Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹೆಚ್ಚು ನಿರಾಶ್ರಿತರನ್ನು ಸ್ವೀಕರಿಸಲು...

ಹೆಚ್ಚು ನಿರಾಶ್ರಿತರನ್ನು ಸ್ವೀಕರಿಸಲು ಮುಂದೆ ಬಂದ ಪೋರ್ಚುಗಲ್

ಕುಸಿಯುತ್ತಿರುವ ಜನಸಂಖ್ಯೆಯನ್ನು ಸರಿದೂಗಿಸುವ ಪ್ರಯತ್ನ

ವಾರ್ತಾಭಾರತಿವಾರ್ತಾಭಾರತಿ22 Feb 2016 8:19 PM IST
share
ಹೆಚ್ಚು ನಿರಾಶ್ರಿತರನ್ನು ಸ್ವೀಕರಿಸಲು ಮುಂದೆ ಬಂದ ಪೋರ್ಚುಗಲ್

ಲಿಸ್ಬನ್ (ಪೋರ್ಚುಗಲ್), ಫೆ. 22: ಪ್ರವಾಹೋಪಾದಿಯಲ್ಲಿ ಹರಿದು ಬರುತ್ತಿರುವ ವಲಸಿಗರ ಸಮಸ್ಯೆಯನ್ನು ನಿಭಾಯಿಸಲು ಹೆಣಗುತ್ತಿರುವ ಐರೋಪ್ಯ ದೇಶಗಳ ಹೊರೆಯನ್ನು ಕಡಿಮೆ ಮಾಡಲು ಪೋರ್ಚುಗಲ್ ಮುಂದೆ ಬಂದಿದೆ. 10,000 ವಲಸಿಗರನ್ನು ಸ್ವೀಕರಿಸುವ ಕೊಡುಗೆಯನ್ನು ಅದು ಐರೋಪ್ಯ ದೇಶಗಳಿಗೆ ನೀಡಿದೆ.

ಆದರೆ, ಪೋರ್ಚುಗಲ್ ವಾಸ್ತವವಾಗಿ ಈ ಕೊಡುಗೆಯನ್ನು ನೀಡಿರುವುದು ತನ್ನ ದೇಶದ ಕುಸಿಯುತ್ತಿರುವ ಜನಸಂಖ್ಯೆಯನ್ನು ಸರಿದೂಗಿಸುವುದಕ್ಕಾಗಿ.

ವಲಸಿಗರು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಆಸ್ಟ್ರಿಯ, ಗ್ರೀಸ್, ಇಟಲಿ ಮತ್ತು ಸ್ವೀಡನ್ ದೇಶಗಳಿಗೆ ಪೋರ್ಚುಗಲ್ ಪ್ರಧಾನಿ ಆಂಟೋನಿಯೊ ಕೋಸ್ಟ ಕಳೆದ ವಾರ ಪತ್ರಗಳನ್ನು ಬರೆದಿದ್ದಾರೆ. ಐರೋಪ್ಯ ಒಕ್ಕೂಟದ ನಿರಾಶ್ರಿತ ಕೋಟ ವ್ಯವಸ್ಥೆಯ ಭಾಗವಾಗಿ ಈಗಾಗಲೇ ಸ್ವೀಕರಿಸಲು ಒಪ್ಪಿಕೊಂಡಿರುವ 4,500 ನಿರಾಶ್ರಿತರಿಗೆ ಹೆಚ್ಚುವರಿಯಾಗಿ, ಇನ್ನೂ 5,800 ನಿರಾಶ್ರಿತರನ್ನು ಸ್ವೀಕರಿಸಲು ಪೋರ್ಚುಗಲ್ ಸಿದ್ಧವಾಗಿದೆ ದೇಶ ಸಿದ್ಧವಿರುವುದಾಗಿ ಅವರು ಪತ್ರದಲ್ಲಿ ಹೇಳಿದ್ದಾರೆ.

ನಿರಾಶ್ರಿತರನ್ನು ತಡೆಯುವುದಕ್ಕಾಗಿ ಯುರೋಪ್ ತನ್ನ ಗಡಿಗಳನ್ನು ಮುಚ್ಚಬೇಕು ಎನ್ನುವ ಸಲಹೆಗೆ ಪೋರ್ಚುಗಲ್ ವಿರುದ್ಧವಾಗಿದೆ ಎಂದು ಕೋಸ್ಟ ಇತ್ತೀಚೆಗೆ ಬ್ರಸೆಲ್ಸ್‌ನಲ್ಲಿ ಹೇಳಿದ್ದರು. ಈ ನಿಟ್ಟಿನಲ್ಲಿ ಪೋರ್ಚುಗಲ್ ಪೂರ್ವನಿದರ್ಶನ ಹಾಕಿಕೊಡುತ್ತದೆ ಎಂಬುದಾಗಿಯೂ ಅವರು ಹೇಳಿದ್ದರು.

