Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಂದು ಭಾಷೆಯ ಸಮೃದ್ಧಿಗೆ ಎಲ್ಲ ಭಾಷೆಯ...

ಒಂದು ಭಾಷೆಯ ಸಮೃದ್ಧಿಗೆ ಎಲ್ಲ ಭಾಷೆಯ ಪದಗಳು ಅಗತ್ಯ: ಸಿದ್ದರಾಮಯ್ಯ

ಉದಯಭಾನು ಕಲಾಸಂಘದ ಸುವರ್ಣ ಮಹೋತ್ಸವ

ವಾರ್ತಾಭಾರತಿವಾರ್ತಾಭಾರತಿ21 Feb 2016 11:42 PM IST
share
ಒಂದು ಭಾಷೆಯ ಸಮೃದ್ಧಿಗೆ ಎಲ್ಲ ಭಾಷೆಯ ಪದಗಳು ಅಗತ್ಯ: ಸಿದ್ದರಾಮಯ್ಯ

‘ಬೆಂಗಳೂರು ದರ್ಶನ’ ಗ್ರಂಥ ಲೋಕಾರ್ಪಣೆ
ಬೆಂಗಳೂರು, ಫೆ. 21: ಯಾವುದೇ ಭಾಷೆ ಸಮೃದ್ಧಗೊಳ್ಳಬೇಕಾದರೆ ಆ ಭಾಷೆಗೆ ಎಲ್ಲ ಭಾಷೆಗಳ ಪದಗಳು ಒಗ್ಗೂಡಬೇಕು. ಆಗ ಮಾತ್ರ ಎಲ್ಲ ಭಾಷೆಗಳು ಜೀವಂತವಾಗಿರಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರವಿವಾರ ಉದಯಬಾನು ಕಲಾಸಂಘ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ‘ಬೆಂಗಳೂರು ದರ್ಶನ’ ಗ್ರಂಥವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಗತ್ತಿನ ಯಾವ ಭಾಷೆಯೂ ನೂರು ನೂರರಷ್ಟು ಶುದ್ಧವಾಗಿರುವುದಿಲ್ಲ. ಎಲ್ಲ ಭಾಷೆಗಳಿಗೂ ಇತರ ಭಾಷೆಯ ಪದಗಳು ಸೇರಿಕೊಂಡಿರುತ್ತವೆ. ಹೀಗಾಗಿ ಕನ್ನಡವನ್ನು ಆದ್ಯತೆ ಮೇರಿಗೆ ಬೆಳೆಸುವಂತಹ ಸಂಕಲ್ಪವನ್ನು ಕನ್ನಡಿಗರು ಮಾಡಬೇಕು. ಇದಕ್ಕೆ ಸಂಘ, ಸಂಸ್ಥೆಗಳು ಕೈಜೋಡಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
  ಉದಯಬಾನು ಕಲಾಸಂಘ ವತಿಯಿಂದ ಬಿಡುಗಡೆಗೊಂಡಿರುವ ‘ಬೆಂಗಳೂರು ದರ್ಶನ’ ಕೃತಿಯನ್ನು ಒಂದು ಸಾವಿರ ಪ್ರತಿಗಳನ್ನು ಸರಕಾರದ ವತಿಯಿಂದ ಕೊಂಡುಕೊಳ್ಳಲಾಗುತ್ತದೆ ಹಾಗೂ ಉದಯಬಾನು ಸಂಘದ ಬೆಳವಣಿಗೆಗೆ ಅಗತ್ಯವಿರುವ ಎಲ್ಲ ನೆರವನ್ನೂ ಸರಕಾರ ನೀಡಲಿದೆ ಎಂದು ಅವರು ತಿಳಿಸಿದರು.

