Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಸ್ತುವಾರಿ ಸಚಿವರು ತಮ್ಮ ವರ್ತನೆಯನ್ನು...

ಉಸ್ತುವಾರಿ ಸಚಿವರು ತಮ್ಮ ವರ್ತನೆಯನ್ನು ತಿದ್ದಿಕೊಳ್ಳಬೇಕು ಇಲ್ಲ ಸಚಿವ ಸ್ಥಾನಬಿಟ್ಟು ತೆರಳಬೇಕು - ಪ್ರತಾಪಸಿಂಹ ನಾಯಕ್

ವಾರ್ತಾಭಾರತಿವಾರ್ತಾಭಾರತಿ22 Feb 2016 6:17 PM IST
share
ಉಸ್ತುವಾರಿ ಸಚಿವರು ತಮ್ಮ ವರ್ತನೆಯನ್ನು ತಿದ್ದಿಕೊಳ್ಳಬೇಕು ಇಲ್ಲ ಸಚಿವ ಸ್ಥಾನಬಿಟ್ಟು ತೆರಳಬೇಕು - ಪ್ರತಾಪಸಿಂಹ ನಾಯಕ್

  ಬೆಳ್ತಂಗಡಿ: ದ.ಕ.ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳದೆ, ಕಾನೂನು ಬಾಹಿರವಾಗಿ ವರ್ತಿಸುತ್ತಿರುವ ಸಚಿವ ಅಭಯ ಚಂದ್ರ ಜೈನ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ವರ್ತನೆಯನ್ನು ತಿದ್ದಿಕೊಳ್ಳಬೇಕು ಇಲ್ಲೇ ಸಚಿವ ಸ್ಥಾನಬಿಟ್ಟು ತೆರಳಬೇಕು ಇನ್ನೂ ಹೀಗೇ ಮುಂದುವರಿದರೆ ಅವರ ವಿರುದ್ದ ಬಿಜೆಪಿ ಹೋರಾಟ ನಡೆಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಪ್ರತಾಪಸಿಂಹ ನಾಯಕ್ ಎಚ್ಚರಿಸಿದರು.
    ಅವರು ಸೋಮವಾರ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಜಿಲ್ಲೆಯ ಸಚಿವರುಗಳ ನಡತೆಗಳನ್ನು ವಿಶ್ಲೇಷಿಸಿ ಖಂಡಿಸಿದರು.
  ಮೂಲ್ಕಿಯ ಪುರಸಭೆ ಚುನಾವಣೆ ಸಂದರ್ಭ ಸಚಿವ ಅಭಯಚಂದ್ರ ಜೈನ್ ರಿಕ್ಷಾದವರೊಂದಿಗೆ ನಡೆದುಕೊಂಡ ರೀತಿ, ಮೂಲ್ಕಿ ಪುರಸಭೆಯಲ್ಲಿ ಸಚಿವರು ಹೊಡೆದಾಟಕ್ಕೆ ಇಳಿದ ರೀತಿ, ಮೂಡುಬಿದರೆಯಲ್ಲಿ ಪತ್ರಕರ್ತನ ಮೇಲೆ ಹಾಕಿದ ಧಮ್ಕಿ, ಪುತ್ತಿಗೆಯಲ್ಲಿ ನಾಮಪತ್ರ ಸಲ್ಲಿಸಬೇಕಾದ ಸಂದರ್ಭ ತಹಸೀಲ್ದಾರರ ಕಚೇರಿಗೆ ನುಗ್ಗಿ ತೋರಿಸಿದ ವರ್ತನೆ, ಶಿರ್ತಾಡಿ-ಬೋರುಗುಡ್ಡೆ ಮತದಾನ ಕೇಂದ್ರದ ಬಳಿ ತೋರಿದ ದುರಹಂಕಾರದ ಮಾತು ಮತ್ತು ಗೂಂಡಾ ವರ್ತನೆ ಇತ್ಯಾದಿಗಳನ್ನು ಗಮನಿಸುವಾಗ ತಮ್ಮ ಸರಕಾರ ಬಂದ ಮೇಲೆ ಅಧಿಕಾರ ಶಾಶ್ವತ ಎಂಬ ರೀತಿಯಲ್ಲಿ ದರ್ಪ, ಅಹಂಕಾರದಿಂದ ವರ್ತಿಸುತ್ತಿದ್ದಾರೆ. ತಮ್ಮ ನಡತೆಯ ಮೂಲಕ ಪ್ರಜಾಪ್ರಭುತ್ವದ ಘನತೆಯನ್ನು ಎತ್ತಿ ತೋರಿಸಬೇಕಾದ ಸಚಿವರು ಕಾನೂನು ಕೈಗೆತ್ತಿಕೊಂಡು ಅಧಿಕಾರಿಗಳ ಮೇಲೆ ದರ್ಪ, ಒತ್ತಡ ತರುತ್ತಿರುವುದು ಎಷ್ಟರ ಮಟ್ಟಿಗೆ ಸರಿ. ಸಚಿವರೇ ಕಾನೂನು ಬಾಹಿರ ವರ್ತನೆ ತೋರಿದರೆ ಅವರ ಹಿಂಬಾಲಕರು ಹೊಡೆದಾಡಿಕೊಳ್ಳುವುದು ಆಶ್ಚರ್ಯತರುವ ಸಂಗತಿ ಅಲ್ಲ ಎಂದರು.
     
