Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿವಿಗಳಲ್ಲಿ ವೌಲ್ಯಾಧಾರಿತ ಶಿಕ್ಷಣ...

ವಿವಿಗಳಲ್ಲಿ ವೌಲ್ಯಾಧಾರಿತ ಶಿಕ್ಷಣ ದೊರೆಯಲಿ: ಡಾ. ಕಾಪು ಮುಹಮ್ಮದ್

ಸೇಲಂನ ಪೆರಿಯಾರ್ ವಿವಿ - ಲಂಡನ್ ಅಮೆರಿಕನ್ ಸಿಟಿ ಎಜುಕೇಶನಲ್ ಟ್ರಸ್ ಒಪ್ಪಂದ

ವಾರ್ತಾಭಾರತಿವಾರ್ತಾಭಾರತಿ29 Feb 2016 7:40 PM IST
share
ವಿವಿಗಳಲ್ಲಿ ವೌಲ್ಯಾಧಾರಿತ ಶಿಕ್ಷಣ ದೊರೆಯಲಿ: ಡಾ. ಕಾಪು ಮುಹಮ್ಮದ್

 ಫೆ. 29: ಭಾರತೀಯ ವಿಶ್ವವಿದ್ಯಾನಿಲಯಗಳು ಗುಣಮಟ್ಟದ ಶಿಕ್ಷಣದ ಜತೆಗೆ ವೌಲ್ಯಾಧಾರಿತ ಶಿಕ್ಷಣವನ್ನು ನೀಡುವಂತಾಗಬೇಕು ಎಂದು ಬೆಂಗಳೂರಿನ ಲಂಡನ್ ಅಮೆರಿಕನ್ ಸಿಟಿ ಎಜುಕೇಶನ್ ಟ್ರಸ್ಟ್‌ನ ಡೀನ್ ಮತ್ತು ಆಡಳಿತ ನಿರ್ದೇಶಕ ಡಾ. ಕಾಪು ಮುಹಮ್ಮದ್ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ತಮಿಳುನಾಡಿನ ಸೇಲಂನ ಪೆರಿಯಾರ್ ವಿಶ್ವವಿದ್ಯಾನಿಲಯದ ಪದವಿ ಕೋರ್ಸುಗಳಿಗೆ ಲಂಡನ್ ಅಮೆರಿಕನ್ ಸಿಟಿ ಎಜುಕೇಶನಲ್ ಟ್ರಸ್ಟ್‌ನಲ್ಲಿ ಅವಕಾಶ ಒದಗಿಸುವ ನಿಟ್ಟಿನಲ್ಲಿ ಎಂಒಯುಗೆ (ತಿಳುವಳಿಕಾ ಒಪ್ಪಂದ) ಸಹಿ ಹಾಕುವ ಕಾರ್ಯಕ್ರಮದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಭಾರತದ ಕೆಲ ವಿಶ್ವವಿದ್ಯಾನಿಲಯಗಳಲ್ಲಿ ಮಾತ್ರವೇ ವೌಲ್ಯಾಧಾರಿತ ಶಿಕ್ಷಣವನ್ನು ನೀಡಲಾಗುತ್ತಿದೆ.

ವೌಲ್ಯಾಧಾರಿತ ಶಿಕ್ಷಣವು ಜ್ಞಾನ ಆಧಾರಿತ ಶಿಕ್ಷಣ, ಎಲ್ಲಾ ಪದವಿ ಕಾರ್ಯಕ್ರಮಗಳಲ್ಲಿ ಇಂಟರ್ನ್‌ಶಿಪ್ ಜಾರಿಗೊಳಿಸುವುದು, ಉದ್ಯೋಗ ವೌಲ್ಯಗಳು, ಮಾರುಕಟ್ಟೆಯಲ್ಲಿನ ಅತ್ಯುತ್ತಮ ಉದ್ಯೋಗಾವಕಾಶಳು, ಅಧ್ಯಯನ ಪ್ರವಾಸ, ತಂತ್ರಜ್ಞಾನದ ಬಳಕೆ, ಇ- ತರಗತಿ ಅಧಿವೇಶನಗಳು, ಗುಣಮಟ್ಟದ ಬೋಧನಾ ಕಲೆ, ನೈಜ ವೌಲ್ಯಾಧಾರಿತ ಸಂಶೋಧನೆಯ ಅನುಷ್ಠಾನ ಮತ್ತು ಅಭಿವೃದ್ಧಿ ಕಾರ್ಯ ಮೊದಲಾದವುಗಳನ್ನು ಒಳಗೊಂಡಿರಬೇಕು ಎಂದವರು ಹೇಳಿದರು.

