Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಎನ್‌ಯು ಪ್ರಕರಣ ‘ದೇಶದ್ರೋಹ’ವಲ್ಲ:...

ಜೆಎನ್‌ಯು ಪ್ರಕರಣ ‘ದೇಶದ್ರೋಹ’ವಲ್ಲ: ಚಿದಂಬರಂ

ವಾರ್ತಾಭಾರತಿವಾರ್ತಾಭಾರತಿ26 Feb 2016 11:59 PM IST
share
ಜೆಎನ್‌ಯು ಪ್ರಕರಣ ‘ದೇಶದ್ರೋಹ’ವಲ್ಲ: ಚಿದಂಬರಂ

ಹೊಸದಿಲ್ಲಿ, ಫೆ.26: ದೇಶದ್ರೋಹದ ಆರೋಪದಲ್ಲಿ ಜವಾಹರಲಾಲ್ ನೆಹರೂ ವಿವಿ ವಿದ್ಯಾರ್ಥಿಗಳ ವಿರುದ್ಧ ಕೇಂದ್ರ ಸರಕಾರ ದಾಖಲಿಸಿರುವ ಪ್ರಕರಣ ತುಂಬಾ ದುರ್ಬಲ ವಾಗಿದೆಯೆಂದು ಮಾಜಿ ವಿತ್ತ ಹಾಗೂ ಗೃಹ ಸಚಿವ ಪಿ.ಚಿದಂಬರಂ ಬಣ್ಣಿಸಿದ್ದಾರೆ. ಕಾನೂನು ಜ್ಞಾನ ಚೆನ್ನಾಗಿರುವ ಯಾವುದೇ ನ್ಯಾಯವಾದಿಗೆ, ಇದು ದೇಶದ್ರೋಹದ ಕೃತ್ಯವಲ್ಲವೆಂದು ಆರಂಭದಲ್ಲೇ ತಿಳಿದುಬರುವುದೆಂದು ಅವರು ಹೇಳಿದ್ದಾರೆ.