ಸಚಿವರದ್ದು ಹೀಗಾದರೆ ಇನ್ನು ಉಸ್ತುವಾರಿ ಸಚಿವರು ಕ್ರಿಮಿನಲ್‌ಗಳನ್ನು ಹಿಡಿದುಕೊಂಡೇ ತಿರುಗಾಡುತ್ತಾರೆ. ದಕ್ಷ ಪೋಲಿಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದು ನಾನೇ ಎಂದು ಬಹಿರಂಗವಾಗಿ ಹೇಳುತ್ತಿದ್ದಾರೆ. ಇನ್ನು ಜಿಲ್ಲೆಯಲ್ಲಿ ಮರಳು ಮಾಫಿಯಾ ನಿರಂತರವಾಗಿರುವುದು, ಬೆಳ್ತಂಗಡಿಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಖೋಟಾನೋಟು ಹಂಚಿರುವುದನ್ನು ನೋಡಿದರೆ ಇದಕ್ಕೆಲ್ಲಾ ಆಡಳಿತ ಪಕ್ಷದ ವಿಪರೀತ ಹಸ್ತಕ್ಷೇಪವೇ ಕಾರಣ. ಜಿಲ್ಲೆಯಲ್ಲಿರುವ ಕುಮ್ಕಿ ಸಮಸ್ಯೆ, ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಸಚಿವರು ಸಚಿವ ಸಂಪುಟದಲ್ಲಾಗಲಿ, ವಿಧಾನಸಭೆಯಲ್ಲಾಗಲೀ ಪ್ರಸ್ತಾಪಿಸಿ ಪರಿಹಾರ ಕಂಡುಕೊಳ್ಳದೆ ಸಚಿವ ಸ್ಥಾನಕ್ಕೆ ಕಳಂಕ ತಂದಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಸಮಸ್ಯೆಗಳ ಬಗ್ಗೆ ರಾಜಕೀಯ ಪಕ್ಷಗಳು ಹೊರಾಟ ಮಾಡುವುದು ಸಮಾನ್ಯ. ಸಚಿವರುಗಳು ಸ್ಪಂದಿಸಬೇಕಾದದದ್ದು ಕರ್ತವ್ಯ. ಆದರೆ ಕಳೆದ ಎರಡೂ ವರೆ ವರ್ಷಗಳಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು, ಕಾಂಗ್ರೇಸ್ ಶಾಸಕರುಗಳು ನಡೆದುಕೊಂಡ ರೀತಿ ಖಂಡನೀಯವಾಗಿದೆ. ತಮ್ಮ ಸ್ಥಾನದಲ್ಲಿ ಗೌರವ ಉಳಿಸುವ ಸಾಮರ್ಥ್ಯ ಇಲ್ಲದಿದ್ದರೆ ಸ್ಥಾನವನ್ನು ಬಿಡುಬಿಡುವುದು ಒಳಿತು. ಇನ್ನಾದರೂ ತಮ್ಮ ನಡತೆಯನ್ನು ತಿದ್ದಿಕೊಳ್ಳದಿದ್ದರೆ ಜನಪರ ಹೋರಾಟದ ಮೂಲಕ ರಾಜೀನಾಮೆಗೂ ಆಗ್ರಹಿಸುತ್ತೇವೆ ಎಂದು ಪ್ರತಾಪಸಿಂಹ ಎಚ್ಚರಿಸಿದರು. ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಯುವ ಮೊರ್ಚಾ ಅಧ್ಯಕ್ಷ ರಂಜನ್ ಜಿ. ಗೌಡ, ಪಕ್ಷದ ಮಂಡಲಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಕಲ್ಮಂಜ ಗ್ರಾ.ಪಂ. ಸದಸ್ಯ ಕೃಷ್ಣಪ್ಪ ಗುಡಿಗಾರ್, ಎಸ್.ಸಿ. ಮೋರ್ಚಾದ ಅಧ್ಯಕ್ಷ ರಾಘವ, ಎಸ್.ಟಿ.ಮೋರ್ಚಾದ ಅಧ್ಯಕ್ಷ ಲಿಂಗಪ್ಪ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X