Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಆರ್ಥಿಕತೆ ಸ್ಥಿರತೆಯ ಸ್ವರ್ಗ:...

ಭಾರತದ ಆರ್ಥಿಕತೆ ಸ್ಥಿರತೆಯ ಸ್ವರ್ಗ: ಪ್ರಣವ್

ವಾರ್ತಾಭಾರತಿವಾರ್ತಾಭಾರತಿ23 Feb 2016 11:58 PM IST
share
ಭಾರತದ ಆರ್ಥಿಕತೆ ಸ್ಥಿರತೆಯ ಸ್ವರ್ಗ: ಪ್ರಣವ್

ಜನಧನ್ ಯೋಜನೆಯಲ್ಲಿ 21 ಕೋಟಿ ಖಾತೆ; 32 ಸಾವಿರ ಕೋಟಿ ರೂ. ಠೇವಣಿ ಸಂಗ್ರಹ

ರೈತರಿಗೆ ಅತ್ಯುತ್ತಮ ಬೆಲೆಗಾಗಿ ಇ-ವೇದಿಕೆ

ಹೊಸದಿಲ್ಲಿ, ಫೆ.23: ಹದಗೆಟ್ಟಿರುವ ಜಾಗತಿಕ ಆರ್ಥಿಕತೆಯಲ್ಲಿ ಭಾರತವನ್ನು ‘ಸ್ಥಿರತೆಯ ಸ್ವರ್ಗ’ ಎಂದು ಬಣ್ಣಿಸಿರುವ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಸರಕಾರವು ಹೂಡಿಕೆಗಳ್ನು ಆಕರ್ಷಿಸಲು ಮಂಜೂರಾತಿ ಪ್ರಕ್ರಿಯೆಯನ್ನು ಸರಳಗೊಳಿಸಿದೆ. ಕಾಲಬಾಧಿತ ಕಾನೂನುಗಳನ್ನು ರದ್ದುಪಡಿಸಿದೆ ಹಾಗೂ ಪ್ರತಿಕೂಲವಲ್ಲದ ತೆರಿಗೆ ಆಡಳಿತವನ್ನು ಜಾರಿಗೆ ತಂದಿದೆ ಎಂದು ಇಂದಿಲ್ಲಿ ಹೇಳಿದ್ದಾರೆ.

ಸಂಸತ್ತಿನ ಬಜೆಟ್ ಅಧಿವೇಶನದ ಆರಂಭದಲ್ಲಿ ಜಂಟಿ ಸದನವನ್ನುದ್ದೇಶಿಸಿ ಮಾತನಾಡಿದ ಅವರು, ಭಾರತವು ವಿಶ್ವಬ್ಯಾಂಕ್‌ನ ರ್ಯಾಂಕಿಂಗ್‌ನಲ್ಲಿ 12 ಸ್ಥಾನ ಮೇಲೇರಿದೆ ಹಾಗೂ ವಿದೇಶಿ ಬಂಡವಾಳದ ಹರಿವು ಶೇ.39ರಷ್ಟು ಹೆಚ್ಚಾಗಿದೆಯೆಂದು ನರೇಂದ್ರ ಮೋದಿ ಸರಕಾರದ ಸಾಧನೆಗಳನ್ನು ಪಟ್ಟಿ ಮಾಡಿದರು.

 ಹೆಚ್ಚುತ್ತಿರುವ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಭಾರತದ ಆರ್ಥಿಕತೆ ಸ್ಥಿರವಾಗಿದೆ. ಜಿಡಿಪಿ ಬೆಳವಣಿಗೆ ಹೆಚ್ಚಾಗುವ ಮೂಲಕ ದೇಶವು ಬೃಹತ್ ಆರ್ಥಿಕತೆಗಳ ನಡುವೆ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಎನಿಸಿದೆಯೆಂದು ಮುಖರ್ಜಿ ತಿಳಿಸಿದರು.

