Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕನ್ಹಯ್ಯ ಬಿಡುಗಡೆಯಾದ ನಂತರ ಖಾಲಿದ್...

ಕನ್ಹಯ್ಯ ಬಿಡುಗಡೆಯಾದ ನಂತರ ಖಾಲಿದ್ ಬೆಂಬಲಕ್ಕೆ ನಿಲ್ಲುವುದೇ ಜೆಎನ್‌ಯು?

ವಾರ್ತಾಭಾರತಿವಾರ್ತಾಭಾರತಿ22 Feb 2016 11:12 AM IST
share
ಕನ್ಹಯ್ಯ ಬಿಡುಗಡೆಯಾದ ನಂತರ ಖಾಲಿದ್ ಬೆಂಬಲಕ್ಕೆ ನಿಲ್ಲುವುದೇ ಜೆಎನ್‌ಯು?

ನವದೆಹಲಿ : ಜೆಎನ್‌ಯು ಘಟನೆ ನಡೆದಂದಿನಿಂದ ನಾಪತ್ತೆಯಾಗಿದ್ದ ಅಲ್ಲಿನ ವಿವಾದಾಸ್ಪದ ಕಾರ್ಯಕ್ರಮವನ್ನು ಆಯೋಜಿಸಿದ್ದವನೆನ್ನಲಾದ ಉಮರ್ ಖಾಲಿದ್ ರವಿವಾರ ರಾತ್ರಿ ಕನಿಷ್ಠ ಐದು ಇತರ ಆಪಾದಿತ ವಿದ್ಯಾರ್ಥಿಗಳೊಂದಿಗೆ ಕ್ಯಾಂಪಸ್ಸಿನಲ್ಲಿ ಕಾಣಿಸಿಕೊಂಡು ವಿದ್ಯಾರ್ಥಿಗಳನ್ನುದ್ದೇಶಿಸಿ ಭಾಷಣ ಮಾಡಿದ್ದು, ಇಡೀ ವಿದ್ಯಮಾನಕ್ಕೇ ಹೊಸ ತಿರುವನ್ನು ನೀಡುವ ಸೂಚನೆಯಿದೆ.

ದೆಹಲಿ ಪೊಲೀಸರು ಜೆಎನ್‌ಯು ವಿದ್ಯಾರ್ಥಿ ಯೂನಿಯನ್ ನಾಯಕ ಕನ್ಹಯ್ಯಾ ಕುಮಾರ್‌ನನ್ನು ದೇಶದ್ರೋಹದ ಆರೋಪದ ಮೇಲೆ ಬಂಧಿಸಿದಂದಿನಿಂದ ಇವರೆಲ್ಲಾ ನಾಪತ್ತೆಯಾಗಿದ್ದರು.

ರವಿವಾರ ಸಂಜೆಯ ಬೆಳವಣಿಗೆಯ ನಂತರ ಜೆಎನ್‌ಯು ಆಡಳಿತ ಹಾಗೂ ಶಿಕ್ಷಕರು ಪೊಲೀಸರನ್ನು ಕ್ಯಾಂಪಸ್ಸಿನೊಳಗೆ ಪ್ರವೇಶಿಸಲು ಅನುಮತಿಸದಿರಲು ನಿರ್ಧರಿಸಿರುವುದು ಹೋರಾಟದ ಕಿಚ್ಚು ಮುಂದುವರಿಯುವಂತೆ ನೋಡಿಕೊಳ್ಳಲೆಂಬ ಉದ್ದೇಶದಿಂದ ಎಂಬುದು ಹಲವರ ವಾದವಾಗಿದೆ.

ಈತನ್ಮಧ್ಯೆ ಕುಮಾರ್‌ನ ಜಾಮೀನು ಅರ್ಜಿ ದೆಹಲಿ ಹೈಕೋರ್ಟಿನ ಮುಂದೆ ಮಂಗಳವಾರ ಬರಲಿದ್ದು ದೆಹಲಿ ಪೊಲೀಸರು ಇದನ್ನು ವಿರೋಧಿಸದಿರಲು ನಿರ್ಧರಿಸಿರುವುದರಿಂದ ಕನ್ಹಯ್ಯೆಗೆ ಜಾಮೀನು ಸಿಗುವ ಎಲ್ಲಾ ಸಾಧ್ಯತೆಯೂ ಇದೆ. ತರುವಾಯ ಜೆಎನ್‌ಯು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಹಾಗೂಪ್ರತಿಭಟನೆಗಳನ್ನು ಬೆಂಬಲಿಸುತ್ತಿರುವ ವಿದ್ಯಾರ್ಥಿನಿ ದಿವ್ಯಾ ಗರ್ಗ್ ಪ್ರಕಾರ ಒಮ್ಮೆ ಕನ್ಹಯ್ಯಾ ಬಿಡುಗಡೆಯಾದನೆಂದರೆ ಪ್ರತಿಭಟನೆಗಳ ಬಣ್ಣವೇ ಬದಲಾಗಿ ಅವು ತಣ್ಣಗಾಗುವ ಸಂಭವವಿದೆ. ‘‘ಮತ್ತೆ ತರಗತಿಗಳು ಪ್ರಾರಂಭವಾಗುವವು.ಕೆಲವರು ಪ್ರತಿಭಟನೆಗಳನ್ನು ಮುಂದುವರಿಸಿದರೂ ಅದು ಅರೆ ಮನಸ್ಸಿನಿಂದ ನಡೆಯಬಹದು," ಎಂದು ಆಕೆ ಹೇಳುತ್ತಾರೆ.