 ಮಾವೋವಾದಿ ಚಳವಳಿಯ ಬಗ್ಗೆ ಕೆಲವು ವಿದ್ಯಾರ್ಥಿಗಳು ಸಹಾನುಭೂತಿ ಹೊಂದಿರುವ ಸಾಧ್ಯತೆಯಿದೆ. ಆದರೆ ಅವರ ಈ ನಿಲುವು ಹಿಂಸೆಯನ್ನು ಪ್ರಚೋದಿಸದೆ ಇದ್ದಲ್ಲಿ ಅದನ್ನು ದೇಶದ್ರೋಹದ ಪ್ರಕರಣವೆಂದು ಪರಿಗಣಿಸಲು ಸಾಧ್ಯವಿಲ್ಲವೆಂದು ಚಿದಂಬರಂ ‘ದಿ ಹಿಂದೂ’ ಪತ್ರಿಕೆಗೆ ನೀಡಿದ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.
‘‘ಪಾಕಿಸ್ತಾನ್ ಝಿಂದಾಬಾದ್ ಘೋಷಣೆಯು, ಪ್ರತಿದಿನವೂ ಕಾಶ್ಮೀರದಲ್ಲಿ ಕೇಳಿಬರುತ್ತಿದೆ. ಪಂಜಾಬ್‌ನಲ್ಲಿಯೂ ಖಲಿಸ್ತಾನ್ ಪರ ಘೋಷಣೆಗಳು ಪ್ರತಿವಾರವೂ ಕೇಳಲ್ಪಡುತ್ತಿದೆ. ತಮಿಳುನಾಡಿನಲ್ಲಿ ಎಲ್ಟಿಟಿಇಯನ್ನು ಪ್ರಶಂಸಿಸುವ ಜನರಿದ್ದಾರೆ ಹಾಗೂ ಮಾಜಿ ಪ್ರಧಾನಿ ರಾಜೀವ್‌ಗಾಂಧಿಯ ಹತ್ಯೆಯ ಹಿಂದಿರುವ ಎಲ್ಟಿಟಿಇ ಉಗ್ರರನ್ನು ವೈಭವೀಕರಿಸುವವರೂ ಇದ್ದಾರೆ. ಇದು ಖಂಡಿತವಾಗಿಯೂ ಅಸ್ವೀಕಾರಾರ್ಹ ಹಾಗೂ ಶಿಕ್ಷಾರ್ಹವಾಗಿದೆ. ಆದರೆ ಇವನ್ನು ದೇಶದ್ರೋಹವೆಂದು ಪರಿಗಣಿಸಿ, ದಂಡಿಸಲು ಸಾಧ್ಯವಿದೆಯೇ? ಎಂದವರು ಪ್ರಶ್ನಿಸಿದ್ದಾರೆ.
ಕಾನೂನಿನ ಸರಿಯಾದ ಜ್ಞಾನವಿರುವ ಯಾವುದೇ ನ್ಯಾಯವಾದಿಗೂ ಇದು ದೇಶದ್ರೋಹದ ಪ್ರಕರಣವಲ್ಲವೆಂದು ಸುಲಭವಾಗಿ ತಿಳಿಯುತ್ತದೆ ಎಂದರು.
ಇಂದು ಕೂಡಾ, ದಿಲ್ಲಿ ಪೊಲೀಸ್ ಆಯುಕ್ತರು ಕನ್ಹಯ್ಯ ಕುಮಾರ್ ವಿರುದ್ಧ ಚಾರ್ಜ್‌ಶೀಟ್ ದಾಖಲಿಸಿರುವುದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ ಕನ್ಹಯ್ಯಾ ಅವರ ಭಾಷಣವು ದೇಶದ್ರೋಹದ ಕಾನೂನಿಗೆ ಒಳಪಡುವುದಿಲ್ಲ ಎಂದರು.
 ದಾದ್ರಿಯಲ್ಲಿ ಗೋಮಾಂಸ ಸಂಗ್ರಹಿಸಿಟ್ಟ ಆರೋಪದಲ್ಲಿ ಮುಹಮ್ಮದ್ ಅಖ್ಲಾಕ್‌ನ ಹತ್ಯೆ, ಹೈದರಾಬಾದ್‌ನಲ್ಲಿ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸರಕಾರವು ಚರ್ಚೆಯನ್ನೇರ್ಪಡಿಸುವ ಮೂಲಕ ಕೋಮುಧ್ರುವೀಕರಣಕ್ಕೆ ಪ್ರಯತ್ನಿಸುತ್ತಿದೆ ಹಾಗೂ ಆಹಾರ ಮತ್ತು ಉದ್ಯೋಗದ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದೆಯೆಂದು ಚಿದಂಬಂರಂ ಆಪಾದಿಸಿದರು.
ದಾದ್ರಿ ಹಾಗೂ ಜೆಎನ್‌ಯುನಂತಹ ಪ್ರಕರಣಗಳಿಂದ ಕಾಶ್ಮೀರದ ಮೇಲೆ ಗಂಭೀರವಾದ ಪರಿಣಾಮಗಳುಂಟಾಗುತ್ತವೆಯೆಂದು ಚಿದಂಬರಂ ತಿಳಿಸಿದರು. ಆದರೆ ಸಂಸತ್ ದಾಳಿ ಪ್ರಕರಣದಲ್ಲಿ ಅಫ್ಝಲ್‌ಗುರುವಿನ ಅಪರಾಧಿತ್ವದ ಬಗ್ಗೆ ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಸಂದೇಹವಿತ್ತೆಂಬುದನ್ನು ಅವರು ನಿರಾಕರಿಸಿದರು.
ಸಂಸತ್ ದಾಳಿ ಪ್ರಕರಣವನ್ನು ಸರಿಯಾಗಿ ತೀರ್ಮಾನಿಸಲಾಗಿಲ್ಲ ಹಾಗೂ ಈ ಪ್ರಕರಣದಲ್ಲಿ ಅಫ್ಝಲ್‌ಗುರು ಶಾಮೀಲಾಗಿರುವುದನ್ನು ಸರಿಯಾಗಿ ಅಂದಾಜಿಸಲಾಗಿಲ್ಲವೆಂಬುದು ನನ್ನ ಅನಿಸಿಕೆಯಾಗಿದೆ. ಯಾರಾದರೂ ಇಂತಹ ಅಭಿಪ್ರಾಯ ಹೊಂದಿದಲ್ಲಿ, ಆತನನ್ನು ದೇಶದ್ರೋಹಿಯೆಂದು ಪರಿಗಣಿಸಲು ಸಾಧ್ಯವಿಲ್ಲ. ಆತ ಕೇವಲ ಭಿನ್ನವಾದ ಅಭಿಪ್ರಾಯವನ್ನು ಹೊಂದಿದ್ದಾನೆಂದಷ್ಟೇ ಹೇಳಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X