Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಚಿವೆ ಸ್ಮತಿ ಇರಾನಿ ಹೇಳಿಕೆಯನ್ನು ...

ಸಚಿವೆ ಸ್ಮತಿ ಇರಾನಿ ಹೇಳಿಕೆಯನ್ನು ನಿರಾಕರಿಸಿರುವ ಪೊಲೀಸ್

ವೇಮುಲಾ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ25 Feb 2016 11:27 PM IST
share

ಹೊಸದಿಲ್ಲಿ, ಫೆ.25: ಹೈದರಾಬಾದ್ ಸೆಂಟ್ರಲ್ ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾನ ಕುರಿತಂತೆ ಬುಧವಾರ ಸಂಸತ್ತಿನಲ್ಲಿ ಸಚಿವ ಸ್ಮತಿ ಇರಾನಿ ನೀಡಿರುವ ಭಾಷಣ ಇದೀಗ ತನ್ನ ವಿರೋಧಾಭಾಸಗಳಿಂದ ಚರ್ಚೆಗೆ ಗುರಿಯಾಗಿದೆ. ಅಂತರ್ಜಾಲ ಸುದ್ದಿ ತಾಣ ನ್ಯೂಸ್ ಮಿನಿಟ್‌ಗೆ ದೊರೆತ ದಾಖಲೆಗಳು ಸಚಿವೆಯ ಹೇಳಿಕೆಗೆ ತದ್ವಿರುದ್ಧವಾದುದನ್ನು ಹೇಳುತ್ತಿದೆ.
   
