Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಛಂದಸ್ಸುಇಲ್ಲದ ಅಕ್ಷರವಿಲ್ಲ: ಕೊರ್ಗಿ...

ಛಂದಸ್ಸುಇಲ್ಲದ ಅಕ್ಷರವಿಲ್ಲ: ಕೊರ್ಗಿ ಶಂಕರನಾರಾಯಣ

ವಾರ್ತಾಭಾರತಿವಾರ್ತಾಭಾರತಿ22 Feb 2016 12:06 AM IST
share

ಬೆಂಗಳೂರು, ಫೆ.21: ಜನ ಸಾಮಾನ್ಯರು ಮಾತನಾಡುವ ಭಾಷೆಯಿಂದ ಹಿಡಿದು ಸಾಹಿತಿಗಳು ರಚಿಸುವ ಸಾಹಿತ್ಯವರೆಗೂ ಪ್ರತಿಯೊಂದರಲ್ಲೂ ಛಂದಸ್ಸು ಅಡಗಿರುತ್ತದೆ ಎಂದು ಹಿರಿಯ ವಿದ್ವಾಂಸ, ಲೇಖಕ ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ ಇಂದಿಲ್ಲಿ ಅಭಿಪ್ರಾಯಿಸಿದ್ದಾರೆ.
ರವಿವಾರ ನಗರದ ಕಸಾಪ ಸಭಾಂಗಣದಲ್ಲಿ ಒಪ್ಪಣ್ಣ ನೆರೆಕೆರೆ ಪ್ರತಿಷ್ಠಾನದಿಂದ ಆಯೋಜಿಸಲಾಗಿದ್ದ ಲೇಖಕ ರಘು ಮುಳಿಯರ ‘ಹಾಡಾಯಿತು ಹಕ್ಕಿ’ ಛಂದೋಬದ್ಧ ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಛಂದಸ್ಸನ್ನು ವ್ಯವಸ್ಥಿತವಾಗಿ ಜೋಡಿಸಿಕೊಂಡಾಗ ಕಾವ್ಯ ಆಗುತ್ತದೆ.
ಹೀಗೆ ಹೊರಬಂದ ಯಾವುದೇ ಕಾವ್ಯವನ್ನಾಗಲಿ ನಾವು ಆಸ್ವಾದಿಸುವುದರ ಮೂಲಕ ಅದರ ಸಾರವನ್ನು ಪಡೆಯಬೇಕು. ಆಗ ಅದರಲ್ಲಿರುವ ಸಾರ ಅರ್ಥವಾಗುತ್ತದೆ. ಆದುದರಿಂದಲೇ ನಾವು ಗದ್ಯ ಮತ್ತು ನಾಟಕಗಳನ್ನೂ ಕಾವ್ಯಕ್ಕೆ ಸೇರಿಸಲಾಗಿದೆ. ಆದರೆ, ಇದೇ ವೇಳೆಛಂದಸ್ಸು ಆವಶ್ಯಕತೆಯಿಲ್ಲ ಎಂದು ಪ್ರತಿಪಾದಿಸುವವರು ಹೆಚ್ಚಾಗುತ್ತಿದ್ದಾರೆಂದು ಬೇಸರ ವ್ಯಕ್ತಪಡಿಸಿದರು.
ವೇದಗಳ ಕಾಲದಿಂದ ಬೆಳೆದುಬಂದಿರುವಂತಹ ಛಂದಸ್ಸಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಈ ಹಿನ್ನೆಲೆಯಲ್ಲಿ ಛಂದಸ್ಸು ಬರೆಯುವುದು, ಓದುವುದು ಸ್ವಲ್ಪ ಕಷ್ಟವಾಗುತ್ತದೆ. ಛಂದಸ್ಸು ಹೆಚ್ಚಾಗಿ ಹಳಗನ್ನಡದಲ್ಲಿ ಬಳಕೆಯಾಗುತ್ತಿದ್ದು, ಭಾಷೆ ಬದಲಾದಂತೆಲ್ಲಾ ಛಂದಸ್ಸು ತನ್ನ ಶಕ್ತಿಯನ್ನು ಕಳೆದುಕೊಳ್ಳುತ್ತಿದೆ ಎಂದು ಅವರು ಹೇಳಿದರು.ಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹಿರಿಯ ವಿದ್ವಾಂಸ, ಅಷ್ಟಾವಧಾನಿ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ ಮಾತನಾಡಿ, ಯಾವುದೇ ಒಂದು ಸಾಹಿತ್ಯವನ್ನು ಅನುಭವಿಸುವಾಗ ಅದು ಪಂಚೇಂದ್ರೀಯಗಳಿಗೆ ಪ್ರಜ್ಞೆ ಮತ್ತು ಸ್ವರ್ಶವನ್ನು ನೀಡುತ್ತದೆ. ಸಾಹಿತ್ಯದಲ್ಲಿರುವ ಶಕ್ತಿ ಬೇರೆ ಎಲ್ಲಿಯೂ ಸಿಗುವುದಿಲ್ಲ. ಅದು ಯಾರು ಸಾಹಿತ್ಯವನ್ನು ಅನುಭವಿಸುತ್ತಾರೋ ಅವರಿಗೆ ಮಾತ್ರ ತಿಳಿಯುತ್ತದೆ ಎಂದು ವಿಶ್ಲೇಷಿಸಿದರು.
ಸಾಹಿತ್ಯ ಕ್ಷೇತ್ರದಲ್ಲಿ ಶಬ್ದ ಮತ್ತು ಅರ್ಥಕ್ಕೆ ಬಹಳ ವ್ಯತ್ಯಾಸವಿದ್ದು ಬೇರೆ-ಬೇರೆ ಅರ್ಥಗಳನ್ನು ಕೊಡುತ್ತದೆ. ಇದನ್ನು ಅನುಭವಿಸಿಕೊಂಡು ಹೋಗುವಂತಹ ಓದುಗರನ್ನು ಸಾಹಿತ್ಯ ವಿಶೇಷ ಲೋಕಕ್ಕೆ ಕೊಂಡೊಯ್ಯುತ್ತದೆ. ಹಾಗೆಯೇ ಸಾಹಿತ್ಯವನ್ನು ರಚಿಸುವಾಗ ಕವಿಗಳು ನಾದವನ್ನು ಪರಿಗಣಿಸಬೇಕಿದೆ. ಆ ಮೂಲಕ ಓದು ಬರದವನಿಗೂ ಸಹಜವಾಗಿ ನಮ್ಮ ಸಾಹಿತ್ಯವನ್ನು ನಾದದ ಮೂಲಕ ತಲುಪಿಸಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಒಪ್ಪಣ್ಣ ನೆರೆಕೆರೆ ಪ್ರತಿಷ್ಠಾನದ ಟ್ರಸ್ಟಿ ತೆಕ್ಕುಂಜ ಕುಮಾರ ಸ್ವಾಮಿ, ಪುಸ್ತಕದ ಲೇಖಕ ರಘು ಮಳಿ, ಕೃಷ್ಣ ಶರ್ಮಾ ಹಳೆಮನೆ ಉಪಸ್ಥಿತರಿದ್ದರು.


 ‘ಆಧುನಿಕ ಕಾಲಘಟ್ಟದಲ್ಲಿ ಭಾವಗೀತೆಗಳು ಮರೆಯಾಗುತ್ತಿರುವುದು ಕನ್ನಡಕ್ಕೆ ಮಾಡಿದ ಅವಮಾನ. ಆದುದರಿಂದ ಮುಂಬರುವ ಕವಿಗಳು ಭಾವಗೀತೆಗಳ ಪ್ರಪಂಚವನ್ನು ನಿರ್ಮಿಸಲು ಮುಂದಾಗಬೇಕು’
    
    ಡಾ.ಕಬ್ಬಿನಾಲೆ ವಸಂತ ಭಾರದ್ವಾಜ ಹಿರಿಯ ವಿದ್ವಾಂಸ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X