ಖಾಲಿದ್ ಮಾತ್ರವಲ್ಲಿ ಈ ಪ್ರಕರಣದಲ್ಲಿ ದೆಹಲಿ ಪೊಲೀಸರ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿರುವ ಇತರ ವಿದ್ಯಾರ್ಥಿಗಳಿಗೆ ಕನ್ಹಯ್ಯಾ ಬಿಡುಗಡೆಯಾದ ನಂತರ ಎಷ್ಟರ ಮಟ್ಟಿನ ಬೆಂಬಲ ಸಿಗಬಹುದೆಂಬುದರ ಬಗ್ಗೆಯೂ ಅವರಿಗೆ ಸಂದೇಹವಿದೆ.


ಇನ್ನಿತರ ವಿದ್ಯಾರ್ಥಿಗಳ ಪ್ರಕಾರ ಇದೀಗ ವಿಶ್ವವಿದ್ಯಾನಿಲಯಕ್ಕೆ ವಾಪಸಾಗಿರುವ ಉಮರ್ ಖಾಲಿದ್‌ನನ್ನು ಸಮರ್ಥಿಸುವುದು ಕಷ್ಟಕರವಾಗಬಹುದು. ಆತ ಸಂಸತ್ ದಾಳಿ ಪ್ರಕರಣದ ದೋಷಿ ಅಫ್ಝಲ್ ಗುರು ಬೆಂಬಲವಾಗಿ ಕೂಗಿದ್ದನೆನ್ನಲಾದ ಘೋಷಣೆಗಳು ಜನರಿಗೆ ಅಷ್ಟೊಂದು ಸರಿ ಕಾಣದಿರಬಹುದೆಂದು ಅವರು ಹೇಳುತ್ತಾರೆ.
ಇತ್ತ ಕಳೆದೊಂದು ವಾರದಿಂದ ಉಮರ್ ಖಾಲಿದ್ ಸುದ್ದಿಯಲ್ಲಿರುವಂತೆಯೇ ಆತನ ಸಹೋದರಿಯರು ಹಾಗೂ ಕುಟುಂಬತಮಗೆ ಅನಾಮಿಕ ವ್ಯಕ್ತಿಗಳಿಂದ ಬೆದರಿಕೆಗಳು ಬರುತ್ತಿವೆಯೆಂದು ಹೇಳುತ್ತಿದ್ದಾರೆ. ಅಮೆರಿಕಾದ ವಿಶ್ವವಿದ್ಯಾನಿಲಯವೊಂದರಲ್ಲಿ ಪಿ.ಹೆಚ್‌ಡಿ ವ್ಯಾಸಂಗ ಮಾಡುತ್ತಿರುವ ಆತನ ಸಹೋದರಿ ಮರ್ಯಮ್ ಫಾತಿಮಾ ತಾನು ಭಾರತ ವಿರೋಧಿ ಘೋಷಣೆಗಳನ್ನು ಒಪ್ಪುವುದಿಲ್ಲವಾದರೂ ಏನಾದರೂ ಕುತಂತ್ರ ನಡೆದಿರಬಹುದಾದ ಸಂದೇಹ ವ್ಯಕ್ತಪಡಿಸಿದ್ದಾರೆ.


ತರುವಾಯ ಜೆನ್‌ಯು ವಿದ್ಯಾರ್ಥಿ ಯೂನಿಯನ್ ಉಪಾಧ್ಯಕ್ಷೆ ಶೆಹಲಾ ರಶೀದ್ ಹೀಗೆ ಹೇಳುತ್ತಿದ್ದಾರೆ -‘‘ನಾವೆಲ್ಲರೂ ಕನ್ಹಯ್ಯಾ ಪರವಾಗಿ ಮಾತ್ರವಲ್ಲದೆ ಇಡೀ ವಿಶ್ವವಿದ್ಯಾನಿಲಯದ ಪರವಾಗಿ ಯಾವುದೇ ವಿಷಯದಲ್ಲೂ ಅಸಮ್ಮತಿ ವ್ಯಕ್ತಪಡಿಸುವ ನಮ್ಮ ಹಕ್ಕನ್ನು ದೃಢಪಡಿಸಲು ಹೋರಾಡುತ್ತಿದ್ದೇವೆ.’’

share
ವಾರ್ತಾಭಾರತಿ
ವಾರ್ತಾಭಾರತಿ
Next Story
X