ಸಂಸತ್ತಿನಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ತನ್ನ ಆಕ್ರೋಶಭರಿತ ಹಾಗೂ ಭಾವನಾತ್ಮಕ ಭಾಷಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಮೃತದೇಹದ ಬಳಿ ಯಾವುದೇ ವೈದ್ಯರನ್ನು ಮರುದಿನ ಬೆಳಿಗ್ಗೆ 6.30ರವರೆಗೆ ಬರಲು ಬಿಟ್ಟಿಲ್ಲವೆಂದು ತೆಲಂಗಾಣ ಪೊಲೀಸರು ಹೈಕೋರ್ಟಿಗೆ ತಿಳಿಸಿದ್ದರು ಎಂದು ಹೇಳಿದ್ದರು. ಜನವರಿ 17ರಂದು ರೋಹಿತ್ ಮೃತ ದೇಹ ನ್ಯೂ ರಿಸರ್ಚ್ ಸ್ಕಾಲರ್ಸ್ ಹಾಸ್ಟೆಲ್‌ನ ಕೊಠಡಿ ಸಂಖ್ಯೆ 207ರಲ್ಲಿ ಸಂಜೆ 6.30ರಿಂದ 7ರ ನಡುವೆ ಪತ್ತೆಯಾಗಿತ್ತ್ತು. ರೋಹಿತ್ ಗೆಳೆಯ ಉಮಾ ಮಹೇಶ್ವರ್‌ಗೆ ಸೇರಿದ ಕೊಠಡಿ ಅದಾಗಿತ್ತು. ಸುರಕ್ಷಾ ಸಿಬ್ಬಂದಿಗಳು ರೋಹಿತ್‌ರ ದೇಹ ಸೀಲಿಂಗ್ ಫ್ಯಾನ್‌ನಿಂದ ನೇತಾಡುತ್ತಿರುವುದನ್ನು ನೋಡಿ ಕರ್ತವ್ಯದಲ್ಲಿದ್ದ ಮುಖ್ಯ ವೈದ್ಯಾಧಿಕಾರಿ ಎಂ ರಾಜ್‌ಶ್ರೀಯವರಿಗೆ ಸುದ್ದಿ ಮುಟ್ಟಿಸಿದರು.
 ‘‘ನನಗೆ ಸುಮಾರು 7.20ರ ಹೊತ್ತಿಗೆ ಕರೆ ಬಂತು, ನಾನು ದೇಹವನ್ನು ಪರೀಕ್ಷಿಸಲು ಹಾಸ್ಟೆಲ್‌ಗೆ ಧಾವಿಸಿದೆ. ನಾನು ಅಲ್ಲಿ ತಲುಪಬೇಕಾದರೆ, ದೇಹವನ್ನು ಕೆಳಗಿಳಿಸಲಾಗಿತ್ತು. ಹತ್ತು ನಿಮಿಷಗಳೊಳಗಾಗಿ ನಾವು ಆತ ಮೃತಪಟ್ಟಿದ್ದಾನೆಂದು ಘೋಷಿಸಿದೆವು. ನಾನು ವಿಸಿಯವರಿಗೆ ಕೂಡಲೇ ಮಾಹಿತಿ ನೀಡಿದೆ. ಆತನನ್ನು ಬದುಕಿಸುವ ಸಾಧ್ಯತೆಗಳಿವೆಯೇ ಎಂದು ಅವರು ಕೇಳಿದರು. ಆ ದಿನ ನಾನಲ್ಲಿ ಬೆಳಗ್ಗೆ 3 ಗಂಟೆ ತನಕ ಇದ್ದೆ,’’ಎಂದು ಡಾ. ರಾಜ್‌ಶ್ರೀ ನ್ಯೂಸ್‌ಮಿನಿಟ್‌ಗೆ ಮಾಹಿತಿ ನೀಡಿದ್ದಾರೆ.
  ಈ ಬಗ್ಗೆ ವಿಶ್ವವಿದ್ಯಾನಿಲಯದ ಹೆಲ್ತ್ ಬುಕ್‌ನಲ್ಲಿಯೂ ಆಕೆ ದಾಖಲಿಸಿದ್ದು. ಅದರಲ್ಲಿ ಅವರು ಜನವರಿ 17ರಂದು ರೋಹಿತ್ ಮೃತಪಟ್ಟ ಸಮಯ ಸುಮಾರು 7.30ರ ಹೊತ್ತಿಗೆ ಎಂದು ಬರೆದಿದ್ದಾರೆ.’’ ‘‘ದೇಹ ತಣ್ಣಗಾಗಿತ್ತು, ಹೊಟ್ಟೆಯ ಭಾಗ ರಕ್ತಸಿಕ್ತವಾಗಿದ್ದು, ನಾಲಗೆ ಹೊರಕ್ಕೆ ಚಾಚಿತ್ತು ಹಾಗೂ ಬಾಯಲ್ಲಿ ನೊರೆ ಕಾರಿತ್ತು. ಉಸಿರಾಟ ಹಾಗೂ ಎದೆ ಬಡಿತವಿರಲಿಲ್ಲ. ವಿಸಿ, ಡಿಎಸ್‌ಡಬ್ಲ್ಯು, ರಿಜಿಸ್ಟ್ರಾರ್ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ,’’ ಎಂದು ಬರೆದು ಡಾ ರಾಜ್‌ಶ್ರೀ ಸಹಿ ಹಾಕಿದ್ದಾರೆ.
  ಆದರೆ ಸಚಿವೆ ಸ್ಮೃತಿ ಇರಾನಿ ತೆಲಂಗಾಣ ಪೊಲೀಸರ ವರದಿಯನ್ನು ಉಲ್ಲೇಖಿಸುತ್ತಾ ಸಂಸತ್ತಿನಲ್ಲಿ ಹೀಗೆ ಹೇಳಿದ್ದರು -‘‘ತೆಲಂಗಾಣ ಹೈಕೋರ್ಟಿಗೆ ಸಲ್ಲಿಸಲಾದ ವರದಿಯೊಂದರ ಪ್ರಕಾರ, ಪೊಲೀಸರು ರೋಹಿತ್‌ನ ಹಾಸ್ಟೆಲ್‌ಗೆ ಸಂಜೆ 7.20ಕ್ಕೆ ತಲುಪಿದಾಗ ಅವರು ಮೃತ ದೇಹವನ್ನು ಕಂಡರು. ಅಲ್ಲಿ ಕೊಠಡಿ ತೆರೆದಿತ್ತು ಹಾಗೂ ಮೃತ ದೇಹ ಮೇಜಿನ ಮೇಲಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಕೈಬರಹದ ಡೆತ್ ನೋಟ್ ಪತ್ತೆಯಾಗಿತ್ತು. ಅದು ಯಾರನ್ನೂ ದೂರಿಲ್ಲ. ಇದು ನನ್ನ ಹೇಳಿಕೆಯಲ್ಲ. ಪೊಲೀಸರು ಹೀಗೆಂದು ಹೇಳಿದ್ದಾರೆ.’’ ಆದರೆ ಇದನ್ನು ಪೊಲೀಸ್ ಮೂಲಗಳು ಸ್ಪಷ್ಟವಾಗಿ ನಿರಾಕರಿಸುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X