Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆ ಎನ್ ಯು ಪ್ರಕರಣ : ಟೀಕೆಗಳಿಂದ...

ಜೆ ಎನ್ ಯು ಪ್ರಕರಣ : ಟೀಕೆಗಳಿಂದ ಕಂಗೆಟ್ಟ ಕೇಂದ್ರ ಸರಕಾರದಿಂದ ದಿಲ್ಲಿ ಪೋಲೀಸರ ' ವಿಚಾರಣೆ ' ?

ವಾರ್ತಾಭಾರತಿವಾರ್ತಾಭಾರತಿ27 Feb 2016 1:05 PM IST
share
ಜೆ ಎನ್ ಯು ಪ್ರಕರಣ : ಟೀಕೆಗಳಿಂದ ಕಂಗೆಟ್ಟ ಕೇಂದ್ರ ಸರಕಾರದಿಂದ ದಿಲ್ಲಿ ಪೋಲೀಸರ  ವಿಚಾರಣೆ  ?

ನವದೆಹಲಿ : ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾನಿಲಯದ ವಿವಾದವನ್ನು ನಿಭಾಯಿಸಿದ ರೀತಿಗೆ ವಿಪಕ್ಷಗಳಿಂದ ಹಾಗೂನಾಗರಿಕ ಸಮಾಜದಿಂದ ತೀವ್ರ ಟೀಕೆಗೆ ಗುರಿಯಾಗಿರುವ ಕೇಂದ್ರ ಸರಕಾರ ಈಗ ಪರಿಸ್ಥಿತಿಯನ್ನು ಸುಧಾರಿಸಲು ಯತ್ನಗಳನ್ನು ಮಾಡಲಾರಂಭಿಸಿದೆ.

ಗೃಹ ಇಲಾಖೆಯ ಉನ್ನತ ಮೂಲಗಳ ಪ್ರಕಾರ ಸಂಸತ್ ಅಧಿವೇಶನ ಆರಂಭವಾಗುವ ಮುನ್ನ ದೆಹಲಿ ಪೊಲೀಸರಿಂದ ಘಟನೆಯ ವರದಿ ಕೇಳಿದ್ದ ಕೇಂದ್ರ ಇದೀಗ ಖಾಸಗಿ ಚಾನೆಲ್ ಒಂದು ಪ್ರಸಾರ ಮಾಡಿದ ವೀಡಿಯೋವನ್ನು ಪೊಲೀಸರೇಕೆ ಅವಲಂಬಿಸಿದರು ಎಂದು ಕೇಳಲಿದ್ದಾರೆಂದು ತಿಳಿದು ಬಂದಿದೆ.

ಈಗಾಗಲೇ ವರದಿಯಾಗಿರುವಂತೆ ಕಾರ್ಯಕ್ರಮದಸಂದರ್ಭ ಅಲ್ಲಿ ಪೊಲೀಸ್ ತಂಡವಿದ್ದರೂ ಕನ್ಹಯ್ಯ ವಿರುದ್ಧ ದೇಶದ್ರೋಹದ ಆರೋಪವನ್ನು ಎರಡು ದಿನಗಳ ನಂತರ ಅದು ಕೂಡ ಝೀ ನ್ಯೂಸ್ ಈ ಬಗ್ಗೆ ವರದಿ ಮಾಡಿದ ನಂತರವಷ್ಟೇ ದಾಖಲಿಸಲಾಗಿತ್ತು.

ನಿಯಮಗಳ ಪ್ರಕಾರ ಇಂತಹ ಸಂದರ್ಭಗಳಲ್ಲಿ ಪೊಲೀಸರು ತಮ್ಮೊಂದಿಗೆ ವೀಡಿಯೋ ರೆಕಾರ್ಡಿಂಗ್‌ಸಾಧನಗಳನ್ನು ಕೊಂಡೊಯ್ಯಬೇಕಾಗಿದೆ.

ಈ ಬಗ್ಗೆ ದೆಹಲಿ ಪೊಲೀಸ್ ಆಯುಕ್ತ ಬಿ ಎಸ್ ಬಸ್ಸಿಯವರನ್ನು ಸಂಪರ್ಕಿಸಿದಾಗ ‘‘ನಮ್ಮಲ್ಲಿ ದೇಶದ್ರೋಹದ ಆರೋಪಕ್ಕೆ ಬೇರೆ ಪುರಾವೆಗಳಿವೆ,’’ಎಂದು ಹೇಳಿದರು. ಪೊಲೀಸರೇಕೆ ಕ್ಯಾಮರಾ ಕೊಂಡೊಯ್ಯಿಲ್ಲವೆಂದು ಕೇಳಿದಾಗ ‘‘ದೆಹಲಿ ಪೊಲೀಸರ ಬಳಿಯಿರುವ ಕ್ಯಾಮರಾ ಹವ್ಯಾಸಿಗಳು ಉಪಯೋಗಿಸುವಂತಹದ್ದು. ಆದರೆ ಚಾನೆಲ್ಲುಗಳ ವೀಡಿಯೋಗ್ರಾಫಿಯನ್ನು ವೃತ್ತಿಪರರು ಮಾಡಿರುತ್ತಾರಾದುದರಿಂದ ಅದರ ಗುಣಮಟ್ಟ ಉತ್ತಮವಾಗಿರುತ್ತದೆ.ಈ ಘಟನೆ ಸಂಬಂಧ ವೀಡಿಯೋ ದೃಶ್ಯಾವಳಿ ಹಲವು ಪುರಾವೆಗಳಲ್ಲಿ ಒಂದು ಮಾತ್ರ,’’ ಎಂದು ಹೇಳಿದರು.

