Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ...

ಭಾರತದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡಿ, ಆರೆಸ್ಸೆಸನ್ನು ನಿಯಂತ್ರಿಸಿ: ಅಮೆರಿಕದ 34 ಸಂಸದರಿಂದ ಮೋದಿಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ28 Feb 2016 1:58 PM IST
share
ಭಾರತದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡಿ, ಆರೆಸ್ಸೆಸನ್ನು ನಿಯಂತ್ರಿಸಿ: ಅಮೆರಿಕದ 34 ಸಂಸದರಿಂದ ಮೋದಿಗೆ ಪತ್ರ

 ಹೊಸದಿಲ್ಲಿ, ಫೆ.28: ಅಮೆರಿಕದ ಕಾಂಗ್ರೆಸ್‌ನ ಮೂವತ್ತನಾಲ್ಕು ಸಂಸದರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ಹಿಂಸೆಯ ಕುರಿತು ತೀವ್ರ ವಿಷಾದವನ್ನು ಸೂಚಿಸಿದ್ದಾರೆ.

ಅಮೆರಿಕದ ಪ್ರತಿನಿಧಿಸಭೆಯ ಇಪ್ಪತ್ತಾರು ಹಾಗೂ ಸೆನೆಟ್‌ನ ಎಂಟು ಸದಸ್ಯರು ಮೋದಿಗೆಪತ್ರ ಬರೆದಿದ್ದಾರೆ. ಭಾರತದ ಕ್ರೈಸ್ತ, ಮುಸ್ಲಿಮ್ ಹಾಗೂ ಸಿಖ್ ಸಮುದಾಯದವರ ವಿರುದ್ಧ ನಡೆಯುತ್ತಿರುವ ಘಟನಾವಳಿಗಳ ಕುರಿತು ನಾವು ತುಂಬ ಆತಂಕಗೊಂಡಿದ್ದೇವೆಂದು ಪತ್ರದಲ್ಲಿ ತಿಳಿಸಿದ್ದಾರೆ. ಛತ್ತೀಸ್‌ಗಡದಲ್ಲಿ ಕ್ರೈಸ್ತ ಸಮುದಾಯದ ಮೇಲೆ ಅಪಾಯ, ಬೀಫ್ ತಿಂದರೆನ್ನುತ್ತಾ ಮುಸ್ಲಿವರ ಹತ್ಯೆಯನ್ನು ಪ್ರಸ್ತಾಪಿಸಿದ್ದಾರೆ.

ಪತ್ರದಲ್ಲಿ 2014 ಜೂನ್ 17 ರಂದು ಛತ್ತೀಸ್ಗಡದ ಬಸ್ತರ್ ಜಿಲ್ಲೆಯಲ್ಲಿ ಐವತ್ತು ಗ್ರಾಮ ಪಂಚಾಯತ್ ತಮ್ಮ ಸಮುದಾಯದಲ್ಲಿ ಎಲ್ಲ ಹಿಂದೂಯೇತರ ಧಾರ್ಮಿಕ ಪ್ರಚಾರ, ಪ್ರಾರ್ಥನೆ ಹಾಗೂ ಭಾಷಣಕ್ಕೆ ನಿರ್ಬಂಧ ಹೇರುವ ಪ್ರಸ್ತಾವವನ್ನು ಅನುಮೋದಿಸಿದೆ.

ಇದರಿಂದಾಗಿ ಕ್ರೈಸ್ತ ಅಲ್ಪಸಂಖ್ಯಾತ ಸಮುದಾಯ ಪರಿಣಾಮ ಅನುಭವಿಸಬೇಕಾಗಿ ಬಂದಿದೆ. ಈ ನಿರ್ಬಂಧದ ನಂತರ ಬಸ್ತಾರ್‌ನಲ್ಲಿ ಕ್ರೈಸ್ತರ ಮೇಲೆ ಅನೇಕ ಹಲ್ಲೆಯ ಘನೆಗಳು ನಡೆದಿವೆ ಎಂದು ಅಮೆರಿಕನ್ ಸಂಸದರು ಬೆಟ್ಟುಮಾಡಿ ತೋರಿಸಿದ್ದಾರೆ.

ಪತ್ರದ ಮೂಲಕ ಸಂಸದರು ಆರೆಸ್ಸೆಸ್‌ನಂತಹ ಸಂಘಟನೆಗಳ ಚಟುವಟಿಕೆಗಳನ್ನು ನಿಯಂತ್ರಿಸಲು ಹೆಜ್ಜೆ ಮುಂದಿಡಬೇಕೆಂದು ಮೋದಿಗೆ ವಿನಂತಿಸಿದ್ದಾರೆ. ಜೊತೆಗೆ ಕಾನೂನು ವ್ಯವಸ್ಥೆ ಸುಸೂತ್ರಗೊಳಿಸಲು ಹಾಗೂ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಹಲ್ಲೆಗಳನ್ನು ತಡೆಯಲು ಭಾರತೀಯ ಭದ್ರತಾ ಪಡೆಗಳಿಗೆ ನಿರ್ದೇಶನ ನೀಡಬೇಕೆಂದು ಸಂಸದರು ಆಗ್ರಹಿಸಿದ್ದಾರೆ.

ನಾವು ನಿಮ್ಮ ಸರಕಾರ ಈ ನಿಟ್ಟಿನಲ್ಲಿ ಕೂಡಲೇ ಹೆಜ್ಜೆ ಮುಂದಿಡುತ್ತದೆ ಎಂದೂ, ಅಲ್ಪಸಂಖ್ಯಾತರ ಮೂಲಭೂತ ಹಕ್ಕುಗಳ ರಕ್ಷಣೆ ಹಾಗೂ ಅವರ ವಿರುದ್ಧ ನಡೆದಿರುವ ಹಿಂಸೆಯ ಆರೋಪಿಗಳ ಮೇಲೆ ಕ್ರಮ ಜರಗಿಸುತ್ತೀರಿ ಎಂದೂ ಭಾವಿಸುತ್ತೇವೆ ಎಂದಿರುವ ಅಮೆರಿಕನ್ ಸಂಸದರು ಸಿಖ್ ಧರ್ಮವನ್ನು ದೊಡ್ಡ ಧರ್ಮದ ರೂಪದಲ್ಲಿ ಗುರುತಿಸದಿರುವುದಕ್ಕೂ ಖೇದ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X