ವಿದ್ಯಾರ್ಥಿಗಳಲ್ಲಿನ ಸೃಜನಾತ್ಮಕ ಸಾಮರ್ಥ್ಯಗಳು, ಕೌಶಲ್ಯಗಳನ್ನು ಉಪಯೋಗಿಸಿಕೊಂಡು ಅವರ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವುದು ಮತ್ತು ಉದ್ದಿಮೆ ಹಾಗೂ ಅವುಗಳ ಅಭಿವೃದ್ದಿಗೆ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕವಾಗಿ ರೂಪಿಸುವಂತಾಗಬೇಕು ಎಂದು ಅವರು ಅಭಿಪ್ರಾಯಿಸಿದರು.

ಎಂಒಯುಗೆ ಸೇಲಂನ ಪೆರಿಯಾರ್ ವಿಶ್ವವಿದ್ಯಾನಿಲಯದ ಪರವಾಗಿ ಉಪ ಕುಲಪತಿ ಡಾ. ಸಿ. ಸ್ವಾಮಿನಾಥನ್ ಸಹಿ ಹಾಕಿದ್ದು, ಈ ಸಂದರ್ಭ ಡಾ. ಟ್ರಸ್ಟ್‌ನ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಪೌಲ್ಸನ್ ಮ್ಯಾಥ್ಯೂ ಉಪಸ್ಥಿತರಿದ್ದರು.

ತಮಿಳುನಾಡು ಸರಕಾರಿ ವಿಶ್ವವಿದ್ಯಾನಿಲಯವಾಗಿರುವ ಪೆರಿಯಾರ್ ವಿಶ್ವವಿದ್ಯಾನಿಲಯ ‘ನ್ಯಾಕ್’ನಿಂದ ‘ಎ’ ಗ್ರೇಡ್ ಪಡೆದಿದೆ. ವಿಶ್ವವಿದ್ಯಾನಿಲಯ ಪದವಿಗಳು, ಕೇಂದ್ರ, ರಾಜ್ಯ ಸರಕಾರಗಳು ಮತ್ತು ಖಾಸಗಿ ವಲಯಗಳ ಉದ್ಯೋಗಕ್ಕಾಗಿ ಯುಜಿಸಿಯಿಂದ ಪರಿಗಣಿಸಲ್ಪಡುತ್ತವೆ. ಇಲ್ಲಿನ ವಿದ್ಯಾರ್ಥಿಗಳು ಎನ್‌ಇಟಿ ಮತ್ತು ಎಸ್‌ಎಲ್‌ಇಟಿ ಪರೀಕ್ಷೆಗಳು ಮತ್ತು ಯುಪಿಎಸ್‌ಸಿ,/ಟಿಎನ್‌ಪಿಎಸ್‌ಸಿ/ಆರ್‌ಆರ್‌ಬಿ/ ಬ್ಯಾಂಕ್ ಪರೀಕ್ಷೆಗಳು ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಅರ್ಹರಾಗಿರುತ್ತಾರೆ.

ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯರಿಗಾಗಿ ವಿಶೇಷ ಬ್ಯಾಚ್‌ಗಳಿದ್ದು, ಪೆರಿಯಾರ್ ಯುನಿವರ್ಸಿಟಿ ಪದವಿ ಕಾರ್ಯಕ್ರಮಗಳ ದಾಖಲಾತಿಗಾಗಿ ದೂ.ಸಂ. 080- 25522256/57 ಅಥವಾ ಮೊಬೈಲ್ 9620582988/9620583477 ನ್ನು ಸಂಪರ್ಕಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X