ಜೆಎನ್‌ಯು ವಿಚಾರದಲ್ಲಿ ತಪ್ಪುಗಳನ್ನುತಿದ್ದಲು ಹಾಗೂ ಈ ಪ್ರಕರಣವನ್ನು ಸರಿಯಾಗಿ ನಿಬಾಯಿಸದಿರುವುದಕ್ಕೆ ಸಂಬಂಧಿತರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು, ಎಂದು ಗೃಹ ಸಚಿವಾಲಯ ಅಧಿಕಾರಿಗಳು ಹೇಳಿದ್ದಾರೆ.

‘‘ದೆಹಲಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರಾದರೂ ಅವರೇಕೆ ಇಡೀ ಪ್ರಕರಣವನ್ನು ಸರಿಯಾಗಿ ನಿಭಾಯಿಸಿಲ್ಲವೆಂದು ಅವರನ್ನು ಪ್ರಶ್ನಿಸಲಾಗುವುದು.ಈ ಬಗ್ಗೆ ಸಂಪೂರ್ಣ ವರದಿಯನ್ನು ನಾವು ಕೇಳಿದ್ದೇವೆ,’’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘‘ಸಚಿವಾಲಯಕ್ಕೆ ವರದಿ ಕಳುಹಿಸಲಾಗಿದೆ ಹಾಗೂ ನಮ್ಮ ಕಡೆಯಿಂದ ಎಲ್ಲವೂ ಸರಿಯಾಗಿ ನಡೆದಿದೆ,’’ಎಂದು ನಾವು ತಿಳಿಸಿದ್ದೇವೆಂದು ಬಸ್ಸಿ ಹೇಳಿದ್ದಾರೆ. ಝೀ ಚಾನೆಲ್ಲಿನ ವೀಡಿಯೋವನ್ನು ಫೊರೆನ್ಸಿಕ್ ಪರೀಕ್ಷೆಗೆ ಕಳುಹಿಸಿದ್ದು ಅದರ ವರದಿ ಇನ್ನಷ್ಟೇ ಬರಬೇಕಿದೆ,’’ಎಂದೂ ಅವರು ತಿಳಿಸಿದರು.

ಝೀ ವಾಹಿನಿಯ ನ್ಯೂಸ್ ಪ್ರೊಡ್ಯೂಸರ್ ವಿಶ್ವ ದೀಪಕ್ ಈ ವಿವಾದ ಸಂಬಂಧ ಈಗಾಗಲೇ ರಾಜೀನಾಮೆ ನೀಡಿದ್ದು ಇಡೀ ಪ್ರಕರಣವನ್ನು ತಾರತಮ್ಯ ದೃಷ್ಟಿಯಂದ ಪ್ರಸಾರಮಾಡಲಾಗಿದೆ ಎಂದು ಹೇಳಿದ್ದಾರೆ.

ತಮ್ಮ ಫೇಸ್ಬುಕ್ ಪುಟದಲ್ಲಿ ಅವರು ಹೀಗೆ ಬರೆದಿದ್ದಾರೆ : ‘‘ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆಯೇ ಇರದ ವೀಡಿಯೋವನ್ನು ಇನ್ನೂ ಪ್ರಸಾರ ಮಾಡಲಾಗುತ್ತಿದೆ. ಕತ್ತಲಲ್ಲಿ ಕೇಳಿ ಬಂದ ಆ ಧ್ವನಿಗಳು ಕನ್ಹಯ್ಯಾಅಥವ ಆತನ ಗೆಳೆಯರದ್ದೆಂದು ನಾವು ಹೇಗೆ ಕಣ್ಮುಚ್ಚಿ ನಂಬಿ ಬಿಟ್ಟೆವು. ‘ಭಾರ್ತೀಯ ಕೋರ್ಟ್ ಜಿಂದಾಬಾದ್’ ಬದಲು ಅವರಿಗೆ ‘ಪಾಕಿಸ್ತಾನ್ ಜಿಂದಾಬಾದ್’ ಕೇಳಿಸಿತ್ತು. ಇದು ಕೆಲವು ಜನರ ಭವಿಷ್ಯವನ್ನು ಹಾಳು ಮಾಡಿದೆಯಲ್ಲದೆ ಅವರ ಕುಟುಂಬಗಳಿಗೆ ಆಘಾತ ನೀಡಿವೆ.’’

share
ವಾರ್ತಾಭಾರತಿ
ವಾರ್ತಾಭಾರತಿ
Next Story
X