Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಕಾಲೇಜಿನ ವಿದ್ಯಾರ್ಥಿಗಳಿಗಾಗಿ...

ಮಂಗಳೂರು : ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಜೀವನಮೌಲ್ಯ ಶಿಕ್ಷಣ ಕಾರ್ಯಗಾರ

ವಾರ್ತಾಭಾರತಿವಾರ್ತಾಭಾರತಿ22 Feb 2016 7:37 PM IST
share

    ಮಂಗಳೂರು,ಫೆ.22: ನಗರದ ಕೆನರಾ ಕಾಲೇಜಿನಲ್ಲಿ ಇತ್ತೀಚೆಗೆ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಜೀವನಮೌಲ್ಯ ಶಿಕ್ಷಣ ಕಾರ್ಯಗಾರ ನಡೆಯಿತು.

                  

   ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಸರಕಾರೇತರ ಸಂಸ್ಥೆ ರೆಸ್‌ಕ್ಯೂ ನ ಮುಖ್ಯ ಕಾರ್ಯ ನಿರ್ವಾಹಕ ಅಭಿಷೇಕ್ ಕ್ಲಿಫಡ್‌ರ್ ಜೇಕಬ್ ಭಾರತದಲ್ಲಿ ಇಂದು ವಿದ್ಯಾರ್ಥಿ ಸಮುದಾಯಕ್ಕೆ ಶಿಕ್ಷಣದ ಜೊತೆಯಲ್ಲಿ ಮೌಲ್ಯಧಾರಿತ ಚಿಂತನೆಗಳಿಗೆ ಅವಕಾಶವನ್ನು ನೀಡುವ ಅಗತ್ಯವಿದೆ. ಯುವಕರು ದೇಶದ ಆಸ್ತಿಯಾಗಿದ್ದು ಅವರನ್ನು ಸುಸಂಸ್ಕೃತರನ್ನಾಗಿಸಬೇಕಾಗಿದೆ. ಶಾಲಾಕಾಲೇಜು ಕಲಿಕೆಯ ಅವಧಿಯಲ್ಲಿ ಪ್ರೀತಿ ಪ್ರೇಮದ ಉನ್ಮಾದ ಸ್ಥಿತಿಯನ್ನು ತಲುಪದಂತೆ ಅರಿವು ನೀಡಬೇಕಾಗಿದೆ. ನಮ್ಮ ಯುವಪೀಳಿಗೆ ವಿವಿಧ ಅನಾಹುತಗಳಿಗೆ, ಅಪರಾಧಗಳಿಗೆ ಬಲಿಯಾಗುತ್ತಿದ್ದಾರೆ. ಮುಖ್ಯವಾಗಿ ಅನಾರೋಗ್ಯಕರ ಲೈಂಗಿಕಾಸಕ್ತಿ, ಅನೈತಿಕ ಸಂಬಂಧಗಳು, ವೈಜ್ಞಾನಿಕ ತಂತ್ರಜ್ಞಾನದ ಬಳಕೆಯಿಂದ ಭ್ರೂಣ ಪತ್ತೆ, ಅತ್ಯಾಚಾರ, ವೇಶ್ಯಾವಾಟಿಕೆ ಜಾಲ ಇತ್ಯಾದಿ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿ ಮನೋವಿಕಾರಕ್ಕೊಳಗಾಗಿ ತಪ್ಪು ದಾರಿಯಲ್ಲಿ ಲೈಂಗಿಕ ತೃಷೆಯನ್ನು ತೀರಿಸಿಕೊಳ್ಳುವ ಮತ್ತು ಮಾದಕ ದ್ರವ್ಯ ಸೇವನೆಯಂತಹ ದುಶ್ಚಟಗಳಿಂದಾಗಿ, ಮಾರಣಾಂತಿಕ ರೋಗಗಳಿಗೆ ಬಲಿಯಾಗುತ್ತಿದ್ದು, ಏಡ್ಸ್‌ನಂತಹ ರೋಗಗಳಿಂದ ಬಳಲಿ ಖಿನ್ನತೆಗೊಳಗಾಗಿ ಆತ್ಮಹತ್ಯಗೆ ಶರಣಾಗುತ್ತಿದ್ದಾರೆ. ಇದನ್ನೆಲ್ಲಾ ತಪ್ಪಿಸಬೇಕಾದರೆ ಅವರಿಗೆ ನೈತಿಕ ಮೌಲ್ಯಗಳನ್ನು ರೂಡಿಸಿಕೊಳ್ಳುವಂತೆ ತಯಾರು ಮಾಡಬೇಕಾಗಿದೆ. ತನ್ಮೂಲಕ ಉತ್ತಮ ಮಾನವೀಯ ಸಂಬಂಧಗಳನ್ನು ಬಲಿಷ್ಠಗೊಳಿಸಬಹುದು. ಸ್ವೇಚ್ಛಾಚಾರಕ್ಕೆ ಕಡಿವಾಣ ಹಾಕಿ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ತೊಡಗುವಂತೆ ಮಾರ್ಗದರ್ಶನ ನೀಡಬೇಕಾದ ಅಗತ್ಯವಿದೆ ಎಂದು ಹೇಳಿದರು. ಡಾ. ಝಯೋನ್ ಶರ್ಮ ಭ್ರೂಣಹತ್ಯೆಯ ಬಗ್ಗೆ ಸಚಿತ್ರವಾಗಿ ಉಪನ್ಯಾಸವಿತ್ತರು. ಕಾಲೇಜಿನ ಉಪಪ್ರಾಂಶುಪಾಲ ಡಾ. ಮನೋಹರ ಜೋಷಿ ಸ್ವಾಗತಿಸಿದರು. ಉಪನ್ಯಾಸಕಿ ಸುಷ್ಮಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X