ವಲಸಿಗರಿಗೆ ಪುನರ್ವಸತಿ ಕಲ್ಪಿಸುವ ಸಂಪೂರ್ಣ ಹೊಣೆಯನ್ನು ಜರ್ಮನಿಯ ಮೇಲೆಯೇ ಬಿಡುವುದ ಸರಿಯಲ್ಲ ಎಂದು ಅವರು ಈ ತಿಂಗಳ ಆರಂಭದಲ್ಲಿ ಬರ್ಲಿನ್‌ಗೆ ನೀಡಿದ್ದ ಭೇಟಿಯ ವೇಳೆ ಹೇಳಿದ್ದರು.

ಜರ್ಮನಿ ಕಳೆದ ವರ್ಷವೊಂದರಲ್ಲೇ 10 ಲಕ್ಷಕ್ಕೂ ಅಧಿಕ ನಿರಾಶ್ರಿತರನ್ನು ಸ್ವೀಕರಿಸಿತ್ತು.

ಆದರೆ, ನಿರಾಶ್ರಿತರ ಮೊದಲ ಆಯ್ಕೆ ಪೋರ್ಚುಗಲ್ ಆಗಿಲ್ಲ. ಅವರು ಸ್ವೀಡನ್ ಮತ್ತು ಡೆನ್ಮಾರ್ಕ್ ಮುಂತಾದ ಉತ್ತರದ ಐರೋಪ್ಯ ದೇಶಗಳಲ್ಲಿ ಪುನರ್ವಸತಿ ಬಯಸುತ್ತಿದ್ದಾರೆ. ಆದರೆ, ಈ ದೇಶಗಳು ವಲಸಿಗರ ಪ್ರವಾಹವನ್ನು ನಿಯಂತ್ರಿಸುವುದಕ್ಕಾಗಿ ತಮ್ಮ ಗಡಿಗಳಲ್ಲಿ ನಿರ್ಬಂಧಗಳನ್ನು ಹೇರುತ್ತಿವೆ.

ನಿರ್ಜನ ಪಟ್ಟಣಗಳು

ನಿರಾಶ್ರಿತರ ಸ್ವೀಕಾರದಿಂದ ಜನರೇ ಇಲ್ಲದ ದೇಶದ ಹಲವು ಭಾಗಗಳಿಗೆ ಪ್ರಯೋಜನವಾಗುತ್ತದೆ ಎಂದು ಪೋರ್ಚುಗೀಸ್ ನಿರಾಶ್ರಿತ ಮಂಡಳಿಯ ಮುಖ್ಯಸ್ಥೆ ತೆರೇಸಾ ಟಿಟೊ ಮೊರಾಯಿಸ್ ಹೇಳುತ್ತಾರೆ.

‘‘ಭಾರೀ ಸಂಖ್ಯೆಯ ಪೋರ್ಚುಗೀಸರು ಹೊರಗೆ ವಲಸೆ ಹೋಗಿದ್ದಾರೆ ಹಾಗೂ ಹಲವು ವಲಯಗಳಿಗೆ ಜೀವಂತಿಕೆ ಮರಳಬೇಕಾಗಿದೆ’’ ಎಂದರು.

ಜಾಗತಿಕ ಆರ್ಥಿಕ ಬಿಕ್ಕಟ್ಟಿನ ತೀವ್ರ ದಾಳಿಗೆ ಒಳಗಾದ ಪೋರ್ಚುಗಲ್‌ನಲ್ಲಿ ಉದ್ಯೋಗಾವಕಾಶಗಳು ಕಡಿಮೆಯಾದಾಗ ಯುವ ಜನರು ಅವಕಾಶಗಳನ್ನು ಅರಸಿ ವಿದೇಶಗಳಿಗೆ ಪ್ರಯಾಣಿಸಿದ್ದಾರೆ. ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಸುಮಾರು ಐದು ಲಕ್ಷ ಪೋರ್ಚುಗೀಸರು ಶಾಶ್ವತವಾಗಿ ಅಥವಾ ತಾತ್ಕಾಲಿಕವಾಗಿ ದೇಶ ತೊರೆದಿದ್ದಾರೆ.

ಜನನ ದರ ಕುಸಿತ

 ಪೋರ್ಚುಗಲ್‌ನ ಜನನ ದರವೂ ಐರೋಪ್ಯ ಒಕ್ಕೂಟದಲ್ಲೇ ಅತ್ಯಂತ ಕಡಿಮೆಯಾಗಿದೆ. ಜನನ ಪ್ರಮಾಣದ ಕುಸಿತ ಇದೇ ದರದಲ್ಲಿ ಮುಂದುವರಿದರೆ 2060ರ ವೇಳೆಗೆ ಪೋರ್ಚುಗಲ್ ತನ್ನ ಜನಸಂಖ್ಯೆಯ 20 ಶೇಕಡದಷ್ಟನ್ನು ಕಳೆದುಕೊಳ್ಳಲಿದೆ. ಅಂದರೆ, ಜನಸಂಖ್ಯೆಯು ಈಗಿನ 1.05 ಕೋಟಿಯಿಂದ 86 ಲಕ್ಷಕ್ಕೆ ಕುಸಿಯಲಿದೆ ಎಂದು ಪೋರ್ಚುಗಲ್‌ನ ರಾಷ್ಟ್ರೀಯ ಅಂಕಿಸಂಖ್ಯೆ ಸಂಸ್ಥೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X