Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆ

ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆ

ಅಧಿಕಾರಿಗಳ ಕಾರ್ಯವೈಖರಿಗೆ ಸದಸ್ಯರ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ29 Feb 2016 6:27 PM IST
share
ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆ

ಸುಳ್ಯ: ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಯು ಅಧ್ಯಕ್ಷ ಪ್ರಕಾಶ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಉಪಾಧ್ಯಕ್ಷೆ ಶ್ರೀಮತಿ ಮೀನಾಕ್ಷಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ಮೋಹಿನಿ ನಾಗರಾಜ್, ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ, ಇಂಜಿನಿಯರ್ ಶ್ರೀದೇವಿ ವೇದಿಕೆಯಲ್ಲಿದ್ದರು. ಸಭೆಯ ಆರಂಭದಲ್ಲೇ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರರವರು ಪಂಚಾಯತ್‌ನ ದಿನಗೂಲಿ ನೌಕರರ ಕೆಲಸ ಬದಲಾವಣೆ ಸಂದರ್ಭ ತಾರತಮ್ಯ ನೀತಿ ಅನುಸರಿಸಲಾಗಿದೆ ಎಂದು ತರಾಟೆಗೆ ತೆಗೆದುಕೊಂಡರು. ಬದಲಾವಣೆ ಮಾಡಿದ್ದು ಒಳ್ಳೆಯದೇ. ಆದರೆ ಕೆಲವರನ್ನು ಬದಲಾಯಿಸಿ ಕೆಲವರನ್ನು ಅಲ್ಲೇ ಇಟ್ಟುಕೊಂಡದ್ದು ಯಾಕೆ? ಅವರಿಂದ ಸಂಪಾದನೆ ಜಾಸ್ತಿಯಾಗುತ್ತದೆಯೇ? ಎಂದು ಪ್ರಶ್ನಿಸಿದರು. ದೂರು ಇದ್ದವರನ್ನು ಬದಲಿಸಲಾಗಿದೆ ಎಂದು ಪ್ರಕಾಶ್ ಹೆಗ್ಡೆ ಹಾಗೂ ಮುಖ್ಯಾಧಿಕಾರಿ ಉತ್ತರಿಸಿದಾಗ ದೂರುಗಳನ್ನು ನಾನು ನೀಡುತ್ತೇನೆ ಹಾಗಾದರೆ ಬದಲಿಸುತ್ತೀರಾ? ಎಂದು ಮರು ಪ್ರಶ್ನಿಸಿದರು. ಇನ್ನು ಯಾರನ್ನು ಬದಲಾಯಿಸಬೇಕು ನೀವೇ ಹೇಳಿ ಎಂದು ಅಧ್ಯಕ್ಷ ಮತ್ತು ಮುಖ್ಯಾಧಿಕಾರಿ ಕೇಳಿದಾಗ ಶಶಿಕಲಾ ಅವರನ್ನು ಬದಲಾಯಿಸಿ ಎಂದು ಎನ್.ಎ.ಹೇಳಿದರು. ಈ ಕುರಿತಂತೆ ಸ್ವಲ್ಪ ಹೊತ್ತು ಚರ್ಚೆ ನಡೆಯಿತು. ಎಲ್ಲವೂ ಗೊತ್ತುಂಟು ಆಡಳಿತದಲ್ಲಿ ಇರುವ ಕಾರಣ ಮಾತಾಡುವುದಿಲ್ಲ ಅಷ್ಟೇ ಎಂದು ಹೇಳಿ ಎನ್.ಎ. ಚರ್ಚೆಗೆ ಮಂಗಳ ಹಾಡಿದರು.

