Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರವೇಶಕ್ಕೆ ನಿರ್ಬಂಧ ಹೇರುವ...

ಪ್ರವೇಶಕ್ಕೆ ನಿರ್ಬಂಧ ಹೇರುವ ದೇವಾಲಯಗಳನ್ನು ಬಹಿಷ್ಕರಿಸಿ: ನಿಡುಮಾಮಿಡಿ ಶ್ರೀ

ವೌಢ್ಯಾಚರಣೆ ವಿರುದ್ಧ ಜಾಗೃತಿ ವಿಚಾರಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ23 Feb 2016 11:48 PM IST
share
ಪ್ರವೇಶಕ್ಕೆ ನಿರ್ಬಂಧ ಹೇರುವ ದೇವಾಲಯಗಳನ್ನು ಬಹಿಷ್ಕರಿಸಿ: ನಿಡುಮಾಮಿಡಿ ಶ್ರೀ

ಬೆಂಗಳೂರು, ಫೆ. 23: ಮಹಿಳೆಯರನ್ನು ಪ್ರವೇಶಿಸದಂತೆ ನಿರ್ಬಂಧಹೇರುವ ದೇವಾಲಯಗಳನ್ನು ಬಹಿಷ್ಕರಿಸಿ ಎಂದು ನಿಡುಮಾಮಿಡಿ ಮಹಾ ಸಂಸ್ಥಾನ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಹೇಳಿದ್ದಾರೆ.
ಮಂಗಳವಾರ ನಗರದ ದೇವರಾಜ ಅರಸು ಭವನದಲ್ಲಿ ಡಿ.ದೇವರಾಜ ಅರಸು ಜನ್ಮಶತಮಾನೋತ್ಸವದ ಅಂಗವಾಗಿ ಡಿ.ದೇವರಾಜ ಅರಸು ಸಂಶೋಧನಾ ಸಂಸ್ಥೆ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಮಹಿಳೆಯರ ವೃತ್ತಿಯಲ್ಲಿ ಆಗುವಂತಹ ಅನಾನುಕೂಲಗಳು ಹಾಗೂ ವೌಢ್ಯಾಚರಣೆ ವಿರುದ್ಧ ಜಾಗೃತಿ ಕುರಿತ ವಿಚಾರಗೋಷ್ಠಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಜ್ಯ ಸೇರಿದಂತೆ ದೇಶದ ಇತರೆ ರಾಜ್ಯಗಳಲ್ಲಿ ದೇವಾಲಯಗಳಿಗೆ ಮಹಿಳೆಯರ ಪ್ರವೇಶವನ್ನು ನಿರಾಕರಿಸುವಂತಹ ಅವಮಾನವೀಯ ಪದ್ಧತಿ ಇನ್ನೂ ಜೀವಂತವಾಗಿದೆ. ಮಹಿಳೆಯರು ಈ ಪದ್ಧತಿಯ ವಿರುದ್ಧ ಹೋರಾಟ, ಪ್ರತಿಭಟನೆ ಮಾಡುವ ಬದಲು ಸ್ವತಃ ಮಹಿಳೆಯರೆ ಈ ದೇವಾಲಯಗಳನ್ನು ಬಹಿಷ್ಕರಿಸಿ ಎಂದು ಅವರು ಕರೆ ನೀಡಿದರು.
ಹೆಣ್ಣು ಮುಟ್ಟಾಗುತ್ತಾಳೆ ಎಂಬ ಅವೈಜ್ಞಾನಿಕ ಅರಿವಿನಿಂದ ದೇವಾಲಯಗಳಿಗೆ ಮಹಿಳೆಯರು ಪ್ರವೇಶಿಸದಂತೆ ನಿರ್ಬಂಧ ಹೇರಲಾಗುತ್ತಿದೆ. ಸೃಷ್ಟಿಯಲ್ಲಿರುವ ಎಲ್ಲ ಜೀವ-ಜಂತುಗಳು, ದೇವ-ಸಂತರು ತಾಯಿ ಗರ್ಭದಿಂದಲೆ ಜೀವವನ್ನು ಪಡೆಯುತ್ತಾರೆ. ಮುಟ್ಟು ಇಲ್ಲದೆ ಮನುಷ್ಯನ ಹುಟ್ಟಿಲ್ಲ. ಈ ಹುಟ್ಟಿನ ಗುಟ್ಟನ್ನು ಅರಿತು ಹೆಣ್ಣು ಗಂಡೆಂಬ ಭೇದ ಭಾವವಿಲ್ಲದೆ ಸಹ ಜೀವನ ತತ್ವಗಳನ್ನು ಸ್ವೀಕರಿಸಿ ಸಹಬಾಳ್ವೆಯಿಂದ ಬಾಳಬೇಕೆಂದು ಹಾರೈಸಿದರು.
