Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಂಐಟಿ ವಿದ್ಯಾರ್ಥಿಗಳಿಂದ ಪರಿಸರಸ್ನೇಹಿ...

ಎಂಐಟಿ ವಿದ್ಯಾರ್ಥಿಗಳಿಂದ ಪರಿಸರಸ್ನೇಹಿ ರೋಬೊಟ್ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ26 Feb 2016 11:59 PM IST
share
ಎಂಐಟಿ ವಿದ್ಯಾರ್ಥಿಗಳಿಂದ ಪರಿಸರಸ್ನೇಹಿ ರೋಬೊಟ್ ನಿರ್ಮಾಣ

ಮಣಿಪಾಲ, ಫೆ.26: ಮುಂದಿನ ತಿಂಗಳು ಪುಣೆಯ ಬಾಲೆವಾಡಿ ಸ್ಟೇಡಿಯಂನಲ್ಲಿ ನಡೆಯುವ ‘ರೋಬೋ ಕಾನ್-16’ ರೋಬೊಟ್‌ಗಳ ರಾಷ್ಟ್ರೀಯ ಸ್ಪರ್ಧೆಗಾಗಿ ಮಣಿಪಾಲ ಎಂಐಟಿಯ ವಿದ್ಯಾರ್ಥಿಗಳು ಪರಿಸರಸ್ನೇಹಿ ರೋಬೋಟ್‌ನ್ನು ನಿರ್ಮಿಸಿದ್ದಾರೆ. ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ 33 ವಿದ್ಯಾರ್ಥಿಗಳ ತಂಡ ‘ರೋಬೊ ಮಣಿಪಾಲ್’ ವಿನ್ಯಾಸ ಗೊಳಿಸಿ ನಿರ್ಮಿಸಿದ ಈ ರೋಬೊಟ್‌ನ್ನು ಮಣಿಪಾಲ ವಿವಿಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಇಂದು ಸಂಜೆ ಎಂಐಟಿ ಕ್ಯಾಂಪಸ್‌ನ ಅಟೋಮೊಬೈಲ್ ಲ್ಯಾಬ್‌ನಲ್ಲಿ ಅನಾವರಣಗೊಳಿಸಿದರು.

ಎಂಐಟಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ 6ನೆ ಸೆಮಿಸ್ಟರ್‌ನ ಸತೀಶ್ ರೆಡ್ಡಿ ನೇತೃತ್ವದ ತಂಡ 7ರಿಂದ 8 ತಿಂಗಳ ಪರಿಶ್ರಮದಿಂದ ಈ ರೋಬೊಟ್‌ನ್ನು ನಿರ್ಮಿಸಿದೆ. ಈ ತಂಡದಲ್ಲಿ ಐವರು ವಿದ್ಯಾರ್ಥಿನಿಯರು ಸೇರಿದ್ದಾರೆ.
ಮಾ.3ರಿಂದ 5ರವರೆಗೆ ಪುಣೆಯಲ್ಲಿ ನಡೆಯುವ ರಾಷ್ಟ್ರೀಯ ರೋಬೊಕಾನ್-16 ಸ್ಪರ್ಧೆಯಲ್ಲಿ ಈ ತಂಡ ದೇಶದ ನಾನಾ ಭಾಗಗಳಿಂದ ಆಗಮಿಸುವ 120 ತಂಡಗಳೊಂ ದಿಗೆ ಸ್ಪರ್ಧಿಸಲಿದೆ. ಈ ಸ್ಪರ್ಧೆಯಲ್ಲಿ ದೇಶದ ಐಐಟಿ ಹಾಗೂ ಎನ್‌ಐಟಿಗಳ ವಿದ್ಯಾರ್ಥಿ ತಂಡಗಳೂ ಪಾಲ್ಗೊಳ್ಳಲಿವೆ. ಸ್ಪರ್ಧೆಯ ಕೊನೆಯಲ್ಲಿ ಅತ್ಯುತ್ತಮ ರೋಬೊಟ್ ಎಂದು ಆಯ್ಕೆಯಾಗುವ ಒಂದು ರೋಬೊಟ್, ಥಾಯ್‌ಲ್ಯಾಂಡ್‌ನಲ್ಲಿ ನಡೆಯುವ ಏಷ್ಯಾ-ಪೆಸಿಫಿಕ್ ವಲಯದ ‘ಅಬು ರೋಬೋಕಾನ್’ ಸ್ಪರ್ಧೆಯಲ್ಲಿ ಭಾಗವಹಿಸುವ ಅರ್ಹತೆ ಪಡೆಯಲಿದೆ ಎಂದು ಸತೀಶ್ ರೆಡ್ಡಿ ತಿಳಿಸಿದ್ದಾರೆ.
ತಮ್ಮ ತಂಡ ಅಂತಾರಾಷ್ಟ್ರೀಯ ಮಟ್ಟಕ್ಕೆ ತೇರ್ಗಡೆಗೊಳ್ಳಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
ರೋಬೊಟ್ ಅನಾವರಣದ ಬಳಿಕ ರೋಬೊ ಮಣಿಪಾಲ ತಂಡವು ತಾನು ನಿರ್ಮಿಸಿದ ರೋಬೊಟ್‌ನ ಪ್ರಾತ್ಯಕ್ಷಿಕೆಯನ್ನು ನೀಡಿತು.
ಈ ಬಾರಿಯ ಅಂತಾರಾಷ್ಟ್ರೀಯ ಸ್ಪರ್ಧೆಯ ಧ್ಯೇಯವಾಕ್ಯ ‘ಶುದ್ಧ ಇಂಧನ ವಿಶ್ವವನ್ನು ಬೆಳಗಲಿ’ ಎಂಬುದಾಗಿದ್ದು, ಅದಕ್ಕೆ ತಕ್ಕಂತೆ ರೋಬೊಟ್‌ನ್ನು ನಿರ್ಮಿಸಬೇಕಿದೆ. ರೋಬೊ ಮಣಿಪಾಲ ಇದಕ್ಕಾಗಿ ಎರಡು ರೋಬೊಟ್‌ಗಳನ್ನು ನಿರ್ಮಿ ಸಿದ್ದು, ಒಂದು ಯಾಂತ್ರಿಕವಾಗಿ ನಿರ್ಮಿಸಲಾದ ಪ್ರಧಾನ ‘ಹೈಬ್ರಿಡ್ ರೋಬೊಟ್’, ಇನ್ನೊಂದು ಇದರಿಂದ ವೈರ್‌ಲೆಸ್ ಆಗಿ ಗಾಳಿ ಇಂಧನವನ್ನು ಪಡೆದು ಸ್ವಯಂಚಾಲಿತವಾಗಿ ಕಾರ್ಯಾಚರಿಸುವ ‘ಇಕೋ ರೋಬೊಟ್’. ಹೈಬ್ರಿಡ್ ರೋಬೊನಲ್ಲಿರುವ ಇಡಿಎಸ್ ಮೂಲಕ ಉತ್ಪಾದನೆಯಾದ ಗಾಳಿ ಇಂಧನದಿಂದ ಶಕ್ತಿಯನ್ನು ಪಡೆಯುವ ಇಕೋ ರೋಬೊಟ್, ಸ್ವಯಂಚಾಲಿತವಾಗಿ ತನ್ನಲ್ಲಿರುವ ವಿಶೇಷ ಕೆಮರಾದ ಸಹಾಯದಿಂದ ಏರು-ತಗ್ಗುಗಳನ್ನು ನಿರಾಯಾಸ ವಾಗಿ ಕ್ರಮಿಸಿ ಗಮ್ಯಸ್ಥಾನವನ್ನು ಸೇರುವ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳು ತೋರಿಸಿದರು. ತನ್ನಲ್ಲಿ ಯಾವುದೇ ಇಂಧನ ಇಲ್ಲದಿದ್ದರೂ, ಹೈಬ್ರಿಡ್ ರೋಬೊನಿಂದ ಶುದ್ಧವಾದ ಗಾಳಿ ಇಂಧನ (ವಿಂಡ್ ಎನರ್ಜಿ) ಪಡೆದು ಕಾರ್ಯಾಚರಿಸುವ ಇಕೋ ರೋಬೊಟ್, ಪರಿಸರ ಸ್ನೇಹಿಯಾಗಿದೆ ಎಂದು ಸತೀಶ್ ರೆಡ್ಡಿ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X