Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ: ಮತ ಎಣಿಕೆಗೆ ಸಿದ್ಧತೆ ಪೂರ್ಣ...

ಸುಳ್ಯ: ಮತ ಎಣಿಕೆಗೆ ಸಿದ್ಧತೆ ಪೂರ್ಣ ಜಿಲ್ಲಾ ಪಂಚಾಯತ್‌ಗೆ 12 ಟೇಬಲ್, ತಾಲೂಕು ಪಂಚಾಯತ್‌ಗೆ 13 ಟೇಬಲ್

ವಾರ್ತಾಭಾರತಿವಾರ್ತಾಭಾರತಿ22 Feb 2016 5:36 PM IST
share
ಸುಳ್ಯ: ಮತ ಎಣಿಕೆಗೆ ಸಿದ್ಧತೆ ಪೂರ್ಣ ಜಿಲ್ಲಾ ಪಂಚಾಯತ್‌ಗೆ 12 ಟೇಬಲ್, ತಾಲೂಕು ಪಂಚಾಯತ್‌ಗೆ 13 ಟೇಬಲ್

ಸುಳ್ಯ: ಫೆ.20ರಂದು ನಡೆದಿರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯ ಸುಳ್ಯ ತಾಲೂಕಿನ ಮತಗಳ ಎಣಿಕೆ ಮಂಗಳವಾರ ಸುಳ್ಯದ ನೆಹರೂ ಸ್ಮಾರಕ ಕಾಲೇಜಿನಲ್ಲಿ ನಡೆಯಲಿದ್ದು, ಸಿದ್ಧತೆಗಳು ಪೂರ್ಣಗೊಂಡಿವೆ. ತಾಲೂಕು ಪಂಚಾಯತ್ ಕ್ಷೇತ್ರಗಳಿಗೆ ಒಂದು ಕ್ಷೇತ್ರಕ್ಕೆ ಒಂದು ಟೇಬಲ್‌ನಂತೆ 13 ಟೇಬಲ್‌ಗಳನ್ನು ಎರಡು ಕೊಠಡಿಗಳಲ್ಲಿ ಅಳವಡಿಸಲಾಗುವುದು. ಜಿಲ್ಲಾ ಪಂಚಾಯತ್‌ನ 4 ಕ್ಷೇತ್ರಗಳ ಮತಎಣಿಕೆ ಕಾಲೇಜಿನ 2ನೇ ಮಹಡಿಯ ಸಭಾಭವನದಲ್ಲಿ ನಡೆಯುವುದು. ಒಂದೊಂದು ಕ್ಷೇತ್ರಕ್ಕೆ ತಲಾ 3 ಟೇಬಲ್‌ಗಳನ್ನು ಅಳವಡಿಸಲಾಗಿದೆ. ಆರಂಭದಲ್ಲಿ ಒಂದೊಂದು ಮತ ಯಂತ್ರದ ವಿವರ ಪಡೆಯಲು 15 ನಿಮಿಷ ಬೇಕಾಗಬಹುದು. ಬಳಿಕ ಎಣಿಕೆಯು ತಲಾ 10 ನಿಮಿಷಗಳಲ್ಲಿ ನಡೆಯಬಹುದು. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭಗೊಳ್ಳುವುದು. ಪ್ರಥಮವಾಗಿ ಅಂಚೆ ಮತಪತ್ರಗಳನ್ನು ತೆರೆದು, ಎಣಿಕೆಗೈದು ಬಳಿಕ ಮತಯಂತ್ರಗಳನ್ನು ತೆರೆಯುವ ಪ್ರಕ್ರಿಯೆ ಆರಂಭಗೊಳ್ಳುವುದು ಕಡಿಮೆ ಮತಗಟ್ಟೆಗಳಿರುವ ತಾ.ಪಂ ಕ್ಷೇತ್ರಗಳ ರಿಸಲ್ಟ್ 9.30ರಿಂದ 10 ಗಂಟೆಯ ಒಳಗಾಗಿ ತಿಳಿಯಲು ಆರಂಭವಾಗುತ್ತದೆ. ಉಳಿದವುಗಳ ಲೆಕ್ಕ 10.30ರಿಂದ 11 ಗಂಟೆಯ ಒಳಗೆ ಅಂತಿಮಗೊಳ್ಳುವ ಸಾಧ್ಯತೆ ಇದೆ. ಎಣಿಕೆ ಪ್ರಕ್ರಿಯೆಯಲ್ಲಿ 25 ಟೇಬಲ್‌ಗಳಲ್ಲಿ 75 ಮಂದಿ ಮತಎಣಿಕೆ ಸಿಬ್ಬಂದಿ ಇತರ ಕಾರ್ಯಗಳಲ್ಲಿ 50 ಮಂದಿ ತೊಡಗಿಸಿಕೊಳ್ಳುತ್ತಾರೆ. ಭದ್ರತಾ ಕಾರ್ಯದಲ್ಲಿ ಸುಮಾರು 75 ಮಂದಿ ಪೋಲೀಸ್ ಸಿಬ್ಬಂದಿ ಮತ್ತು ಗೃಹರಕ್ಷಕ ದಳದವರು ಇರುತ್ತಾರೆ.