ಕೇಂದ್ರ ಸಚಿವ ಅನಂತಕುಮಾರ್ ಮಾತನಾಡಿ, ಉದಯಭಾನು ಕಲಾಸಂಘ ಹೊರ ತಂದಿರುವ ‘ಬೆಂಗಳೂರು ದರ್ಶನ’ 3 ಸಂಪುಟಗಳ ಗ್ರಂಥ ಜಾಗತಿಕ ದಾಖಲೆಯಾಗಿದೆ. ಜಗತ್ತಿನ ಯಾವುದೇ ರಾಜಧಾನಿಯ ಕುರಿತು ಈ ರೀತಿಯ ಗ್ರಂಥ ಹೊರಬಂದಿಲ್ಲ ಎಂದನಿಸುತ್ತದೆ. ಬೆಂಗಳೂರಿನ ಆಡಳಿತ ಪ್ರತಿನಿಧಿಗಳಿಗೆ ಇದು ಮಾದರಿ ಗ್ರಂಥ ಎಂದು ಅಭಿಪ್ರಾಯಪಟ್ಟರು. ಬೆಂಗಳೂರಿನಲ್ಲಿ ಕನ್ನಡ ಭಾಷೆಯ ಉಳಿವಿಗಾಗಿ ವಿಶೇಷ ಕನ್ನಡ ಅಭಿಯಾನ ಆಗಬೇಕಾಗಿದೆ. ಇಲ್ಲಿ ಪ್ರತಿಯೊಬ್ಬರೂ ಕನ್ನಡವನ್ನು ಕಂಗ್ಲಿಷ್‌ಗೊಳಿಸಿ ಮಾತನಾಡಲು ಬಯಸುತ್ತಾರೆ. ಈ ರೀತಿಯ ಬೆಳವಣಿಗೆ ಕನ್ನಡ ಭಾಷಾ ಸಂಸ್ಕೃತಿಗೆ ಭಾರೀ ಅಪಾಯವಾಗಲಿದೆ. ಹೀಗಾಗಿ ರಾಜಧಾನಿಯಲ್ಲಿ ಬೆಂಗಳೂರನ್ನು ಉಳಿಸುವತ್ತ ಹೆಚ್ಚಿನ ಆದ್ಯತೆ ವಹಿಸಬೇಕೆಂದು ಅವರು ತಿಳಿಸಿದರು.

ಕನ್ನಡ ಉಳಿಯಬೇಕಾದರೆ ಗಣಕೀಕೃತ, ವಿದ್ಯುನ್ಮಾನ ಹಾಗೂ ಅಂತರ್ಜಲದಲ್ಲಿ ಕನ್ನಡ ಬಳಕೆಯಾಗಬೇಕು. ಈ ಬಗ್ಗೆ ಉದಯಬಾನು ಕಲಾಸಂಘ ಸಂಶೋಧನೆ ನಡೆಸಬೇಕು. ಈ ರೀತಿ ಸಂಶೋಧನೆ ನಡೆಸಲು ಉದಯಬಾನು ಕಲಾ ಸಂಘಕ್ಕೆ ಲೋಕಸಭಾ ಸದಸ್ಯ ನಿಧಿಯಿಂದ 25 ಲಕ್ಷ ರೂ. ನೀಡಲಾಗುವುದು ಎಂದು ತಿಳಿಸಿದರು. ಈ ವೇಳೆ ಪ್ರೊ.ಎಂ.ಎಚ್.ಕೃಷ್ಣಯ್ಯ ಹಾಗೂ ಡಾ.ವಿಜಯಾ ಸಂಪಾದಿಸಿರುವ ಬೆಂಗಳೂರು ದರ್ಶನ, ಉದಯಬಾನು ರತ್ನ ಮತ್ತು ಸುವರ್ಣ ವಿಕಾಸ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಡಾ.ಎಂ.ಎನ್.ವೆಂಕಟಾಚಲಯ್ಯ, ಎ.ಜೆ.ಸದಾಶಿವ, ಕವಿ ಡಾ.ಸಿದ್ದಲಿಂಗಯ್ಯ, ಶಾಸಕ ರವಿ ಸುಬ್ರಹ್ಮಣ್ಯ, ಕರ್ನಾಟಕ ಸಾಹಿತ್ಯ ಅಕಾಡಮಿ ಮಾಜಿ ಅಧ್ಯಕ್ಷ ಪ್ರೊ.ಎಂ.ಎಚ್. ಕೃಷ್ಣಯ್ಯ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X