 ಜನಧನ್ ಯೋಜನೆಯು (ಪಿಎಂಜೆಡಿವೈ) ವಿಶ್ವದ ಅತ್ಯಂತ ಯಶಸ್ವಿ ಆರ್ಥಿಕ ಒಳಗೊಳಿಸುವಿಕೆ ಕಾರ್ಯಕ್ರಮವೆಂದು ಇಂದು ವ್ಯಾಖ್ಯಾನಿಸಿರುವ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಈ ಯೋಜನೆಯಲ್ಲಿ 21 ಕೋಟಿಗೂ ಹೆಚ್ಚು ಖಾತೆಗಳಿಂದ ರೂ.32 ಸಾವಿರ ಕೋಟಿಗೂ ಹೆಚ್ಚು ವೌಲ್ಯದ ಠೇವಣಿಗಳನ್ನು ಸಂಗ್ರಹಿಸಲಾಗಿದೆಯೆಂದು ತಿಳಿಸಿದ್ದಾರೆ.

ಪಿಎಂಜೆಡಿವೈ ಕೇವಲ ಬ್ಯಾಂಕ್ ಖಾತೆಗಳನ್ನು ತರೆಯುವುದಕ್ಕಿಂತ ಬಹಳ ಆಚೆಗೆ ಹೋಗಿದ್ದು, ಬಡವರಿಗೆ ಮೂಲಭೂತ ಆರ್ಥಿಕ ಸೇವೆಗಳು ಹಾಗೂ ಭದ್ರತೆಯನ್ನು ಒದಗಿಸುವ ಮೂಲಕ ಬಡತನ ನಿವಾರಣೆಯ ಒಂದು ವೇದಿಕೆಯಾಗುತ್ತಿದೆ. ಇಂದು ಇದೊಂದು ವಿಶ್ವದಲ್ಲೇ ಅತ್ಯಂತ ಯಶಸ್ವಿ ಆರ್ಥಿಕ ಒಳಗೊಳಿಸುವಿಕೆ ಕಾರ್ಯಕ್ರಮವಾಗಿದೆಯೆಂದು ತಿಳಿಸಲು ಹೆಮ್ಮೆಪಡುತ್ತಿದ್ದೇನೆ. ತೆರೆಯಲಾದ 21 ಕೋಟಿ ಖಾತೆಗಳಲ್ಲಿ 15 ಕೋಟಿ ಖಾತೆಗಳು ವ್ಯವಹಾರ ನಿರತವಾಗಿದೆ. ಒಟ್ಟು ರೂ.32 ಸಾವಿರ ಕೋಟಿಗೂ ಹೆಚ್ಚು ಠೇವಣಿಗಳನ್ನು ಸಂಗ್ರಹಿಸಲಾಗಿದೆಯೆಂದು ಅವರು ಮಾಹಿತಿ ನೀಡಿದರು.

ರೈತರಿಗೆ ನ್ಯಾಯೋಚಿತ ಬೆಲೆಯನ್ನು ಖಚಿತಪಡಿಸಲು 585 ನಿಯಂತ್ರಿತ ಸಗಟು ಮಾರುಕಟ್ಟೆಗಳನ್ನು ಜೋಡಿಸುವ ರಾಷ್ಟ್ರೀಯ ಆನ್‌ಲೈನ್ ಕೃಷಿ ಮಾರುಕಟ್ಟೆ ವೇದಿಕೆಯನ್ನು ಭಾರತ ಸರಕಾರ ಸ್ಥಾಪಿಸಲಿದೆಯೆಂದು ಪ್ರಣವ್ ಮುಖರ್ಜಿ ತಿಳಿಸಿದ್ದಾರೆ.

 ಉಪಗ್ರಹ ನಕ್ಷತ್ರ ಮಾಲಿಕೆ ಸ್ವದೇಶಿ ನಾವಿಕ ಹಾಗೂ ಸ್ಥಳಾಧಾರಿತ ಸೇವೆಗಳಿಗೆ ಅನುಕೂಲ ಕಲ್ಪಿಸಲು, 2016ರಲ್ಲಿ ಭಾರತೀಯ ನಾವಿಕ ಉಪಗ್ರಹಗಳ ನಕ್ಷತ್ರ ಮಾಲಿಕೆಯನ್ನು ಪೂರ್ಣಗೊಳಿಸುವುದಕ್ಕೆ ಸರಕಾರ ಗಮನ ನೀಡಲಿದೆಯೆಂದು ಮುಖರ್ಜಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X