Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಹಿತ್ಯದಿಂದ ಜಾತಿ-ಧರ್ಮಗಳ ನಡುವಿನ...

ಸಾಹಿತ್ಯದಿಂದ ಜಾತಿ-ಧರ್ಮಗಳ ನಡುವಿನ ಅಸಮಾನತೆ ನಿರ್ಮೂಲನೆ: ಕಾಯ್ಕಿಣಿ

ಎಸ್.ಪಿ.ವರದರಾಜು ಪ್ರಶಸ್ತಿ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ21 Feb 2016 11:43 PM IST
share
ಸಾಹಿತ್ಯದಿಂದ ಜಾತಿ-ಧರ್ಮಗಳ ನಡುವಿನ ಅಸಮಾನತೆ ನಿರ್ಮೂಲನೆ: ಕಾಯ್ಕಿಣಿ

ಬೆಂಗಳೂರು, ಫೆ. 21: ಕನ್ನಡ ಭಾಷೆಯನ್ನು ಮನೆ-ಮನಗಳಲ್ಲಿ ಉಳಿಸುವ ಪ್ರಯತ್ನ ಆಗಬೇಕು. ಜಾತಿ, ಧರ್ಮ, ಪಂಥಗಳ ನಡುವಿನ ಅಸಮಾನತೆಯನ್ನು ಹೋಗಲಾಡಿಸಲು ಕಲೆ, ಸಾಹಿತ್ಯದಿಂದ ಮಾತ್ರ ಸಾಧ್ಯ ಎಂದು ಲೇಖಕ ಜಯಂತ ಕಾಯ್ಕಿಣಿ ಇಂದಿಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ರವಿವಾರ ನಗರದ ಯುವನಿಕಾ ಸಭಾಂಗಣದಲ್ಲಿ ಆಯೋಜಿಸಿದ್ದ ಎಸ್.ಪಿ.ವರದರಾಜು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ರಾಜಕಾರಣದಿಂದ ಮನುಷ್ಯರ ನಡುವೆ ಜಾತಿ, ಧರ್ಮ, ಪಂಥಗಳ ಗೋಡೆ ಉದ್ಭವಿಸುತ್ತಿರುವುದು ಆತಂಕ ಸೃಷ್ಟಿಸಿದೆ. ಸಮಾಜದಲ್ಲಿ ಉತ್ತಮ ವಾತವರಣ ನಿರ್ಮಾಣ ಆಗಬೇಕಾದರೆ ಉತ್ತಮ ಸಾಮಾಜಿಕ ಮೌಲ್ಯಗಳು ಅವಶ್ಯ ಎಂದು ಪ್ರತಿಪಾದಿಸಿದರು.
ರಂಗಭೂಮಿ ಕಲಾವಿದೆ ಕೊಟ್ಟೂರು ಕೋಮಲಮ್ಮ ಹಾಗೂ ಕಲಾವಿದ ಡಿಂಗ್ರಿ ನಾಗರಾಜ್ ಅವರಿಗೆ ವರದರಾಜು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಕೇಂದ್ರದ ಮಾಜಿ ಸಚಿವ ಡಾ.ಎಂ.ವೀರಪ್ಪ ಮೊಯ್ಲಿ, ವರದರಾಜ್ ಅವರು ಎಲೆ ಮರೆಯ ಕಾಯಿಯಂತೆ ಇದ್ದು ನಾಡಿಗೆ ರಾಜ್‌ಕುಮಾರ್ ಅಂತಹ ಶ್ರೇಷ್ಠ ನಟರನ್ನು ನೀಡಿದ ದೊಡ್ಡ ದಾನಿ ಎಂದು ಬಣ್ಣಿಸಿದರು.
ನಟ ಸಾರ್ವಭೌಮ ದಿ.ಡಾ.ರಾಜ್‌ಕುಮಾರ್ ಅವರ ಬದುಕಿಗೆ ಸ್ಫೂರ್ತಿಯ ಕಾರಂಜಿಯಾಗಿ ನಿಂತಿದ್ದು ವರದರಾಜು. ಯಾವುದೇ ಪ್ರಚಾರವನ್ನು ಬಯಸದ ಶ್ರೇಷ್ಟ ಹಾಗೂ ವಿನಯಶೀಲ ವ್ಯಕ್ತಿಯಾದ ವರದಪ್ಪಹಾಗೂ ಡಾ.ರಾಜ್ ರಾಮ- ಲಕ್ಷ್ಮಣರಿದ್ದಂತೆ. ಇವರು ಕನ್ನಡ ಚಿತ್ರರಂಗಕ್ಕೆ ಸದಭಿರುಚಿಯ ಚಿತ್ರಗಳನ್ನು ನೀಡಿದ ಸೋದರರ ಜೋಡಿ ಎಂದು ಶ್ಲಾಘಿಸಿದರು.

