Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಷ್ಯಾ ಕಪ್: ಯುಎಇ ವಿರುದ್ಧ ಪಾಕ್‌ಗೆ ಜಯ

ಏಷ್ಯಾ ಕಪ್: ಯುಎಇ ವಿರುದ್ಧ ಪಾಕ್‌ಗೆ ಜಯ

ವಾರ್ತಾಭಾರತಿವಾರ್ತಾಭಾರತಿ29 Feb 2016 8:39 PM IST
share
ಏಷ್ಯಾ ಕಪ್: ಯುಎಇ ವಿರುದ್ಧ ಪಾಕ್‌ಗೆ ಜಯ

ಮೀರ್ಪುರ, ಫೆ.29: ಪಾಕಿಸ್ತಾನ ತಂಡ ಇಲ್ಲಿ ನಡೆದ ಏಷ್ಯಾಕಪ್ ಟ್ವೆಂಟಿ-20 ಟೂರ್ನಿಯ 6ನೆ ಪಂದ್ಯದಲ್ಲಿ ಯುಎಇ ವಿರುದ್ಧ ಏಳು ವಿಕೆಟ್‌ಗಳ ಜಯ ಗಳಿಸಿದೆ. 

ಶೇರ್ ಬಾಂಗ್ಲಾ ನ್ಯಾಶನಲ್ ಸ್ಟೇಡಿಯಂನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಗೆಲುವಿಗೆ 130 ರನ್‌ಗಳ ಸವಾಲನ್ನು ಪಡೆದ ಪಾಕಿಸ್ತಾನ ತಂಡ ಇನ್ನೂ 8  ಎಸೆತಗಳು ಬಾಕಿ ಇರುವಾಗಲೇ 3 ವಿಕೆಟ್ ನಷ್ಟದಲ್ಲಿ 131 ರನ್ ಗಳಿಸಿ ಗೆಲುವಿನ ದಡ ಸೇರಿತು.

 ಉಮರ‍್ ಅಕ್ಮಲ್‌ ಔಟಾಗದೆ 50 ರನ್(78ನಿ, 46ಎ, 2ಬೌ,3ಸಿ) ಮತ್ತು ಶುಐಬ್ ಮಲಿಕ್ ಔಟಾಗದೆ 63 ರನ್(69ನಿ, 49ಎ, 7ಬೌ, 3ಸಿ) ಗಳಿಸಿ ತಂಡದ ಗೆಲುವಿಗೆ ದೊಡ್ಡ ಕೊಡುಗೆ ನೀಡಿದರು.
ಯುಎಇ ತಂಡದ ನಾಯಕ ಅಮ್ಜದ್ ಜಾವೇದ್ ಪಾಕ್‌ನ ಅಗ್ರ ಸರದಿಯ ಮೂವರು ದಾಂಡಿಗರಿಗೆ ಪೆವಿಲಿಯನ್ ಹಾದಿ ತೋರಿಸಿದ್ದರು. 3.1 ಓವರ್‌ಗಳಲ್ಲಿ 17 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡ ಪಾಕ್‌ನ ಬ್ಯಾಟಿಂಗ್‌ನ್ನು ಮುನ್ನಡೆಸಿದ ಅಕ್ಮಲ್ ಮತ್ತು ಮಲಿಕ್ ನಾಲ್ಕನೆ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 114 ರನ್ ಸೇರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಯುಎಇ ತಂಡ ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡು ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 129 ರನ್ ಗಳಿಸಿತ್ತು.

ಯುಎಇ ತಂಡ ಸತತ ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಇದರೊಂದಿಗೆ ಏಷ್ಯಾಕಪ್‌ನಲ್ಲಿ ತನ್ನ ಅಭಿಯಾನ ಕೊನೆಗೊಳಿಸಿದೆ.

