್ಯಗಳನ್ನು ಅಳವಡಿಸುವ ಸಂದರ್ಭದಲ್ಲಿ ನಿರ್ದೇಶಕರು ಬಹಳ ಎಚ್ಚರಿಕೆಯಿಂದ ಕೆಲಸ ಮಾಡಿದ್ದಾರೆ. ಹಿನ್ನೆಲೆ ಸಂಗೀತ ಚಿತ್ರಕ್ಕೆ ಪೂರಕವಾಗಿದೆ.

ಒಂದು ತಂಡದ ಪ್ರಾಮಾಣಿಕ ಶ್ರಮ ಚಿತ್ರದಲ್ಲಿ ಎದ್ದು ಕಾಣುತ್ತದೆ. ಯುವಕರಿಗೆ ಸ್ಫೂರ್ತಿಯನ್ನು ಆದರ್ಶವನ್ನು ತುಂಬುವ ದೊಡ್ಡದೊಂದು ಕೆಲಸವನ್ನು ನೀರ್ಜಾ ಮಾಡುತ್ತಾಳೆ. ಅವಳ ಕನಸನ್ನು ನಮ್ಮದಾಗಿಸುವ ಸಲುವಾಗಿ ಈ ಚಿತ್ರವನ್ನು ಒಂದು ಬಾರಿ ನೋಡಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X