ಮಹಿಳೆಯರ ಏಳಿಗೆಗೆ ಮೀಸಲಾತಿ ಊರುಗೋಲು ಇದ್ದಂತೆ. ಆದರೆ ಕಳೆದ 20 ವರ್ಷದಿಂದ ಮಹಿಳೆಯರಿಗೆ ಮೀಸಲಿಟ್ಟಿರುವ ಶೇ.33 ರಷ್ಟು ಮೀಸಲಾತಿಯನ್ನು ಮಹಿಳೆಯರಿಗೆ ಪುರುಷ ಪ್ರಧಾನ ಸಮಾಜ ನೀಡಲು ಒಪ್ಪುತ್ತಿಲ್ಲ. ಈ ಅಸಮಾನತೆಯ ಪುರುಷ ಸಮಾಜದ ತತ್ವಗಳ ವಿರುದ್ಧ ಮಹಿಳೆಯರು ಒಕ್ಕೊರಲಿನಿಂದ ಹೋರಾಟ ಮಾಡಬೇಕಿದೆ ಎಂದು ಉಲ್ಲೇಖಿಸಿದರು.
ಪುರುಷ ರೂಪಿತ ವೌಲ್ಯಗಳನ್ನು ಪ್ರಬಲವಾಗಿ ಪ್ರತಿರೋಧಿಸುವ ಗುಣಗಳನ್ನು ಮಹಿಳೆಯರು ಬೆಳೆಸಿಕೊಳ್ಳಬೇಕು. ಭ್ರೂಣ ಹತ್ಯೆ ಮತ್ತು ವರದಕ್ಷಿಣೆಯ ವಿರುದ್ಧ ಜಾಗೃತರಾಗಬೇಕು ಎಂದು ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದ ಕಾಲೇಜು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ವಿಶ್ವವಿದ್ಯಾನಿಲಯದ ಕುಲಸಚಿವೆ ಡಾ.ಮಲ್ಲಿಕಾ ಘಂಟಿ ಮಾತನಾಡಿ, ಪುರುಷ ಪ್ರಧಾನ ಸಮಾಜದ ಆಲೋಚನೆಗಳನ್ನು ಒಪ್ಪಿಕೊಳ್ಳುವ ಕೆಲ ಮಹಿಳೆಯರು ಅಸಮಾನತೆಗೆ ಇನ್ನಷ್ಟು ಪುಷ್ಟಿ ನೀಡುತ್ತಿದ್ದಾರೆ. ಸಮಾಜ ಮಹಿಳೆಯರ ಬಗ್ಗೆ ಸಕಾರಾತ್ಮಕವಾಗಿ ಆಲೋಚನೆ ಮಾಡಿದಾಗ ಮಾತ್ರ ಮಹಿಳೆಯರು ಮುಂದೆ ಬರಲು ಸಾಧ್ಯ ಎಂದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಮಾತನಾಡಿ, ದೇಶದಲ್ಲಿ ಸ್ವಾತಂತ್ರ ಬಂದು 70 ವರ್ಷಗಳೇ ಕಳೆದರೂ ಇನ್ನೂ ಶೇ.67 ರಷ್ಟು ಮಹಿಳೆಯರು ಸೌಲಭ್ಯ ವಂಚಿತ, ಶೋಷಣೆ ಅಸಮಾನತೆಯಿಂದ ಜೀವನ ನಡೆಸುತ್ತಿದ್ದಾರೆ. ಮಹಿಳೆಯರ ಏಳ್ಗೆ ಮಹಿಳೆಯರಿಂದಲೆ ಸಾಧ್ಯ. ಹೀಗಾಗಿ ರಾಜ್ಯದಲ್ಲಿರುವ ಸ್ತ್ರೀ ಶಕ್ತಿ ಸಂಘಟನೆಗಳು ಹೋರಾಟ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್.ಕಾಂತರಾಜ್, ಪ್ರಗತಿಪರ ಚಿಂತಕರಾದ ಡಾ.ಪ್ರಮೀಳಾ ಮಾಧವ್, ಬಿ.ಟಿ.ಲಲಿತಾ ನಾಯಕ್, ಪ್ರಾಧ್ಯಾಪಕಿ ಡಾ.ಚಂದ್ರಮಾ ಎಸ್.ಕಣಗಲಿ, ಸಾಹಿತಿ ಡಾ.ವರದಾ ಶ್ರೀನಿವಾಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X