Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾಟ್ ಪ್ರತಿಭಟನಾಕಾರರಿಂದ ಮಹಿಳೆಯರ ಮೇಲೆ...

ಜಾಟ್ ಪ್ರತಿಭಟನಾಕಾರರಿಂದ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಟ್ರಕ್ ಚಾಲಕರು

ವಾರ್ತಾಭಾರತಿವಾರ್ತಾಭಾರತಿ28 Feb 2016 11:30 PM IST
share

 ಸೋನಿಪತ್,ಫೆ.28: ಕಳೆದ ಸೋಮವಾರ ರಾಷ್ಟ್ರ ರಾಜಧಾನಿಯಿಂದ ಕೇವಲ 50 ಕಿ.ಮೀ.ದೂರದಲ್ಲಿರುವ ಸೋನಿಪತ್ ಜಿಲ್ಲೆಯ ಮುರ್ತಾಲ್‌ನಲ್ಲಿ ನಡೆದಿತ್ತೆನ್ನಲಾದ ಮಹಿಳೆಯರ ಸಾಮೂಹಿಕ ಅತ್ಯಾಚಾರಗಳ ಪ್ರಕರಣವು ಹೊಸ ತಿರುವನ್ನು ಪಡೆದುಕೊಂಡಿದೆ. ಜಾಟ್ ಪ್ರತಿಭಟನಾಕಾರರು ಮಹಿಳೆಯರನ್ನು ಎಳೆದೊಯ್ದಿದ್ದನ್ನು ಮತ್ತು ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದನ್ನು ತಾವು ಕಣ್ಣಾರೆ ಕಂಡಿದ್ದೇವೆ ಎಂದು ಮೂವರು ಟ್ರಕ್ ಚಾಲಕರು ಹೇಳಿದ್ದಾರೆ.
 ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸುಖವಿಂದರ್ ಸಿಂಗ್, ನಿರಂಜನ ಮತ್ತು ನರೇಶ ಕುಮಾರ್ ಅವರು ಪ್ರತಿಭಟನಾಕಾರರು ತಮ್ಮ ಟ್ರಕ್‌ಗಳಿಗೆ ಬೆಂಕಿ ಹಚ್ಚಿ ತಮ್ಮನ್ನು ಥಳಿಸಿದ ಬಳಿಕ ತಾವು ಜೀವವುಳಿಸಿಕೊಳ್ಳಲು ಪೊದೆಗಳಲ್ಲಿ ಅಡಗಿಕೊಂಡಿದ್ದೆವು.ದಾಳಿಕೋರರು ಮಹಿಳೆಯರನ್ನು ವಾಹನಗಳಿಂದ ಹೊರಗೆಳೆದಿದ್ದನ್ನು ಮತ್ತು ಅವರನ್ನು ರಾಷ್ಟ್ರೀಯ ಹೆದ್ದಾರಿ ಪಕ್ಕದ ಹೊಲಗಳಿಗೆ ಒಯ್ಯುವ ಮುನ್ನ ಅವರ ಬಟ್ಟೆಗಳನ್ನು ಹರಿದು ಲೈಂಗಿಕ ಕಿರುಕುಳ ನೀಡಿದ್ದನ್ನು ತಾವು ನೋಡಿದ್ದೇವೆ ಎಂದು ಹೇಳಿದರು.
ಘಟನೆಯ ಬಗ್ಗೆ ಬಾಯಿ ಬಿಡದಂತೆ ‘‘ಮಫ್ತಿಯಲ್ಲಿರುವ ಪೊಲೀಸರು’’ತಮ್ಮ ಮೇಲೆ ಒತ್ತಡಗಳನ್ನು ಹೇರುತ್ತಿದ್ದಾರೆ ಎಂದು ಈ ಚಾಲಕರು ಆರೋಪಿಸಿದರು.

ಅತ್ತ ಘಟನೆಯ ತನಿಖೆಗಾಗಿ ಡಿಐಜಿ ಡಾ.ರಾಜಶ್ರೀ ಸಿಂಗ್ ಅವರ ನೇತೃತ್ವದಲ್ಲಿ ಸರಕಾರವು ರಚಿಸಿರುವ ಮೂವರು ಮಹಿಳಾ ಪೊಲೀಸ್ ಅಧಿಕಾರಿಗಳ ತಂಡವು ಮುರ್ತಾಲ್ ಸಮೀಪದ ಹಸನಪುರ ಗ್ರಾಮದಲ್ಲಿನ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸೋಮವಾರ ಬೆಳಗಿನ ಜಾವ ನಡೆದಿತ್ತೆನ್ನಲಾದ ಘಟನೆಯ ಬಗ್ಗೆ ಮಾಹಿತಿಗಳನ್ನು ಸಂಗ್ರಹಿಸಿದೆ. ಸಂತ್ರಸ್ತ ಮಹಿಳೆಯರಾಗಲೀ ಪ್ರತ್ಯಕ್ಷದರ್ಶಿಗಳಾಗಲೀ ವಿವರಗಳನ್ನು ನೀಡಲು ಮುಂದೆ ಬರುತ್ತಿಲ್ಲ ಎಂದು ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಹೊಲಗಳಲ್ಲಿ ಮಹಿಳೆಯರ ಕೆಲವು ಬಟ್ಟೆಗಳು ಪತ್ತೆಯಾಗಿದ್ದು,ಅವುಗಳನ್ನು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿಗಾಗಿ ಕಾಯೋಣ ಎಂದರು.
 ಪಂಜಾಬ್ ಹಾಗೂ ಜಮ್ಮು-ಕಾಶ್ಮೀರದ ಇಬ್ಬರು ಟ್ರಕ್ ಚಾಲಕರು ನಮ್ಮನ್ನು ಸಂಪರ್ಕಿಸಿದ್ದಾರಾದರೂ ಇಂತಹ ಯಾವುದೇ ಘಟನೆ ನಡೆದಿರುವುದನ್ನು ಅವರು ನಿರಾಕರಿಸಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X