ಸೋಮವಾರ ಇಲ್ಲಿನ ಶೇರ್-ಇ-ಬಾಂಗ್ಲಾ ನ್ಯಾಶನಲ್ ಸ್ಟೇಡಿಯಂನಲ್ಲಿ  ಟಾಸ್ ಜಯಿಸಿದ ಯುಎಇ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಪಾಕ್‌ನ ವೇಗದ ಬೌಲರ್‌ಗಳಾದ ಮುಹಮ್ಮದ್ ಆಮಿರ್(2-6), ಮುಹಮ್ಮದ್ ಇರ್ಫಾನ್(2-30), ಮುಹಮ್ಮದ್ ಸಮಿ(1-28) ದಾಳಿಗೆ ಸಿಲುಕಿದ ಯುಎಇ ತಂಡ 4ನೆ ಓವರ್‌ನಲ್ಲಿ 12 ರನ್ ಗಳಿಸುವಷ್ಟರಲ್ಲಿ 3 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಶೈಮನ್ ಅನ್ವರ್(46), ಮುಹಮ್ಮದ್ ಉಸ್ಮಾನ್(21), ಅಮ್ಜದ್ ಜಾವೇದ್(ಔಟಾಗದೆ 27) ಹಾಗೂ ಮುಹಮ್ಮದ್ ನವೀದ್(ಔಟಾಗದೆ 10) ಕೊಡುಗೆ ನೆರವಿನಿಂದ ಯುಎಇ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 129 ರನ್ ಗಳಿಸಿತು.

4ನೆ ವಿಕೆಟ್‌ಗೆ 29 ರನ್ ಸೇರಿಸಿದ ಅನ್ವರ್ ಹಾಗೂ ಉಸ್ಮಾನ್ ಮುಶ್ತಾಕ್(9) ತಂಡವನ್ನು ಆಧರಿಸಿದರು. ಆದರೆ, ಈ ಜೋಡಿಯನ್ನು ಶಾಹಿದ್ ಅಫ್ರಿದಿ ಬೇರ್ಪಡಿಸಿದರು.

 ಐದನೆ ವಿಕೆಟ್‌ಗೆ ಮುಹಮ್ಮದ್ ಉಸ್ಮಾನ್(21) ಅವರೊಂದಿಗೆ 30 ರನ್ ಸೇರಿಸಿದ ಅನ್ವರ್ ಮತ್ತೊಂದು ಜೊತೆಯಾಟದಲ್ಲಿ ಪಾಲ್ಗೊಂಡರು. 46 ರನ್ ಗಳಿಸಿದ್ದ ಅನ್ವರ್ ವೇಗಿ ಇರ್ಫಾನ್‌ಗೆ ವಿಕೆಟ್ ಒಪ್ಪಿಸಿದರು.

6ನೆ ವಿಕೆಟ್‌ಗೆ 46 ರನ್ ಜೊತೆಯಾಟ ನಡೆಸಿದ ಮುಹಮ್ಮದ್ ಉಸ್ಮಾನ್(21) ಹಾಗೂ ಅಮ್ಜ್ಜದ್ ಜಾವೇದ್(ಔಟಾಗದೆ 27) ತಂಡದ ಸ್ಕೋರನ್ನು 100ರ ಗಡಿ ದಾಟಿಸಿದರು.

ಪಾಕ್ ಪರ ಮುಹಮ್ಮದ್ ಆಮಿರ್(2-6) ಹಾಗೂ ಮುಹಮ್ಮದ್ ಇರ್ಫಾನ್(2-30) ತಲಾ ಎರಡು ವಿಕೆಟ್ ಉರುಳಿಸಿದರು. ಮುಹಮ್ಮದ್ ಸಮಿ(1-28) ಹಾಗೂ ಶಾಹಿದ ಅಫ್ರಿದಿ(1-24) ತಲಾ ಒಂದು ವಿಕೆಟ್ ಕಬಳಿಸಿದರು

ಸಂಕ್ಷಿಪ್ತ ಸ್ಕೋರ್ ವಿವರ

ಯುಎಇ 20 ಓವರ್‌ಗಳಲ್ಲಿ 129/6( ಅನ್ವರ್ 46, ಜಾವೇದ್ ಔಟಾಗದೆ 27; ಆಮಿರ್ 2-6, ಇರ್ಫಾನ್ 2-30).

ಪಾಕಿಸ್ತಾನ 18.4 ಓವರ್‌ಗಳಲ್ಲಿ 131/3( ಮಲಿಕ್ ಔಟಾಗದೆ 63, ಅಕ್ಮಲ್ ಔಟಾಗದೆ 50, ; ಜಾವೇದ್ 3-36).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X