Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇವರನ್ನು ನಂಬುತ್ತೇನೆ, ವೌಢ್ಯವನ್ನಲ್ಲ:...

ದೇವರನ್ನು ನಂಬುತ್ತೇನೆ, ವೌಢ್ಯವನ್ನಲ್ಲ: ಸಿದ್ದರಾಮಯ್ಯ

ಟಿ.ನರಸೀಪುರ: 10ನೆ ಕುಂಭಮೇಳ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ22 Feb 2016 11:42 PM IST
share
ದೇವರನ್ನು ನಂಬುತ್ತೇನೆ, ವೌಢ್ಯವನ್ನಲ್ಲ: ಸಿದ್ದರಾಮಯ್ಯ

‘ಮುಂದಿನ ಅಧಿವೇಶದಲ್ಲಿ ವೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಗೆ ಚಿಂತನೆ’
ಮೈಸೂರು, ಫೆ.22: ನಾನೇನು ನಾಸ್ತಿಕನಲ್ಲ. ದೇವರ ಮೇಲೆ ನಂಬಿಕೆ ಇಲ್ಲವೆಂದಲ್ಲ. ಆದರೆ, ವೌಡ್ಯ, ಕಂದಾಚಾರದ ಮೇಲೆ ನನಗೆ ನಂಬಿಕೆ ಇಲ್ಲ. ಯಾವುದೇ ವಿಷಯವನ್ನು ವೈಜ್ಞಾನಿಕ ಮತ್ತು ವೈಚಾರಿಕತೆಯ ನೆಲೆಗಟ್ಟಿನಲ್ಲಿ ಚಿಂತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ನಡೆಯುತ್ತಿರುವ 10ನೆ ಕುಂಭಮೇಳದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವೈಜ್ಞಾನಿಕ ನೆಲೆಯಲ್ಲಿ ಚಿಂತಿಸುವುದರಿಂದ ನನ್ನನ್ನು ನಾಸ್ತಿಕ ಎಂದು ಕರೆಯುವುದು ಸರಿಯಲ್ಲ ಎಂದು ತಿಳಿಸಿದರು. ನಾನು ಶಾಲೆಗೆ ಸೇರುವ ಮೊದಲೇ ನನ್ನ ತಂದೆ ನನ್ನನ್ನು ವೀರ ಮಕ್ಕಳ ಕುಣಿತಕ್ಕೆ ಸೇರಿಸಿದ್ರು. ದೇವರ ಜಾತ್ರೆಗಳಿಗೆ ನಾವು ಕುಣಿಯುತ್ತಿದ್ದೆವು. ಪ್ರತಿ ಯುಗಾದಿ ಹಬ್ಬದ ಜಾತ್ರೆಯಲ್ಲಿ ನಾನು ವೀರ ಕುಣಿತ ಕುಣಿಯುತ್ತಿದ್ದೆ. ಈ ಮೂಲಕ ಶಿಕ್ಷಣ ಪಡೆಯುವ ಮೊದಲೇ ದೇವರ ಸೇವೆ ಮಾಡುತ್ತಿದ್ದೆವು ಎಂದು ಹೇಳಿದರು. ನೋಡುವ ದೃಷ್ಟಿ ವೈಜ್ಞಾನಿಕ ಮತ್ತು ವೈಚಾರಿಕತೆಯಿಂದ ಕೂಡಿದ್ದರೆ ಬಸವಣ್ಣ ಕಂಡ ವೈಚಾರಿಕ ಸಮಾಜ ನಿರ್ಮಾಣ ಸಾಧ್ಯ. ದೇವರು ಎಲ್ಲೆ ಇದ್ದರೂ ಒಂದೇ. ಪುಣ್ಯ ಸಿಗುತ್ತೆ ಅಂತ ಹಿಮಾಲಯಕ್ಕೆ ಹೋಗುವುದರಲ್ಲಿ ಅರ್ಥವಿಲ್ಲ. ಪಕ್ಕದಲ್ಲಿರುವ ದೇವರೂ ದೇವರೆ. ಭಾರತ ವಿವಿಧತೆಯಲ್ಲಿ ಏಕತೆ ಸಾರುತ್ತಿರುವ ರಾಷ್ಟ್ರ. ವೌಢ್ಯ ಮತ್ತು ಕಂದಾಚಾರವನ್ನು ಬಿಡಬೇಕು. ವೌಢ್ಯಗಳನ್ನು ಧರ್ಮದ ಚೌಕಟ್ಟಿನಲ್ಲಿ ತರಬಾರದು ಎಂದರು. ಉತ್ತರ ಭಾರತದಲ್ಲಿ ನಡೆಯುವ ಕುಂಭ ಮೇಳಗಳ ಸಾಲಿಗೆ ಟಿ.ನರಸೀಪುರದ ಕುಂಭ ಮೇಳವೂ ಸೇರುವಂತೆ ಮೂಲಸೌಕರ್ಯಗಳನ್ನು ಒದಗಿಸಲು ರಾಜ್ಯ ಸರಕಾರ ಬದ್ಧವಿದ್ದು, ಮುಂದಿನ ಬಾರಿ ಕುಂಭ ಮೇಳ ನಡೆಯುವ ವೇಳೆಗೆ ಟಿ.ನರಸೀಪುರದಲ್ಲಿ ಎಲ್ಲ ಬಗೆಯ ಸೌಕರ್ಯ ಒದಗಿಸುತ್ತೇವೆ ಎಂದು ತಿಳಿಸಿದರು. ಇದಕ್ಕು ಮುನ್ನ ಮಾತನಾಡಿದ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ, ನರಸೀಪುರದ ಅಭಿವೃದ್ಧಿಗೆ ರಾಜ್ಯ ಸರಕಾರ 50 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡಿದೆ. ಧಾರ್ಮಿಕ ಸಭೆ-ಸಮಾರಂಭಗಳಿಗೆ ಸಂವಿಧಾನದಲ್ಲಿ ಅವಕಾಶವಿದ್ದು, ಸರಕಾರ ಸಂವಿಧಾನಬದ್ಧವಾಗಿ ಕೆಲಸ ನಿರ್ವಹಿಸುತ್ತಿದೆ ಎಂದರು. ಧಾರ್ಮಿಕ ವೈಚಾರಿಕತೆಯಲ್ಲಿ ಸರಕಾರ ಮಧ್ಯ ಪ್ರವೇಶ ಮಾಡುವುದಿಲ್ಲ. ಟಿ.ನರಸೀಪುರದ ಕುಂಭಮೇಳ ಪ್ರದೇಶವನ್ನು ಗುಜರಾಜ್‌ನ ಸಬರಮತಿ ಆಶ್ರಮ ಮಾದರಿಯಲ್ಲಿ ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದರು. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ, ಸುತ್ತೂರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮೀಜಿ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್.ಮಹಾದೇವಪ್ರಸಾದ್ , ಸಂಸದ ಆರ್.ಧ್ರುವನಾರಾಯಣ, ಶಾಸಕರಾದ ಎಂ.ಕೆ.ಸೋಮಶೇಖರ್, ನರೇಂದ್ರಕುಮಾರ್, ಆರ್.ಧರ್ಮಸೇನಾ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X