Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕನ್ನರ ಉದ್ಯೋಗ ಕಸಿಯುತ್ತಿರುವ ಭಾರತ...

ಅಮೆರಿಕನ್ನರ ಉದ್ಯೋಗ ಕಸಿಯುತ್ತಿರುವ ಭಾರತ :ಮತ್ತೆ ಟ್ರಂಪ್ ಕಿರಿಕ್

ವಾರ್ತಾಭಾರತಿವಾರ್ತಾಭಾರತಿ28 Feb 2016 10:31 PM IST
share
ಅಮೆರಿಕನ್ನರ ಉದ್ಯೋಗ ಕಸಿಯುತ್ತಿರುವ ಭಾರತ :ಮತ್ತೆ ಟ್ರಂಪ್ ಕಿರಿಕ್

ಕೊಲಂಬಿಯಾ, ಫೆ.28:: ಭಾರತ ಹಾಗೂ ಚೀನಾ ದೇಶಗಳು ಅಮೆರಿಕನ್ನರ ಉದ್ಯೋಗಗಳನ್ನು ಕಸಿಯುತ್ತಿವೆಯೆಂದು ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ರಿಪಬ್ಲಿಕನ್ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಶನಿವಾರ ಮತ್ತೊಮ್ಮೆ ದೂಷಿಸಿದ್ದಾರೆ. ತಾನು ಅಮೆರಿಕದ ಅಧ್ಯಕ್ಷೀಯ ಚುನಾವಣೆಯನ್ನು ಜಯಿಸಿದಲ್ಲಿ ಆ ಉದ್ಯೋಗಗಳನ್ನು ಮರಳಿ ತರಲಿದ್ದೇನೆ ಎಂದವರು ವಾಗ್ದಾನ ಮಾಡಿದ್ದಾರೆ.

ಮಂಗಳವಾರ 11 ರಾಜ್ಯಗಳಲ್ಲಿ ನಡೆಯಲಿರುವ ಅಮೆರಿಕದ ಅಧ್ಯಕ್ಷೀಯ ಅಭ್ಯರ್ಥಿ ಆಯ್ಕೆ ಚುನಾವಣೆಯು ಸನ್ನಿಹಿತವಾಗುತ್ತಿರುವಂತೆಯೇ, ಟ್ರಂಪ್ ಈ ಹೇಳಿಕೆಯನ್ನು ನೀಡಿರುವುದು ಹೆಚ್ಚಿನ ಮಹತ್ವವನ್ನು ಪಡೆದಿದೆ.

   ಕೊಲಂಬಿಯಾದ ವಿಮಾನನಿಲ್ದಾಣ ಸಮೀಪ ಸುಮಾರು 5 ಸಾವಿರ ಮಂದಿ ಭಾಗವಹಿಸಿದ್ದ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಟ್ರಂಪ್ ತಾನು ರಾಷ್ಟ್ರಾಧ್ಯಕ್ಷನಾಗಿ ಆಯ್ಕೆಯಾದಲ್ಲಿ ಅಮೆರಿಕವನ್ನು ಮತ್ತೊಮ್ಮೆ ಮಹಾನ್ ರಾಷ್ಟ್ರವಾಗಿ ಮಾಡುವುದಾಗಿ ಘೋಷಿಸಿದರು. ಭಾರತ, ಚೀನಾ, ಜಪಾನ್, ಮೆಕ್ಸಿಕೊ ದೇಶಗಳಿಗೆ ಹೊರಗುತ್ತಿಗೆ ನೀಡಲಾಗುತ್ತಿರುವ ಲಕ್ಷಾಂತರ ಅಮೆರಿಕನ್ ಉದ್ಯೋಗಗಳನ್ನು ಮರಳಿ ತಾಯ್ನೋಡಿಗೆ ತರುವುದಾಗಿ ಅವರು ಹೇಳಿದರು. ದಕ್ಷಿಣ ಅಮೆರಿಕದಿಂದ ಅಕ್ರಮ ವಲಸೆಯನ್ನು ತಡೆಗಟ್ಟಲು ಅಮೆರಿಕ-ಮೆಕ್ಸಿಕೊ ಗಡಿಯಲ್ಲಿ ಗೋಡೆಯನ್ನು ನಿರ್ಮಿಸಲಿರುವುದಾಗಿ ಅವರು ಪ್ರಕಟಿಸಿದರು. ಐಸಿಸ್ ಭಯೋತ್ಪಾದಕ ಸಂಘಟನೆಯನ್ನು ಸದೆಬಡಿಯುವುದಾಗಿ ಹೇಳಿದ ಅವರು, ಆರೋಗ್ಯಪಾಲನೆಗೆ ಸಂಬಂಧಿಸಿ ಜಾರಿಗೊಳಿಸಲಾಗಿರುವ ಒಬಾಮ ಕೇರ್ ಯೋಜನೆಯನ್ನು ರದ್ದುಪಡಿಸಿ, ಹೊಸ ಆರೋಗ್ಯ ಕಾರ್ಯಕ್ರಮ ಜಾರಿಗೆ ತರುವುದಾಗಿ ಅವರು ತಿಳಿಸಿದರು.

 ಸೂಪರ್ ಮಂಗಳವಾರದಂದು ಅಧ್ಯಕ್ಷೀಯ ಅಭ್ಯರ್ಥಿ ಆಯ್ಕೆ ಚುನಾವಣೆ, ನಡೆಯಲಿರುವ 11 ರಾಜ್ಯಗಳ ಪೈಕಿ 10ರಲ್ಲಿ ಟ್ರಂಪ್ ಮುನ್ನಡೆ ಸಾಧಿಸಿದ್ದಾರೆಂದು ಚುನಾವಣೋತ್ತರ ಸಮೀಕ್ಷೆಗಳು ತಿಳಿಸಿದ್ದಾರೆ. ಆದರೆ ಟೆಕ್ಸಾಸ್‌ನಲ್ಲಿ ಎದುರಾಳಿ ಅಭ್ಯರ್ಥಿ ಟೆಡ್ ಕ್ರೂಝ್ ಮುನ್ನಡೆಯಲ್ಲಿದ್ದಾರೆ.

ಚೀನಾ ನಮ್ಮ ಉದ್ಯೋಗಗಳನ್ನು ಕಸಿಯುತ್ತಿದೆ, ಜಪಾನ್ ನಮ್ಮ ಉದ್ಯೋಗ ದೋಚುತ್ತಿದೆ. ಭಾರತ ನಮ್ಮ ಉದ್ಯೋಗಗಳನ್ನು ಕಸಿಯುತ್ತಿದೆ.ಇನ್ನು ಮುಂದೆ ಹೀಗಾಗುವುದಿಲ್ಲ ಸ್ನೇಹಿತರೇ...’’

share
ವಾರ್ತಾಭಾರತಿ
ವಾರ್ತಾಭಾರತಿ
Next Story
X