Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಟಿಪಳ್ಳ, ಕೃಷ್ಣಾಪುರ, ಚೊಕ್ಕಬೆಟ್ಟು...

ಕಾಟಿಪಳ್ಳ, ಕೃಷ್ಣಾಪುರ, ಚೊಕ್ಕಬೆಟ್ಟು ಪ್ರದೇಶಗಳಿಗೆ ನೀರಿಲ್ಲ: ಡಿಸಿ ಆದೇಶಕ್ಕೆ ಮನ್ನಣೆ ನೀಡದ ಮನಪಾ ಆಯುಕ್ತರು

ವಾರ್ತಾಭಾರತಿವಾರ್ತಾಭಾರತಿ29 Feb 2016 2:25 PM IST
share
ಕಾಟಿಪಳ್ಳ, ಕೃಷ್ಣಾಪುರ, ಚೊಕ್ಕಬೆಟ್ಟು ಪ್ರದೇಶಗಳಿಗೆ ನೀರಿಲ್ಲ: ಡಿಸಿ ಆದೇಶಕ್ಕೆ ಮನ್ನಣೆ ನೀಡದ ಮನಪಾ ಆಯುಕ್ತರು

ಮಂಗಳೂರು, ಫೆ.29: ಜಿಲ್ಲೆಯ ವಿವಿಧ ಪ್ರದೇಶಗಳಿಗೆ ನೀರಿನ ಸಮಸ್ಯೆ ತಲೆ ದೋರದಂತೆ ಕ್ರಮ ಕೈಗೊಳ್ಳಿ ಎಂಬ ಜಿಲ್ಲಾಧಿಕಾರಿಗಳ ಆದೇಶದ ಹೊರತಾಗಿಯೂ ಕಾಟಿಪಳ್ಳ, ಕೃಷ್ಣಾಪುರ ಹಾಗೂ ಚೊಕ್ಕಬೆಟ್ಟು ಪ್ರದೇಶಗಳ ಜನರು ತಿಂಗಳಿಂದೀಚೆಗೆ ದಿನದಿಂದ ದಿನಕ್ಕೆ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.

ಈ ಮೂಲಕ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಪ್ರಸ್ತುತ ಜಿಲ್ಲಾಧಿಕಾರಿಯವರ ಆದೇಶಕ್ಕೆ ಮನ್ನಣೆ ನೀಡುತ್ತಿಲ್ಲ ಎಂಬ ಆರೋಪವೂ ಸ್ಥಳೀಯವಾಗಿ ಕೇಳಿಬಂದಿದೆ.

ಕಾಟಿಪಳ್ಳ, ಕೃಷ್ಣಾಪುರ ಹಾಗೂ ಚೊಕ್ಕಬೆಟ್ಟು ಈ ಪ್ರದೇಶಗಳ ವ್ಯಾಪ್ತಿಯ ಜನರಿಗೆ ಒಂದು ತಿಂಗಳಿಂದ ಕೇವಲ 14 ದಿನಗಳು ಮಾತ್ರ ನೀರು ಪೂರೈಕೆಯಾಗಿದ್ದು, 15 ದಿನಗಳ ಕಾಲ ನೀರನ್ನು ಸ್ಥಗಿತಗೊಳಿಸಲಾಗಿದೆ. ಈ ಪ್ರದೇಶಗಳಿಗೆ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಅಂದರೆ ಸುಮಾರು 2ರಿಂದ 3 ಗಂಟೆಗಳ ಕಾಲ ಮಾತ್ರ ನೀರು ಪೂರೈಕೆ ಮಾಡಲಾಗುತ್ತಿದ್ದರೂ ಅದು ಕೂಡ ಸಮರ್ಪಕವಾಗಿರದೆ ದಿನ ಬಿಟ್ಟು ದಿನಕ್ಕೆ ನೀರು ಪೂರೈಕೆ ಮಾಡಲಾಗುತ್ತಿದೆ. ಇದರಿಂದಾಗಿ ನಾಗರಿಕರು ನಿರಂತರವಾಗಿ ನೀರಿನ ಬವಣೆಯನ್ನು ಎದುರಿಸುವಂತಾಗಿದೆ.

ಈ ಬಗ್ಗೆ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಕಾರ್ಪೊರೇಟರ್ ಅಯಾಝ್, ಈ ಪ್ರದೇಶಗಳಿಗೆ ಫೆಬ್ರವರಿಯಲ್ಲಿ 14 ದಿನಗಳು ಮಾತ್ರ ನೀರಿನ ಪೂರೈಕೆಯಾಗಿದೆ. ಅದರಲ್ಲೂ ನೀರು ಪೂರೈಕೆಯಾಗುವ ಸಮಯದಲ್ಲಿ ವಿದ್ಯುತ್ ಕೈಕೊಟ್ಟರೆ ಅಂದು ನೀರಿಲ್ಲ. ಈ ಬಗ್ಗೆ ಪಂಪ್‌ಹೌಸ್‌ನವರಿಗೆ ವಿಚಾರಿಸಿದರೂ ಅವರು ಕೂಡ ಸಿದ್ಧ ಉತ್ತರವನ್ನೇ ನೀಡುತ್ತಾರೆ.