ಪೂರ್ವಭಾವಿ ಸಭೆ:

ಮತ ಎಣಿಕೆಯ ಹಿನ್ನೆಲೆಯಲ್ಲಿ ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿ ಅರುಣಪ್ರಭ ರಾಜಕೀಯ ಪಕ್ಷ ಹಾಗೂ ಮಾಧ್ಯಮ ಪ್ರತಿನಿಧಿಗಳ ಸಭೆ ನಡೆಸಿ ಮಾಹಿತಿ ನೀಡಿದರು. ಮತ ಎಣಿಕೆ ಕೇಂದ್ರದ ಒಳಗೆ ಮತ ಎಣಿಕೆ ಏಜೆಂಟರಲ್ಲದೆ ಅಭ್ಯರ್ಥಿ ಅಥವಾ ಚುನಾವಣಾ ಏಜೆಂಟ್‌ಗೆ ಮಾತ್ರ ಹೋಗಲು ಅವಕಾಶವಿರುತ್ತದೆ. ಎಣಿಕೆ ಕೇಂದ್ರದೊಳಗೆ ನೀರಿನ ಬಾಟಲ್ ಸೇರಿದಂತೆ ಯಾವುದೇ ವಸ್ತುಗಳನ್ನು ಕೊಂಡೊಯ್ಯಲು ಅವಕಾಶವಿಲ್ಲ. ನೀರು ಮತ್ತಿತರ ಸೌಲಭ್ಯಗಳಿಗೆ ಪಕ್ಕದ ಕೊಠಡಿಯಲ್ಲಿ ಅವಕಾಶ ಮಾಡಿಕೊಡಲಾಗುವುದು. ಇದುವರೆಗೆ ಚುನಾವಣೆ ಅತ್ಯಂತ ಶಾಂತಿಯುತವಾಗಿ ನಡೆದಿದೆ. ಮತ ಎಣಿಕೆಯನ್ನು ಕೂಡಾ ಶಾಂತಿಯುತವಾಗಿ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಅರುಣಪ್ರಭ ವಿನಂತಿಸಿದರು. ಮತ ಎಣಿಕೆ ಸಿಬ್ಬಂದಿಗಳು, ಅಧಿಕಾರಿಗಳು, ಮಾಧ್ಯಮದವರನ್ನು ಹೊರತುಪಡಿಸಿ ಎನ್.ಎಂ.ಸಿ.ಯ ಪ್ರಧಾನ ದ್ವಾರದಿಂದ ಒಳಗೆ ಹೋಗಲು ಯಾರಿಗೂ ಕೂಡ ಅವಕಾಶವಿಲ್ಲ. ವಾಹನಗಳಿಗೆ ಕೂಡಾ ಅವಕಾಶ ಮಾಡಿಕೊಡುವುದಿಲ್ಲ, ವಿಜಯೋತ್ಸವ, ಮೆರವಣಿಗೆಗಳಿಗೆ ಕೂಡಾ ಅವಕಾಶವಿಲ್ಲ ಎಂದು ಸರ್ಕಲ್ ಇನ್‌ಸ್ಪೆಕ್ಟರ್ ಬಿ.ಎಸ್.ಸತೀಶ್ ಹೇಳಿದರು. ತಾಲೂಕು ಪಂಚಾಯತ್ ಚುನಾವಣಾಧಿಕಾರಿ ಅನಂತಶಂಕರ್, ಸಹಾಯಕ ಚುನಾವಣಾಧಿಕಾರಿ ಕೆಂಪಲಿಂಗಪ್ಪ, ಜಿ.ಪಂ. ಸಹಾಯಕ ಚುನಾವಣಾಧಿಕಾರಿ ಚಂದ್ರಶೇಖರ ಪೇರಾಲು, ಎಸ್.ಐ.ಚಂದ್ರಶೇಖರ್, ಬಿಜೆಪಿ ಮುಖಂಡರಾದ ಉಮೇಶ್ ವಾಗ್ಲೆ, ಪಿ.ಜಿ.ಎಸ್.ಎನ್.ಪ್ರಸಾದ್, ಕಾಂಗ್ರೆಸ್ ಮುಖಂಡ ಪಿ.ಎಸ್.ಗಂಗಾಧರ್, ಜೆ.ಡಿ.ಎಸ್. ಅಭ್ಯರ್ಥಿ ರಾಮಚಂದ್ರ ಬಳ್ಳಡ್ಕ, ಪಕ್ಷೇತರ ಅಭ್ಯರ್ಥಿ ಅನಿಲ್ ಬಳ್ಳಡ್ಕ ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X