Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕನ್ಹಯ್ಯಗೆ ದೊರೆಯದ ಜಾಮೀನು, ಯಥಾಸ್ಥಿತಿ...

ಕನ್ಹಯ್ಯಗೆ ದೊರೆಯದ ಜಾಮೀನು, ಯಥಾಸ್ಥಿತಿ ವರದಿ ಸಲ್ಲಿಕೆಗೆ ದಿಲ್ಲಿ ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ23 Feb 2016 8:25 PM IST
share
ಕನ್ಹಯ್ಯಗೆ ದೊರೆಯದ ಜಾಮೀನು, ಯಥಾಸ್ಥಿತಿ ವರದಿ ಸಲ್ಲಿಕೆಗೆ ದಿಲ್ಲಿ ಹೈಕೋರ್ಟ್ ಆದೇಶ

  ಹೊಸದಿಲ್ಲಿ,ಫೆ.23: ಜಾಮೀನು ಬಿಡುಗಡೆ ಕೋರಿ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟದ ನಾಯಕ ಕನ್ಹಯ್ಯಾಲಾಲ್ ಸಲ್ಲಿಸಿದ ಮನವಿಯ ಅಲಿಕೆಯನ್ನು ದಿಲ್ಲಿ ಹೈಕೋರ್ಟ್ ಬುಧವಾರಕ್ಕೆ ಮಂದೂಡಿದ್ದು, ಪ್ರಕರಣದ ತನಿಖೆಗೆ ಸಂಬಂಧಿಸಿ ಯಥಾಸ್ಥಿತಿ ವರದಿಯನ್ನು ಸಲ್ಲಿಸುವಂತೆ ದಿಲ್ಲಿ ಪೊಲೀಸರಿಗೆ ತಿಳಿಸಿದೆ.ದಿಲ್ಲಿ ಪೊಲೀಸರ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್‌ ಜನರಲ್ ತುಷಾರ್ ಮೆಹ್ತಾ ಅವರು ಕನ್ಹಯ್ಯಾ ಅವರ ಜಾಮೀನು ಮನವಿಯನ್ನು ವಿರೋಧಿಸುವುದಾಗಿ ತಿಳಿಸಿದಾಗ, ನ್ಯಾಯಾಧೀಶೆ ಪ್ರತಿಭಾ ರಾಣಿ, ತನಿಖೆಯ ಯಥಾಸ್ಥಿತಿ ವರದಿ ಸಲ್ಲಿಸುವಂತೆ ಆದೇಶಿಸಿದರು.
   ಕನ್ಹಯ್ಯ ಬಗ್ಗೆ ದಿಲ್ಲಿ ಪೊಲೀಸರು ಈಗಾಗಲೇ ವರದಿಯೊಂದನ್ನು ನ್ಯಾಯಾಲಯಕ್ಕೆ ವರದಿಯೊಂದನ್ನು ಸಲ್ಲಿಸಿದ್ದಾರೆ. ವಿವಾದಿತ ಕಾರ್ಯಕ್ರಮದಲ್ಲಿ ಕನ್ಹಯ್ಯಾ ಕುಮಾರ್ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ್ದನೆಂದು ವರದಿಯಲ್ಲಿ ಆರೋಪಿಸಲಾಗಿದೆ. ಖಾಸಗಿ ಟಿವಿ ವಾಹಿನಿಯೊಂದು ತೆಗೆದಿರುವ ವಿಡಿಯೋ ದೃಶ್ಯಾವಳಿಯ ಆಧಾರದಲ್ಲಿ ಪೊಲೀಸರು ಈ ಪ್ರಕರಣ ದಾಖಲಿಸಿದ್ದಾರೆಂದು ಸುದ್ದಿಸಂಸ್ಥೆಯೊಂದು ತಿಳಿಸಿದೆ.