ಸಭೆಯ ಕಾರ್ಯಸೂಚಿಯಲ್ಲಿ ಸಾರ್ವಜನಿಕರು ನೀಡಿದ ಅರ್ಜಿಗಳ ಉಲ್ಲೇಖ ಇರುತ್ತದೆ ಆದರೆ ಸದಸ್ಯರು ನೀಡಿದ ಅರ್ಜಿಗಳ ಕುರಿತು ಪ್ರಸ್ತಾಪವೇ ಇಲ್ಲ ಎಂದು ಆಡಳಿತ ಪಕ್ಷದ ಸದಸ್ಯರು ಸೇರಿದಂತೆ ಹಲವರು ತರಾಟೆಗೆ ತೆಗೆದುಕೊಂಡರು. ಅರ್ಜಿ ಕೊಡುವಾಗ ಒಟ್ಟಿಗೆ 500 ರೂ ಕೊಡಬೇಕು ಹಾಗಾದರೆ ನಮ್ಮ ಅರ್ಜಿಯ ಬಗ್ಗೆಯೂ ಉಲ್ಲೇಖ ಇರುತ್ತದೆ ಎಂದು ಕೆ.ಎಸ್.ಉಮ್ಮರ್ ವ್ಯಂಗ್ಯವಾಡಿದರು. ಚೆನ್ನಕೇಶವ ದೇವಳದ ಜಾತ್ರೋತ್ಸವ ಸಂದರ್ಭದಲ್ಲಿ ರಥಬೀದಿಯಲ್ಲಿ ಬೀದಿದೀಪ ಸಮರ್ಪಕವಾಗಿ ಹಾಕದ ಬಗ್ಗೆ ಗೋಕುಲ್‌ದಾಸ್ ಪ್ರಶ್ನಿಸಿದಾಗ ಒಪ್ಪದ ಮುಖ್ಯಾಧಿಕಾರಿ ಅಲ್ಲಿ ಎಲ್ಲ ಕಡೆಯು ಬೀದಿದೀಪ ಹಾಕಲಾಗಿದೆ ಎಂದು ಉತ್ತರ ನೀಡಿದಾಗ ಗೋಕುಲ್‌ದಾಸ್ ಆಕ್ರೋಶಗೊಂಡರು. ಕೇರ್ಪಳ ರುದ್ರಭೂಮಿ ನವೀಕರಣಕ್ಕೆ ಸಮಿತಿ ಮಾಡಿದ್ದೀರಿ. ಆದರೆ ಯಾವುದೇ ಸಭೆ ಕರೆದಿಲ್ಲ ಎಂದು ಗೋಕುಲ್‌ದಾಸ್ ಹೇಳಿದರು. ಈ ವಾರವೇ ಸಭೆ ಕರೆಯುವುದಾಗಿ ಪ್ರಕಾಶ್ ಹೆಗ್ಡೆ ಭರವಸೆ ನೀಡಿದರು. ಮೀನು ಮಾರುಕಟ್ಟೆ ಅಧಿಕ ಮೊತ್ತಕ್ಕೆ ಏಲಂ ಆಗಿದೆ. ಆದರೆ ಮೀನುಗಳಿಗೂ ಜಾಸ್ತಿ ರೇಟ್ ಆಗಿ ಜನರಿಗೆ ಹೊರೆಯಾಗಬಹುದಲ್ಲವೇ ಎಂದು ಪ್ರಶ್ನಿಸಿದ ಕೆ.ಎಂ.ಮುಸ್ತಫ ನಮಗೂ ಆದಾಯ ಬರುವ ಹಾಗೆ ಜನರಿಗೂ ಹೊರೆಯಾಗದ ಹಾಗೆ ತೀರ್ಮಾನ ಕೈಗೊಳ್ಳಬೇಕಿತ್ತು ಎಂದು ಹೇಳಿದರು. ಏಲಂ ಪಡೆದುಕೊಂಡವರು ಒಂದೇ ಕಂತಿನಲ್ಲಿ ಹಣ ಪಾವತಿಸುವ ಹಾಗೆ ನೋಡಿಕೊಳ್ಳಬೇಕು ಎಂದು ಗೋಕುಲ್‌ದಾಸ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X