ಒಮ್ಮೆ ಕರೆಂಟ್ ಇಲ್ಲ ಅಂದರೆ, ಮತ್ತೊಮ್ಮೆ ಪೈಪ್‌ಲೈನ್‌ನಲ್ಲಿ ಲೀಕೇಜ್ ಇದೆ ಅಂತಾರೆ. ಮತ್ತೊಮ್ಮೆ ಗೇಟ್‌ವಾಲ್ ರಿಪೇರಿಯಲ್ಲಿದೆ ಎಂಬ ಸಬೂಬು ನೀಡುತ್ತಾರೆ. ಸುಮಾರು 20 ವರ್ಷಗಳ ಹಿಂದೆ ಅಳವಡಿಸಲಾಗಿದ್ದ ಪೈಪ್‌ಲೈನ್ ಪದೇ ಪದೇ ಒಡೆದು ಸೋರಿಕೆಯಾಗುತ್ತಿದ್ದರೂ ಅಧಿಕಾರಿಗಳಿಗೆ ಹೊಸ ಪೈಪ್‌ಲೈನ್ ಅಳವಡಿಸಲು ಯಾಕೆ ಸಾಧ್ಯವಾಗುತ್ತಿಲ್ಲ ಎಂದು ಅಯಾಝ್ ಪ್ರಶ್ನಿಸಿದ್ದಾರೆ.

ನೀರು ಪೂರೈಕೆಯಾಗುವ 2-3 ಗಂಟೆಗಳಲ್ಲಿ ವಿದ್ಯುತ್ ಕೈಕೊಟ್ಟರೆ ಅಂದು ಈ ಮೂರೂ ಪ್ರದೇಶಗಳಿಗೆ ನೀರಿಲ್ಲ. ಮರು ದಿನ ನೀರು ಬರುತ್ತದೆ ಎಂದು ನಾಗರಿಕರೂ ಕಾದರೂ ಇನ್ನೊಂದು ಸಮಸ್ಯೆ ಎದುರಾಗುತ್ತದೆ. ಕಳೆದ 10 ದಿನಗಳಿಂದ ಒಂದಲ್ಲ ಒಂದು ಸಮಸ್ಯೆಗಳು ಉದ್ಭವಿಸುತ್ತಲೇ ಇದೆ.

ರವಿವಾರ ನೀರು ಪೂರೈಕೆಯಾಗಿದ್ದರೂ ಇಂದು ಕುಳಾಯಿಯಲ್ಲಿ ಪೈಪ್ ಒಡೆದು ನೀರು ಸ್ಥಗಿತಗೊಂಡಿದೆ. ಈ ಬಗ್ಗೆ ಪ್ರತಿ ದಿನ ನಾಗರಿಕರು ನನ್ನಲ್ಲಿ ಬಂದು ನೀರಿನ ಸಮಸ್ಯೆಯ ಬಗ್ಗೆ ಅವಲತ್ತು ತೋಡಿಕೊಳ್ಳುತ್ತಿದ್ದಾರೆ. ಪದೇ ಪದೇ ಪುನರಾವರ್ತಿಸುವ ಇಂತಹ ಸಮಸ್ಯೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಸಾಧ್ಯವಿಲ್ಲವೇ? ಜನರು ನೀರಿಲ್ಲದೆ ಹೇಗೆ ಬದುಕಬೇಕು ಎಂದು ಅಯಾಝ್ ಪ್ರಶ್ನಿಸಿದ್ದಾರೆ.

20 ವರ್ಷಗಳಿಗೂ ಹಿಂದೆ ಅಳವಡಿಸಲಾಗಿದ್ದ ಪೈಪ್‌ಲೈನ್‌ಗಳನ್ನು ತೆರವುಗೊಳಿಸಿ ಹೊಸ ಪೈಪ್‌ಲೈನ್‌ನ್ನು ಅಳವಡಿಸಬೇಕು. ಪದೇ ಪದೇ ಗೇಟ್‌ವಾಲ್ ರಿಪೇರಿ, ಕರೆಂಟ್ ಇಲ್ಲದಿರುವುದು ಮೊದಲಾದ ಸಮಸ್ಯೆಗಳಿಗೆ ಪರ್ಯಾಯ ಕ್ರಮ ಕೈಗೊಳ್ಳಬೇಕು. ಬೆಳಗ್ಗೆ ಕೇವಲ 2 ಅಥವಾ 3 ಗಂಟೆಗಳು ಮಾತ್ರ ನೀರು ಪೂರೈಕೆಯಾಗುತ್ತಿದ್ದು, ಅದನ್ನಾದರೂ ಸಮರ್ಪಕವಾಗಿ ಪೂರೈಸಿ ಎಂದು ಸ್ಥಳೀಯ ನಾಗರಿಕರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X