ವರದಿಯಲ್ಲಿ ಕನ್ಹಯ್ಯ ವಿರುದ್ಧ ವಿವಾದಿತ ಕಾರ್ಯಕ್ರಮವನ್ನು ಸಾಂಸ್ಕೃತಿಕ ಕಾರ್ಯಕ್ರಮದ ಸೋಗಿನಲ್ಲಿ ನಡೆಸಿರುವುದು, ಅನುಮತಿ ರಹಿತವಾಗಿ ಬಲವಂತದಿಂದ ಕಾರ್ಯಕ್ರಮ ಏರ್ಪಡಿಸಿರುವುದು, ಜೆಎನ್‌ಯು ಕ್ಯಾಂಪಸ್‌ನಲ್ಲಿ ಕಾನೂನು ಮತ್ತು ಶಿಸ್ತಿನ ಸಮಸ್ಯೆಯನ್ನು ಸೃಷ್ಟಿ, ಹಾಗೂ ಸಂವಿಧಾನವಿರೋಧಿ ಘೋಷಣೆಗಳನ್ನು ಕೂಗಿದ ಆರೋಪಗಳನ್ನು ಹೊರಿಸಲಾಗಿದೆ ಇದಕ್ಕೂ ಮುನ್ನ, ಪ್ರಕರಣದ ವಿಚಾರಣೆಗೆ ಹಾಜರಾಗದಂತೆ, ದಿಲ್ಲಿಯ ಲೆ.ಗವರ್ನರ್ ನಜೀಬ್‌ಜಂಗ್ ಅವರು ದಿಲ್ಲಿ ಸರಕಾರದ ಸ್ಥಾಯಿ ನ್ಯಾಯವಾದಿ ರಾಹುಲ್ ಮೆಹ್ತಾಗೆ ಸೂಚಿಸಿದ್ದರು. ಈ ಪ್ರಕರಣದಲ್ಲಿ ದಿಲ್ಲಿ ಪೊಲೀಸರ ಮುಂದೆ ಹಾಜರಾಗಲು ಅವರು ನಾಲ್ವರು ನ್ಯಾಯವಾದಿಗಳನ್ನು ನೇಮಿಸಿದ್ದರು.
 ಪ್ರಕರಣದ ಇತರ ಆರೋಪಿಗಳಾದ ಉಮರ್ ಖಾಲಿದ್, ಆನಂತ್ ಪ್ರಕಾಶ್ ನಾರಾಯಣ್, ಅಶುತೋಷ್ ಕುಮಾರ್, ರಾಮ ನಾಗಾ ಹಾಗೂ ಅನಿರ್ಬನ್ ಭಟ್ಟಾಚಾರ್ಯ ಕೂಡಾ ನ್ಯಾಯಾಲಯವನ್ನು ಸಂಪರ್ಕಿಸಿ, ತಾವು ಪೊಲೀಸರಿಗೆ ಶರಣಾಗುವ ಮುನ್ನ ತಮಗೆ ಸಮರ್ಪಕ ಭದ್ರತೆಯನ್ನು ಒದಗಿಸುವಂತೆ ಮನವಿ ಮಾಡಿದ್ದಾರೆ. ಅವರ ಅರ್ಜಿಯನ್ನು ಆಲಿಸಲು ಹೈಕೋರ್ಟ್ ಸಮ್ಮತಿಸಿದೆ.
 ಈ ಮಧ್ಯೆ ಉಮರ್‌ಖಾಲಿದ್ ಹಾಗೂ ಪ್ರಕರಣದ ಇತರ ಆರೋಪಿಗಳ ಬಂಧನಕ್ಕಾಗಿ ಜೆಎನ್‌ಯು ಕ್ಯಾಂಪಸ್‌ನೊಳಗೆ ಪ್ರವೇಶಿಸಲು ದಿಲ್ಲಿ ಪೊಲೀಸರಿಗೆ ಆದೇಶ ನೀಡುವಂತೆ ಕೋರಿ ಕಾನೂನು ವಿದ್ಯಾರ್ಥಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ಆಲಿಕೆಗೆ ದಿಲ್ಲಿ ಹೈಕೋರ್ಟ್ ಸಮ್ಮತಿಸಿದೆ.
ಕನ್ಹಯ್ಯ ಕುಮಾರ್ ದಿಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ ಜಾಮೀನು ಮನವಿಯಲ್ಲಿ, ತನ್ನ ವಿರುದ್ಧ ದೇಶದ್ರೋಹದ ಸುಳ್ಳು ಆರೋಪ ಹೊರಿಸಲಾಗಿದೆಯೆಂದು ತಿಳಿಸಿದ್ದಾರೆ ಹಾಗೂ ಜೆಎನ್‌ಯು ವಿವಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ತಾನು ಯಾವುದೇ ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗಿಲ್ಲವೆಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X