ರಾಜ್‌ಕುಮಾರ್ ಅವರು ರಾಜಕೀಯದಲ್ಲಿ ಪ್ರವೇಶ ಮಾಡಿ ಆ ಕ್ಷೇತ್ರದಲ್ಲಿ ಹೊಸ ಸಂಚಲನವನ್ನೇ ಮೂಡಿಸಬಹುದಿತ್ತು. ಆದರೆ, ರಾಜಕೀಯ ಚಟುವಟಿಕೆಗಳಲ್ಲಿ ಉತ್ಸಾಹ ತೋರದ ಶ್ರೇಷ್ಠ ವ್ಯಕ್ತಿ, ಮಹಾನ್ ನಟ. ಕನ್ನಡ ಭಾಷೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದ ಕನ್ನಡಾಭಿಮಾನಿ ಅವರಾಗಿದ್ದರು. ರಾಜ್ಯಸಭಾ ಸದಸ್ಯರಾಗುವ ಅವಕಾಶ ಬಂದರೂ ಅದನ್ನು ತಿರಸ್ಕರಿಸಿದ್ದರು ಎಂದು ಮೊಯ್ಲಿ ಉಲ್ಲೇಖಿಸಿದರು. ಕೀರ್ತಿ, ಪ್ರತಿಷ್ಟೆ, ಕಾಮನೆಯ ಹಿಂದೆ ಹೋದವರಲ್ಲ ರಾಜ್, ಅವರ ನಗುಮುಖದ ವ್ಯಕ್ತಿತ್ವ, ವಿನಯಶೀಲ ಗುಣ-ನಡತೆ ಅವರ ಮಕ್ಕಳಲ್ಲೂ ಬಂದಿದೆ. ಇಂತಹ ಮಹಾನ್ ಕಲಾವಿದ ಬೇರೆ ಭಾಷೆಯ ಚಲನಚಿತ್ರರಂಗಗಳಿಗೆ ಹೋಗಿದ್ದರೆ ಕನ್ನಡ ಚಿತ್ರರಂಗಕ್ಕೆ ಹಾಗೂ ಕನ್ನಡ ನಾಡಿಗೆ ಇಂತಹ ಅದ್ಭುತವಾದ ನಟ ದೊರೆಯುತ್ತಿರಲಿಲ್ಲ ಎಂದು ಹೇಳಿದರು.
‘ಯುನೆಸ್ಕೊ’ ಫೆ.22 ಅನ್ನು ‘ತಾಯ್ನಡಿ ದಿನಾಚರಣೆ’ ದಿನ ಎಂದು ಘೋಷಿಸಿದೆ. ಆದರೆ ಇಂದಿನ ದಿನಗಳಲ್ಲಿ ಕೆಲವರಲ್ಲಿ ತಾಯ್ನಡಿ ಬಗ್ಗೆ ಹಲವಾರು ರೀತಿಯಲ್ಲಿ ಕೀಳರಿಮೆಗಳಿವೆ ಇದು ತಾಯಿಯನ್ನು ಅಲ್ಲಗಳೆದಂತೆ. ಕೇವಲ ಆಂಗ್ಲಭಾಷೆ ಮಾತ್ರ ಜ್ಞಾನ ನೀಡುವ ಭಾಷೆ ಎನ್ನುವಂತಹ ಮನೋಭಾವನೆ ಜನರಲ್ಲಿದೆ.
ಇದು ಸಾಕ್ಷರತೆಯಲ್ಲಿ ಅನಕ್ಷರತೆ ವಿಚಾರ ಮೂಡಿಬಂದತಾಗುತ್ತದೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತು ನಾಲ್ಕು ವರ್ಷಗಳು ಕಳೆದರೂ ಯಾವುದೇ ಪ್ರಯೋಜನ ಕನ್ನಡಕ್ಕೆ ತರಲು ಸಾಧ್ಯ ವಾಗುತ್ತಿಲ್ಲ. ಈ ವಿಷಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ನಿರ್ಲಕ್ಷ್ಯ ತೋರಿಸುತ್ತಿವೆ ಎಂದು ವೀರಪ್ಪ ಮೊಯ್ಲಿ ಕಿಡಿಕಾರಿದರು.
ಸಮಾರಂಭದಲ್ಲಿ ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ, ಖ್ಯಾತನಟ ಡಾ.ಶಿವರಾಜ್ ಕುಮಾರ್, ನಟಿ ಶ್ರುತಿ ಸೇರಿದಂತೆ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X